AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ

ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದ ಸಮಯದಲ್ಲೇ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ.

Big Breaking: ರಷ್ಯಾ ದಾಳಿಗೆ ಉಕ್ರೇನ್​​ನಲ್ಲಿದ್ದ ಕರ್ನಾಟಕದ ವಿದ್ಯಾರ್ಥಿ ದುರ್ಮರಣ; ಖಚಿತ ಪಡಿಸಿದ ವಿದೇಶಾಂಗ ಇಲಾಖೆ
ಕಾರ್ಖೀವ್​ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​
TV9 Web
| Edited By: |

Updated on:Mar 01, 2022 | 3:46 PM

Share

ರಷ್ಯಾ ದಾಳಿಗೆ ತುತ್ತಾಗಿರುವ ಉಕ್ರೇನ್​​ನಲ್ಲಿ ಕರ್ನಾಟಕದ ವಿದ್ಯಾರ್ಥಿ ನವೀನ್​ ಎಂಬುವರು ಮೃತಪಟ್ಟಿದ್ದಾರೆ (Karnataka Student Killed In Ukraine . ಈ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ. ನವೀನ್​ ಹಾವೇರಿಯವರಾಗಿದ್ದು, 4ವರ್ಷಗಳಿಂದ ಉಕ್ರೇನ್​​ನಲ್ಲಿ ನೆಲೆಸಿದ್ದರು. ಬೆಳಗ್ಗೆ 11.30ಕ್ಕೆ (ಭಾರತೀಯ ಕಾಲಮಾನ) ಕೊನೇ ಬಾರಿ ಸಂಪರ್ಕಕ್ಕೆ ಸಿಕ್ಕಿದ್ದರು. ಅವರೀಗ ಮೃತಪಟ್ಟಿದ್ದು ದೃಢಪಟ್ಟಿದೆ. ಉಕ್ರೇನ್​ನಲ್ಲಿ ರಷ್ಯಾ ನಡೆಸಿದ ದಾಳಿಗೆ ಭಾರತದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದನ್ನು ತಿಳಿಸಲು ವಿಷಾದಿಸುತ್ತೇವೆ. ವಿದ್ಯಾರ್ಥಿಯ ಕುಟುಂಬಕ್ಕೆ ನಮ್ಮ ಸಾಂತ್ವನಗಳು ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ಅರವಿಂದ್ ಬಾಗ್ಚಿ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಮಾಹಿತಿ ನೀಡಿದೆ. ಕಾರ್ಖೀವ್​​ನ ಕಾಲಮಾನದ ಪ್ರಕಾರ ಮುಂಜಾನೆ 7ಗಂಟೆ ಹೊತ್ತಿಗೆ ನವೀನ್​ ಇನ್ನೂ ಹಲವರ ಜತೆ ತಿಂಡಿ ಪಡೆಯಲು ಹೊರಗೆ ನಿಂತಿದ್ದು. ಕಾರ್ಖೀವ್​​ನ ಗವರ್ನರ್​ ಹೌಸ್​ ಸಮೀಪವೇ ಇವರೆಲ್ಲ ಇದ್ದು, ಸುಮಾರು 8ಗಂಟೆ ಹೊತ್ತಿಗೆ ಅಲ್ಲಿ ರಷ್ಯಾ ಸೇನೆ ರಾಕೆಟ್​ ದಾಳಿ ನಡೆಸಿದೆ. ಈ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾರೆ. ಕಾರ್ಖೀವ್​ನ ಶವಾಗಾರದಲ್ಲಿ ಮೃತದೇಹವಿದೆ ಎಂದು ತಿಳಿಸಿದೆ. ಹಾಗೇ, ನವೀನ್​ ಕುಟುಂಬದೊಂದಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಸಂಪರ್ಕದಲ್ಲಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಭಾರತದ ವಿದ್ಯಾರ್ಥಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಕಾಂಗ್ರೆಸ್​ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಇದು ಭೀಕರ ದುರಂತ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಹಾಗೇ ಉಕ್ರೇನ್​​ನಲ್ಲಿರುವ ಉಳಿದ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ. ಅಲ್ಲಿರುವವರನ್ನೆಲ್ಲ ವಾಪಸ್​ ಕರೆಸಲು ಏನೆಲ್ಲ ಸಾಧ್ಯವೋ ಅದನ್ನು ಕೂಡಲೇ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿರುವುದಕ್ಕೆ 5 ಮುಖ್ಯ ಕಾರಣಗಳು ಇಲ್ಲಿವೆ

Published On - 3:09 pm, Tue, 1 March 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ