AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ರಂಜನ್ ಗೊಗೊಯಿ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಅರ್ಜಿ

Ranjan Gogoi: ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸತೀಶ್ ಎಸ್. ಕಂಬಿಯೆ ಸಲ್ಲಿಸಿದ ಇತ್ತೀಚಿನ ಮನವಿಯಲ್ಲಿ, ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯಿಂದ ಗೊಗೊಯ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ

ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದ ರಂಜನ್ ಗೊಗೊಯಿ ನಾಮನಿರ್ದೇಶನ ಪ್ರಶ್ನಿಸಿ ಸುಪ್ರೀಂಕೋರ್ಟ್​​ಗೆ ಅರ್ಜಿ
ರಂಜನ್ ಗೊಗೊಯಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 30, 2021 | 5:42 PM

ದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್  (Ranjan Gogoi) ಅವರನ್ನು ರಾಜ್ಯಸಭೆಗೆ (Rajya Sabha) ನೇಮಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಗೊಗೊಯ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ಮಾರ್ಚ್ 2020 ರಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರು.  ನಾಮನಿರ್ದೇಶನದ ಸಮಯದಲ್ಲಿ ಹಲವಾರು ಸಾಂವಿಧಾನಿಕ ತಜ್ಞರು, ಹಕ್ಕುಗಳ ಕಾರ್ಯಕರ್ತರು ಮತ್ತು ಇತರರು ನಿರ್ಧಾರವನ್ನು ಟೀಕಿಸಿದ್ದು ಕಾರ್ಯನಿರ್ವಾಹಕ ಮತ್ತು ನ್ಯಾಯಾಂಗದ ನಡುವಿನ ಸಾಂವಿಧಾನಿಕ ಅಧಿಕಾರಗಳ ವಿಭಜನೆಯು ಮಸುಕಾಗಿತ್ತು ಎಂದು ಹೇಳಿದ್ದರು. ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸತೀಶ್ ಎಸ್. ಕಂಬಿಯೆ ಸಲ್ಲಿಸಿದ ಇತ್ತೀಚಿನ ಮನವಿಯಲ್ಲಿ, ಯಾವ ಅಧಿಕಾರ, ಅರ್ಹತೆ ಮತ್ತು ಶೀರ್ಷಿಕೆಯಿಂದ ಗೊಗೊಯ್ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಳಿರುವುದಾಗಿ ಲೈವ್‌ಲಾ ವರದಿ ಮಾಡಿದೆ. ವಿಚಾರಣೆಯ ನಂತರ ಗೊಗೊಯ್ ಅವರನ್ನು ಸಂಸತ್ತಿನಿಂದ ತೆಗೆದುಹಾಕಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

ರಾಜ್ಯಸಭಾ ವೆಬ್‌ಸೈಟ್‌ನಲ್ಲಿ ಒದಗಿಸಿದ ಬಯೋಡೇಟಾದ ಪ್ರಕಾರ ಅರ್ಜಿದಾರರು ಗಮನಿಸಿದಂತೆ, ಗೊಗೊಯ್ ಅವರಿಗೆ ಯಾವುದೇ ಪುಸ್ತಕಗಳು ಅಥವಾ ಪ್ರಕಟಣೆಗಳು ಇಲ್ಲ, ಮತ್ತು ಯಾವುದೇ ಸಾಮಾಜಿಕ, ವೈಜ್ಞಾನಿಕ, ಸಾಹಿತ್ಯಿಕ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ. “ಕನಿಷ್ಠ ವೆಬ್‌ಸೈಟ್‌ನಲ್ಲಿ ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆಯ ಬಗ್ಗೆ ಅವರ ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವದ ಬಗ್ಗೆ ಪ್ರತಿಕ್ರಿಯಿಸಿದವರ ಯಾವುದೇ ಮಾಹಿತಿಯನ್ನು ನೀಡಲಾಗಿಲ್ಲ” ಎಂದಿದೆ.

ಈ ಸಂಗತಿಗಳನ್ನು ಗಮನಿಸಿದರೆ, ಗೊಗೊಯ್ ಅವರನ್ನು ನಾಮನಿರ್ದೇಶನ ಮಾಡುವ ಸರ್ಕಾರದ ಅಧಿಸೂಚನೆ – ಸಂವಿಧಾನದ ಕಲಂ 80 (1) (ಎ) (3) ನೊಂದಿಗೆ ಈ ಷರತ್ತುಗಳ ಅವಶ್ಯಕತೆಗಳನ್ನು ಪೂರೈಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿನನ್ನ ಮಗಳ ಸಾವು ಆಗಬೇಕು, ದೇವರಲ್ಲಿ ನನ್ನ ಪ್ರಾರ್ಥನೆ; ಮಗಳ ಸ್ಥಿತಿಗೆ ನೊಂದ ತಾಯಿಯ ವಿಚಿತ್ರ ಆಸೆ

ಇದನ್ನೂ ಓದಿ: 1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭಿಸಬೇಕು; ರಾಜ್ಯ ಸರ್ಕಾರಕ್ಕೆ ಖಾಸಗಿ ಶಾಲಾ ಒಕ್ಕೂಟದಿಂದ ಒತ್ತಾಯ

(A petition in the Supreme Court has Challenges Ranjan Gogoi’s appointment to the Rajya Sabha )

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್