AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ

ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದ ಸಮಯದಲ್ಲೇ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ
ಕಾರ್ಖೀವ್​ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​
TV9 Web
| Edited By: |

Updated on:Mar 01, 2022 | 3:46 PM

Share

ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಎಂಬುವರು ಮೃತಪಟ್ಟಿದ್ದಾರೆ (Karnataka Student Killed In Ukraine . ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್​ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್​​ನಲ್ಲಿ ನೆಲೆಸಿದ್ದರು. ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ. ಉಕ್ರೇನ್​ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ. ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದು. ಕಾರ್ಖೀವ್​​ನ ಗವರ್ನರ್​ ಹೌಸ್​ ಸಮೀಪವೇ ಇವರೆಲ್ಲ ಇದ್ದು, ಸುಮಾರು 8ಗಂಟೆ ಹೊತ್ತಿಗೆ ಅಲ್ಲಿ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ. ಈ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾರೆ. ಕಾರ್ಖೀವ್​ನ ಶವಾಗಾರದಲ್ಲಿ ಮೃತದೇಹವಿದೆ ಎಂದು ತಿಳಿಸಿದೆ. ಹಾಗೇ, ನವೀನ್​ ಕುಟುಂಬದೊಂದಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಂಪರ್ಕದಲ್ಲಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಭಾರತದ ವಿದ್ಯಾರ್ಥಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಕಾಂಗ್ರೆಸ್​ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಇದು ಭೀಕರ ದುರಂತ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಹಾಗೇ ಉಕ್ರೇನ್​​ನಲ್ಲಿರುವ ಉಳಿದ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ. ಅಲ್ಲಿರುವವರನ್ನೆಲ್ಲ ವಾಪಸ್​ ಕರೆಸಲು ಏನೆಲ್ಲ ಸಾಧ್ಯವೋ ಅದನ್ನು ಕೂಡಲೇ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿರುವುದಕ್ಕೆ 5 ಮುಖ್ಯ ಕಾರಣಗಳು ಇಲ್ಲಿವೆ

Published On - 3:09 pm, Tue, 1 March 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್