AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ರಂಜನ್ ಗೊಗೊಯಿ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಅರ್ಜಿ

Ranjan Gogoi: ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸತೀಶ್ ಎಸ್. ಕಂಬಿಯೆ ಸಲ್ಲಿಸಿದ ಇತ್ತೀಚಿನ ಮನವಿಯಲ್ಲಿ, ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯಿಂದ ಗೊಗೊಯ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ರಂಜನ್ ಗೊಗೊಯಿ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಅರ್ಜಿ
ರಂಜನ್ ಗೊಗೊಯಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 30, 2021 | 5:42 PM

Share

ದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್  (Ranjan Gogoi) ಅವರನ್ನು ರಾಜ್ಯಸಭೆಗೆ (Rajya Sabha) ನೇಮಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಗೊಗೊಯ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ಮಾರ್ಚ್ 2020 ರಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.  ನಾಮನಿರ್ದೇಶನದ ಸಮಯದಲ್ಲಿ ಹಲವಾರು ಸಾಂವಿಧಾನಿಕ ತಜ್ಞರು, ಹಕ್ಕುಗಳ ಕಾರ್ಯಕರ್ತರು ಮತ್ತು ಇತರರು ನಿರ್ಧಾರವನ್ನು ಟೀಕಿಸಿದ್ದು ಕಾರ್ಯನಿರ್ವಾಹಕ ಮತ್ತು ನ್ಯಾಯಾಂಗದ ನಡುವಿನ ಸಾಂವಿಧಾನಿಕ ಅಧಿಕಾರಗಳ ವಿಭಜನೆಯು ಮಸುಕಾಗಿತ್ತು ಎಂದು ಹೇಳಿದ್ದರು. ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸತೀಶ್ ಎಸ್. ಕಂಬಿಯೆ ಸಲ್ಲಿಸಿದ ಇತ್ತೀಚಿನ ಮನವಿಯಲ್ಲಿ, ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯಿಂದ ಗೊಗೊಯ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ. ವಿಚಾರಣೆಯ ನಂತರ ಗೊಗೊಯ್ ಅವರನ್ನು ಸಂಸತ್ತಿನಿಂದ ತೆಗೆದುಹಾಕಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

ರಾಜ್ಯಸಭಾ ವೆಬ್‌ಸೈಟ್‌ನಲ್ಲಿ ಒದಗಿಸಿದ ಬಯೋಡೇಟಾದ ಪ್ರಕಾರ ಅರ್ಜಿದಾರರು ಗಮನಿಸಿದಂತೆ, ಗೊಗೊಯ್ ಅವರಿಗೆ ಯಾವುದೇ ಪುಸ್ತಕಗಳು ಅಥವಾ ಪ್ರಕಟಣೆಗಳು ಇಲ್ಲ, ಮತ್ತು ಯಾವುದೇ ಸಾಮಾಜಿಕ, ವೈಜ್ಞಾನಿಕ, ಸಾಹಿತ್ಯಿಕ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. “ಕನಿಷ್ಠ ವೆಬ್‌ಸೈಟ್‌ನಲ್ಲಿ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆಯ ಬಗ್ಗೆ ಅವರ ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವದ ಬಗ್ಗೆ ಪ್ರತಿಕ್ರಿಯಿಸಿದವರ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ” ಎಂದಿದೆ.

ಈ ಸಂಗತಿಗಳನ್ನು ಗಮನಿಸಿದರೆ, ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡುವ ಸರ್ಕಾರದ ಅಧಿಸೂಚನೆ – ಸಂವಿಧಾನದ ಕಲಂ 80 (1) (ಎ) (3) ನೊಂದಿಗೆ ಈ ಷರತ್ತುಗಳ ಅವಶ್ಯಕತೆಗಳನ್ನು ಪೂರೈಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿನನ್ನ ಮಗಳ ಸಾವು ಆಗಬೇಕು, ದೇವರಲ್ಲಿ ನನ್ನ ಪ್ರಾರ್ಥನೆ; ಮಗಳ ಸ್ಥಿತಿಗೆ ನೊಂದ ತಾಯಿಯ ವಿಚಿತ್ರ ಆಸೆ

ಇದನ್ನೂ ಓದಿ: 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

(A petition in the Supreme Court has Challenges Ranjan Gogoi’s appointment to the Rajya Sabha )

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್