AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Muslim woman: ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲಿಂ ಮಹಿಳೆಗೆ ಕೊಲೆ ಬೆದರಿಕೆ

ತನ್ನ ನಿವಾಸದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಕ್ಕಾಗಿ ಬಿಜೆಪಿ ನಾಯಕಿ ರೂಬಿ ಆಸಿಫ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದು ಅವರಿಗೆ ಭದ್ರತೆಯನ್ನು ನೀಡಲಾಗಿದೆ. ಜೊತೆಗೆ ಗಣೇಶ ವಿಸರ್ಜನೆಗೆ ಮಾಡಲು ಕೂಡ ಭದ್ರತೆಯನ್ನು ನೀಡಲಾಗಿದೆ.

Muslim woman: ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲಿಂ ಮಹಿಳೆಗೆ ಕೊಲೆ ಬೆದರಿಕೆ
A Muslim woman who installed a Ganesha idol in her house received death threats
TV9 Web
| Edited By: |

Updated on:Sep 07, 2022 | 6:23 PM

Share

ಅಲಿಗಢ: ಉತ್ತರ ಪ್ರದೇಶದ ಅಲಿಘರ್‌ನಲ್ಲಿರುವ ತನ್ನ ನಿವಾಸದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಕ್ಕಾಗಿ ಬಿಜೆಪಿ ನಾಯಕಿ ರೂಬಿ ಆಸಿಫ್ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದು ಅವರಿಗೆ ಭದ್ರತೆಯನ್ನು ನೀಡಲಾಗಿದೆ. ಜೊತೆಗೆ ಗಣೇಶ ವಿಸರ್ಜನೆಗೆ ಮಾಡಲು ಕೂಡ ಭದ್ರತೆಯನ್ನು ನೀಡಲಾಗಿದೆ. ರೂಬಿ ಆಸಿಫ್ ಖಾನ್​ನ ಇಬ್ಬರು ಸಹೋದರಿಯರು ಮತ್ತು ಆಕೆಯ ಪತಿ ಆಸಿಫ್ ಜೊತೆಗಿದ್ದರು. ತನ್ನ ನಿವಾಸದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿದಂದಿನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ನಾನು ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದ್ದಾರೆ. ವಿಗ್ರಹವನ್ನು ಪೂಜಿಸಿದ್ದಕ್ಕಾಗಿ ಆಕೆಯ ವಿರುದ್ಧ ಫತ್ವಾ ಕೂಡ ಹೊರಡಿಸಲಾಗಿದೆ.

ಎಎನ್‌ಐ ಜೊತೆ ಮಾತನಾಡಿದ ಅವರು, ನಾನು ನರೋರಾ ಘಾಟ್‌ನಲ್ಲಿ ಗಣೇಶನ ವಿಗ್ರಹವನ್ನು ವಿಸರ್ಜನೆಗೆ ತೆಗೆದುಕೊಂಡು ಹೋಗುತ್ತಿದ್ದೇನೆ. ನಾನು ಆಗಸ್ಟ್ 31ರಂದು ನನ್ನ ನಿವಾಸದಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಿದೆ. ಅಂದಿನಿಂದ ಈ ಫತ್ವಾ ಹೊರಡಿಸಲಾಗಿದೆ. ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರಿಂದ ನಾನು ಹಿಂದೂ ಆಗಿದ್ದೇನೆ ಎಂದು ಮೌಲಾನರು (ಮೌಲ್ವಿಗಳು) ಹೇಳುತ್ತಿದ್ದಾರೆ. ನನ್ನನ್ನು ಇಸ್ಲಾಂ ಧರ್ಮದಿಂದ ಬಹಿಷ್ಕರಿಸುವುದಾಗಿ ಮತ್ತು ನನ್ನ ಕುಟುಂಬವನ್ನು ಜೀವಂತವಾಗಿ ಸುಡುವುದಾಗಿ ನನಗೆ ಬೆದರಿಕೆಗಳು ಬರುತ್ತಿವೆ. ನಾನು ಹೊರಗೆ ಹೋದಾಗ, ಜನರು ನನ್ನನ್ನು ಹಿಂದೂ ಎಂದು ಕರೆಯುತ್ತಾರೆ. ನಾನು ವಿಗ್ರಹವನ್ನು ಪ್ರತಿಷ್ಠಾಪಿಸಿದ ರೀತಿಯಲ್ಲಿಯೇ ನಾನು ಶ್ರದ್ಧೆಯಿಂದ ವಿಸರ್ಜನೆ ಮಾಡುತ್ತೇನೆ.

ಮೌಲ್ವಿಗಳು ಆಕೆಯ ವಿರುದ್ಧ ಫತ್ವಾ ಹೊರಡಿಸಿ ಇಸ್ಲಾಂ ಧರ್ಮದಿಂದ ಬಹಿಷ್ಕಾರ ಹಾಕುವಂತೆ ಕರೆ ನೀಡಿದ್ದಾರೆ.”ನಾನು ಭದ್ರತೆಗಾಗಿ ಜಿಲ್ಲಾಡಳಿತವನ್ನು ಕೇಳಿದ್ದೇನೆ ಆದರೆ ಇಲ್ಲಿಯವರೆಗೆ ನನಗೆ ಭದ್ರತೆಯನ್ನು ಒದಗಿಸಿಲ್ಲ ಆದರೆ ಪ್ರತಿದಿನ ಎರಡು ಅಥವಾ ಮೂರು ಗಂಟೆಗಳ ಕಾಲ ಪೊಲೀಸ್ ಪೇದೆ ನನ್ನ ಮನೆಗೆ ಬರುತ್ತಾರೆ. ಇಂದು, ನನ್ನ ಕುಟುಂಬದ ಭದ್ರತೆಗಾಗಿ ಪೊಲೀಸ್ ಠಾಣೆಯು ಇಬ್ಬರು ಅಧಿಕಾರಿಗಳನ್ನು ಕಳುಹಿಸಿದೆ,ಎಂದು ಅವರು ಹೇಳಿದರು. ತಾನು ಫತ್ವಾಗಳಿಗೆ ಹೆದರುವುದಿಲ್ಲ ಎಂದು ಹೇಳುವ ಮೂಲಕ ಗಣೇಶನ ವಿಗ್ರಹವನ್ನು ಪೂಜಿಸುವುದು ಮತ್ತು ಪ್ರತಿಷ್ಠಾಪಿಸುವುದು ಮುಂದುವರಿಸುವುದಾಗಿ ಅವರು ಹೇಳಿದರು.

Published On - 6:22 pm, Wed, 7 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ