AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ.

Viral Video: ‘ಅಮ್ಮನಿಗಾಗಿ ಆಕ್ಸಿಜನ್​ ಸಿಲಿಂಡರ್ ತೆಗೆದುಕೊಂಡು ಹೋಗಲು ಬಿಡಿ..’; ಪೊಲೀಸರ ಎದುರು ಮೊಣಕಾಲೂರಿ ಬೇಡಿಕೊಂಡ ವ್ಯಕ್ತಿ
ಪೊಲೀಸರಿಗೆ ನಮಸ್ಕರಿಸುತ್ತಿರವ ವ್ಯಕ್ತಿ
Lakshmi Hegde
|

Updated on:Apr 29, 2021 | 5:44 PM

Share

ಆಗ್ರಾ: ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು, ಶಿರಬಾಗಿ ನಮಸ್ಕರಿಸಿ ಆಕ್ಸಿಜನ್​ಗಾಗಿ ಬೇಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ಇದು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದ ಘಟನೆ ಎಂದು ಹೇಳಲಾಗಿದೆ. ವಿಡಿಯೋ ನೋಡಿದ ನೆಟ್ಟಿಗರು, ಇದು ಭಾರತದಲ್ಲಿನ ಕೊವಿಡ್ ಸ್ಥಿತಿ ಭೀಕರತೆಗೆ ಉದಾಹರಣೆ ಎಂದು ಹೇಳಿದ್ದಾರೆ.

ಪಿಪಿಇ ಕಿಟ್ ಧರಿಸಿದ ವ್ಯಕ್ತಿಯೊಬ್ಬ ಪೊಲೀಸರ ಎದುರು ಮೊಣಕಾಲೂರಿ ಕುಳಿತು ಕೈಮುಗಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈತ ತನ್ನ ತಾಯಿಯಾಗಿ ತಂದಿದ್ದ ಆಕ್ಸಿಜನ್​ ಸಿಲಿಂಡರ್​ನ್ನು ಮುಂದೆ ತೆಗೆದುಕೊಂಡು ಹೋಗಲು ಪೊಲೀಸರು ಕೊಡದೆ ಇರುವ ಕಾರಣಕ್ಕೆ ಈತ ಹೀಗೆ ಬೇಡಿಕೊಳ್ಳುತ್ತಿದ್ದಾನೆ ಎಂದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ, ಉತ್ತರ ಪ್ರದೇಶದ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಹಾಗೇನೂ ಇಲ್ಲ, ಒಂದು ಖಾಲಿ ಸಿಲಿಂಡರ್ ತೆಗೆದುಕೊಂಡು ಹೋಗಲು ಆತ ಹೀಗೆ ಮನವಿ ಮಾಡುತ್ತಿದ್ದಾನೆ ಎಂದು ತಿಳಿಸಿದ್ದಾರೆ.

ನಾನು ನಿಮ್ಮ ಪಾದವನ್ನು ಮುಟ್ಟಿ ಮನವಿ ಮಾಡಿಕೊಳ್ಳುತ್ತಿದ್ದೇನೆ..ದಯವಿಟ್ಟು ನನ್ನ ಅಮ್ಮನನ್ನು ಉಳಿಸಿಕೊಡಿ ಎಂದು ಈ ವ್ಯಕ್ತಿ ಅಳುತ್ತ ಹೇಳುವುದು ವಿಡಿಯೋದಲ್ಲಿ ಕೇಳುತ್ತದೆ. ಹಾಗೇ ಘಟನೆ ನಡೆದಿದ್ದು ಆಗ್ರಾದ ಉಪಾಧ್ಯಾಯ ಆಸ್ಪತ್ರೆಯ ಹೊರಗೆ ಎಂದ ಹೇಳಿದೆ.

ಇನ್ನು ಈ ವಿಡಿಯೋವನ್ನಿಟ್ಟುಕೊಂಡು ಉತ್ತರ ಪ್ರದೇಶದ ಯುವ ಕಾಂಗ್ರೆಸ್ ಘಟಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಕೆಂಡಕಾರಿದೆ. ಇದು ನಿಜಕ್ಕೂ ನೋವು ತರುವಂಥ ಸನ್ನಿವೇಶ. ಒಬ್ಬ ವ್ಯಕ್ತಿ ತನ್ನ ಅಮ್ಮನ ರಕ್ಷಣೆಗಾಗಿ ಪೊಲೀಸರೆದುರು ಬೇಡುತ್ತಿದ್ದಾನೆ. ಅಷ್ಟಾದರೂ ಅವರು ಕರಗುತ್ತಿಲ್ಲ. ಇದು ನಿಜಕ್ಕೂ ಪೊಲೀಸರ ಅಮಾನವೀಯ ವರ್ತನೆ ಎಂದು ಹೇಳಿದೆ. ಪೊಲೀಸರು ತಮ್ಮದೇನೂ ತಪ್ಪಿಲ್ಲ ಎಂದು ವಾದಿಸುತ್ತಿದ್ದು, ವಿಡಿಯೋದ ಹಿಂದಿನ ಸತ್ಯಾಂಶ ಗೊತ್ತಾಗುತ್ತಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಮಾರು 3000 ಕೊರೊನಾ ಸೋಂಕಿತರು ನಾಪತ್ತೆ: ಸಚಿವ ಆರ್. ಅಶೋಕ್

ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಗರ್ಭಿಣಿ ವೈದ್ಯೆ ಕೊರೊನಾಗೆ ಬಲಿ

Published On - 5:44 pm, Thu, 29 April 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!