AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !

ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಭೇಟಿ ಹಿನ್ನೆಲೆ; ರಸ್ತೆ ಬದಿಯಲ್ಲಿದ್ದ ಮಸೀದಿಗೆ ಕೇಸರಿ ಬಣ್ಣದಿಂದ ಪೇಂಟಿಂಗ್​​ !
ಹೊಸದಾಗಿ ಬಣ್ಣ ಬಳಿದ ಮಸೀದಿ
TV9 Web
| Edited By: |

Updated on: Dec 08, 2021 | 7:35 AM

Share

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋಡಿ ಡಿಸೆಂಬರ್​ 13-14ರಂದು ಉತ್ತರ ಪ್ರದೇಶದ ವಾರಾಣಸಿಗೆ ಭೇಟಿ ನೀಡಲಿದ್ದು, ಅಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡುವರು. 2022ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಹಲವು ಕಡೆ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆಯಾಗುತ್ತಿದೆ. ನಿನ್ನೆಯಷ್ಟೇ ಅವರು ಗೋರಖ್​ಪುರಕ್ಕೆ ಭೇಟಿ ನೀಡಿ, ಮೂರು ಬೃಹತ್​ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಇದೀಗ ಡಿ.13ರಂದು ಅವರು ವಾರಾಣಸಿಗೆ ಭೇಟಿ ಕೊಡುತ್ತಿರುವ ಹಿನ್ನೆಲೆಯಲ್ಲಿ, ಕಾಶಿ ವಿಶ್ವನಾಥ ದೇವಾಲಯಕ್ಕೆ ಹೋಗುವ ರಸ್ತೆಯಲ್ಲಿರುವ ಒಂದು ಮಸೀದಿಗೆ ಸ್ಥಳೀಯ ಆಡಳಿತಾಧಿಕಾರಿಗಳು ಕೇಸರಿ ಬಣ್ಣ ಹೊಡೆಸಿದ್ದಾರೆ ಎಂದು ಮಸೀದಿಯ ಸಮಿತಿ ಸದಸ್ಯರು ಹೇಳಿದ್ದಾಗಿ ವರದಿಯಾಗಿದೆ. 

ಆದರೆ ಸ್ಥಳೀಯ ಆಡಳಿತಾಧಿಕಾರಿಗಳು ಹೇಳಿದ್ದು ಬೇರೆ. ಈ ರಸ್ತೆಯಲ್ಲಿರುವ ಎಲ್ಲ ಹಳೇ ಕಟ್ಟಡಗಳಿಗೂ ಬಣ್ಣ ಬಳಿಯಲಾಗಿದೆ. ಎಲ್ಲದಕ್ಕೂ ಒಂದೇ ರೀತಯ ಬಣ್ಣವನ್ನು ಹೊಡೆಸಲಾಗಿದೆ. ಅದು ತಿಳಿ ಗುಲಾಬಿಯೇ ಹೊರತು ಕೇಸರಿಯಲ್ಲ ಎಂದಿದ್ದಾರೆ. ಆದರೆ ಅದು ಕೇಸರಿ ಬಣ್ಣವೇ ಹೌದು ಎಂದು ಸ್ಥಳೀಯ ಮುಸ್ಲಿಂ ಸಮುದಾಯ ಕ್ಯಾತೆ ತೆಗೆದ ಬಳಿಕ ಅದರ ಮೇಲೆ ಮತ್ತೆ ಬಿಳಿ ಬಣ್ಣ ಬಳಿಯಲಾಗಿದೆ.  ಈ ಮಸೀದಿಯ ಹೆಸರು ಅಂಜುಮಾನ್​ ಇಂಟೆಝಮಿಯಾ ಎಂದಾಗಿದ್ದು, ಅದರ ಸಮಿತಿ ಸದಸ್ಯ ಮೊಹಮ್ಮದ್​ ಎಜಾಝ್​ ಇಸ್ಲಾಹಿ ಹೇಳುವ ಪ್ರಕಾರ ಇದು ಮೊದಲು ಬಿಳಿ ಬಣ್ಣದಲ್ಲೇ ಇತ್ತು. ನಂತರ ಕೇಸರಿ ಬಣ್ಣ ಬಡಿಯಲಾಯಿತು. ನಮ್ಮ ಸಮಿತಿಯನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vastu Tips : ವಾಸ್ತು ಪ್ರಕಾರ ಮನೆಯ ಬಳಿ ಅಪ್ಪಿತಪ್ಪಿಯೂ ಈ ನಾಲ್ಕು ಗಿಡ ಹಾಕಬೇಡಿ, ಅದರಿಂದ ಹಾನಿಯೇ ಹೆಚ್ಚು

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ