Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ

ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದ ಸಮಯದಲ್ಲೇ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ
ಕಾರ್ಖೀವ್​ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​
Follow us
| Updated By: Lakshmi Hegde

Updated on:Mar 01, 2022 | 3:46 PM

ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಎಂಬುವರು ಮೃತಪಟ್ಟಿದ್ದಾರೆ (Karnataka Student Killed In Ukraine . ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್​ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್​​ನಲ್ಲಿ ನೆಲೆಸಿದ್ದರು. ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ. ಉಕ್ರೇನ್​ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ. ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದು. ಕಾರ್ಖೀವ್​​ನ ಗವರ್ನರ್​ ಹೌಸ್​ ಸಮೀಪವೇ ಇವರೆಲ್ಲ ಇದ್ದು, ಸುಮಾರು 8ಗಂಟೆ ಹೊತ್ತಿಗೆ ಅಲ್ಲಿ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ. ಈ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾರೆ. ಕಾರ್ಖೀವ್​ನ ಶವಾಗಾರದಲ್ಲಿ ಮೃತದೇಹವಿದೆ ಎಂದು ತಿಳಿಸಿದೆ. ಹಾಗೇ, ನವೀನ್​ ಕುಟುಂಬದೊಂದಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಂಪರ್ಕದಲ್ಲಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಭಾರತದ ವಿದ್ಯಾರ್ಥಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಕಾಂಗ್ರೆಸ್​ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಇದು ಭೀಕರ ದುರಂತ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಹಾಗೇ ಉಕ್ರೇನ್​​ನಲ್ಲಿರುವ ಉಳಿದ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ. ಅಲ್ಲಿರುವವರನ್ನೆಲ್ಲ ವಾಪಸ್​ ಕರೆಸಲು ಏನೆಲ್ಲ ಸಾಧ್ಯವೋ ಅದನ್ನು ಕೂಡಲೇ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿರುವುದಕ್ಕೆ 5 ಮುಖ್ಯ ಕಾರಣಗಳು ಇಲ್ಲಿವೆ

Published On - 3:09 pm, Tue, 1 March 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ