AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ
ಪೊಲೀಸರಿಗೆ ನಮಸ್ಕರಿಸುತ್ತಿರವ ವ್ಯಕ್ತಿ
Lakshmi Hegde
|

Updated on:Apr 29, 2021 | 5:44 PM

Share

ಆಗ್ರಾ: ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು, ಶಿರಬಾಗಿ ನಮಸ್ಕರಿಸಿ ಆಕ್ಸಿಜನ್​ಗಾಗಿ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಇದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಘಟನೆ ಎಂದು ಹೇಳಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು, ಇದು ಭಾರತದಲ್ಲಿನ ಕೊವಿಡ್ ಸ್ಥಿತಿ ಭೀಕರತೆಗೆ ಉದಾಹರಣೆ ಎಂದು ಹೇಳಿದ್ದಾರೆ.

ಪಿಪಿಇ ಕಿಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು ಕೈಮುಗಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈತ ತನ್ನ ತಾಯಿಯಾಗಿ ತಂದಿದ್ದ ಆಕ್ಸಿಜನ್​ ಸಿಲಿಂಡರ್​ನ್ನು ಮುಂದೆ ತೆಗೆದುಕೊಂಡು ಹೋಗಲು ಪೊಲೀಸರು ಕೊಡದೆ ಇರುವ ಕಾರಣಕ್ಕೆ ಈತ ಹೀಗೆ ಬೇಡಿಕೊಳ್ಳುತ್ತಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ, ಉತ್ತರ ಪ್ರದೇಶದ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಹಾಗೇನೂ ಇಲ್ಲ, ಒಂದು ಖಾಲಿ ಸಿಲಿಂಡರ್ ತೆಗೆದುಕೊಂಡು ಹೋಗಲು ಆತ ಹೀಗೆ ಮನವಿ ಮಾಡುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ. ಹಾಗೇ ಘಟನೆ ನಡೆದಿದ್ದು ಆಗ್ರಾದ ಉಪಾಧ್ಯಾಯ ಆಸ್ಪತ್ರೆಯ ಹೊರಗೆ ಎಂದ ಹೇಳಿದೆ.

ಇನ್ನು ಈ ವಿಡಿಯೋವನ್ನಿಟ್ಟುಕೊಂಡು ಉತ್ತರ ಪ್ರದೇಶದ ಯುವ ಕಾಂಗ್ರೆಸ್ ಘಟಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಕೆಂಡಕಾರಿದೆ. ಇದು ನಿಜಕ್ಕೂ ನೋವು ತರುವಂಥ ಸನ್ನಿವೇಶ. ಒಬ್ಬ ವ್ಯಕ್ತಿ ತನ್ನ ಅಮ್ಮನ ರಕ್ಷಣೆಗಾಗಿ ಪೊಲೀಸರೆದುರು ಬೇಡುತ್ತಿದ್ದಾನೆ. ಅಷ್ಟಾದರೂ ಅವರು ಕರಗುತ್ತಿಲ್ಲ. ಇದು ನಿಜಕ್ಕೂ ಪೊಲೀಸರ ಅಮಾನವೀಯ ವರ್ತನೆ ಎಂದು ಹೇಳಿದೆ. ಪೊಲೀಸರು ತಮ್ಮದೇನೂ ತಪ್ಪಿಲ್ಲ ಎಂದು ವಾದಿಸುತ್ತಿದ್ದು, ವಿಡಿಯೋದ ಹಿಂದಿನ ಸತ್ಯಾಂಶ ಗೊತ್ತಾಗುತ್ತಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಮಾರು 3000 ಕೊರೊನಾ ಸೋಂಕಿತರು ನಾಪತ್ತೆ: ಸಚಿವ ಆರ್. ಅಶೋಕ್

ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾಗೆ ಬಲಿ

Published On - 5:44 pm, Thu, 29 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ