AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur violence: ‘ಮಣಿಪುರ ಫೈಲ್ಸ್’ ಹೆಸರಿನ ಸಿನಿಮಾ ಮಾಡಬೇಕು: ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ "ಸಾಮ್ನಾ" ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ "ದಿ ಮಣಿಪುರ ಫೈಲ್ಸ್ ​​" ಸಿನಿಮಾ ಮಾಡಬಹುದು ಎಂದು ವರದಿ ಮಾಡಿದೆ.

Manipur violence: ‘ಮಣಿಪುರ ಫೈಲ್ಸ್’ ಹೆಸರಿನ ಸಿನಿಮಾ ಮಾಡಬೇಕು: ಶಿವಸೇನೆ
ಉದ್ಧವ್ ಠಾಕ್ರೆ
ಅಕ್ಷಯ್​ ಪಲ್ಲಮಜಲು​​
|

Updated on:Jul 22, 2023 | 5:41 PM

Share

ಮುಂಬೈ,ಜು.22: ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಇದರ ಮಧ್ಯೆ ರಾಜಕೀಯ ವಾದ-ವಿವಾದಗಳ ಮೇಲಾಟ ಹೆಚ್ಚಾಗಿದೆ.  ರಾಜ್ಯದಲ್ಲಿ ಇರುವ ಬಿಜೆಪಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿದೆ. ಇದೀಗ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ “ಸಾಮ್ನಾ” ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಹಾಗಾಗಿ “ದಿ ಮಣಿಪುರ ಫೈಲ್ಸ್ ​​” ಸಿನಿಮಾ ಮಾಡಬಹುದು ಎಂದು ವರದಿ ಮಾಡಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ  ವ್ಯಕ್ತಪಡಿಸಲಾಗಿದೆ.

ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಎನ್​​ ಬಿರೇನ್​​ ಸಿಂಗ್ ಅವರ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯ ಕಾಶ್ಮೀರಕ್ಕಿಂತ ಕೆಟ್ಟದಾಗಿ ಎಂದು ಹೇಳಿದ್ದಾರೆ. 2022ರಲ್ಲಿ ಆಗಸ್ಟ್​ 5ರಂದು “ಸಾಮ್ನಾ” ಪ್ರತಿಕೆಯ ಸಂಪಾದಕರಾಗಿ ಉದ್ಧವ್ ಠಾಕ್ರೆ ನೇಮಕಗೊಂಡರು. ಅವರು ಇದೀಗ ಈ ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಬರೆದಿದ್ದಾರೆ.

ಮೇ, 4ರಂದು ಚಿತ್ರಿಸಲಾಗಿದ್ದ, ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋವನ್ನು ಇತ್ತಿಚೇಗೆ ವೈರಲ್​ ಮಾಡಲಾಗಿತ್ತು. ಇದರಲ್ಲಿ ಪುರುಷರ ಗುಂಪೊಂದು ಇಬ್ಬರು ಸ್ತ್ರೀಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಮಾಡಲಾಗಿದೆ. ಈ ಬಗ್ಗೆ ದೇಶದ್ಯಾಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದೇಶದ ಪ್ರಧಾನಿ ಸೇರಿದಂತೆ, ಸುಪ್ರೀಂ ಕೋರ್ಟಿನ ಮುಖ್ಯನ್ಯಾಯ ಮೂರ್ತಿ ಡಿ.ವೈ ಚಂದ್ರಚೂಡ್ ಅವರು​​​ ಕೂಡ ಈ ಕೃತ್ಯವನ್ನು ಖಂಡಿಸಿದ್ದರು.

ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ

ಮಣಿಪುರದಲ್ಲಿ ನಡೆದ ಈ ಘಟನೆ ಎಲ್ಲರನ್ನೂ ತಲೆತಗ್ಗಿಸುವಂತೆ ಮಾಡಿದೆ, ಎಲ್ಲ ರಾಜ್ಯ ಸರ್ಕಾರಗಳು ಮಹಿಳೆಯ ಸುರಕ್ಷತೆ ಬಗ್ಗೆ ಎಚ್ಚರವಹಿಸಬೇಕು. ತಪ್ಪಿಸ್ಥಿರನ್ನು ಯಾವುದೇ ಕಾರಣಕ್ಕೂ ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇನ್ನೂ ಈ ಸಾಮ್ನಾ ಪ್ರತಿಕೆಯಲ್ಲಿ ಇತ್ತೀಚಿನ ದಿನಗಳಲ್ಲಿ, ‘ತಾಷ್ಕೆಂಟ್ ಫೈಲ್ಸ್’, ‘ದಿ ಕೇರಳ ಸ್ಟೋರಿ’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಇದರಂತೆ ದಿ ಮಣಿಪುರ ಫೈಲ್ಸ್ ಮಾಡಬಹುದು ಎಂದು ಇದರಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Sat, 22 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು