AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ

ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದ ಸಮಯದಲ್ಲೇ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ
ಕಾರ್ಖೀವ್​ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​
TV9 Web
| Edited By: |

Updated on:Mar 01, 2022 | 3:46 PM

Share

ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಎಂಬುವರು ಮೃತಪಟ್ಟಿದ್ದಾರೆ (Karnataka Student Killed In Ukraine . ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್​ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್​​ನಲ್ಲಿ ನೆಲೆಸಿದ್ದರು. ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ. ಉಕ್ರೇನ್​ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ. ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದು. ಕಾರ್ಖೀವ್​​ನ ಗವರ್ನರ್​ ಹೌಸ್​ ಸಮೀಪವೇ ಇವರೆಲ್ಲ ಇದ್ದು, ಸುಮಾರು 8ಗಂಟೆ ಹೊತ್ತಿಗೆ ಅಲ್ಲಿ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ. ಈ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾರೆ. ಕಾರ್ಖೀವ್​ನ ಶವಾಗಾರದಲ್ಲಿ ಮೃತದೇಹವಿದೆ ಎಂದು ತಿಳಿಸಿದೆ. ಹಾಗೇ, ನವೀನ್​ ಕುಟುಂಬದೊಂದಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಂಪರ್ಕದಲ್ಲಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಭಾರತದ ವಿದ್ಯಾರ್ಥಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಕಾಂಗ್ರೆಸ್​ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಇದು ಭೀಕರ ದುರಂತ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಹಾಗೇ ಉಕ್ರೇನ್​​ನಲ್ಲಿರುವ ಉಳಿದ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ. ಅಲ್ಲಿರುವವರನ್ನೆಲ್ಲ ವಾಪಸ್​ ಕರೆಸಲು ಏನೆಲ್ಲ ಸಾಧ್ಯವೋ ಅದನ್ನು ಕೂಡಲೇ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿರುವುದಕ್ಕೆ 5 ಮುಖ್ಯ ಕಾರಣಗಳು ಇಲ್ಲಿವೆ

Published On - 3:09 pm, Tue, 1 March 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ