AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಘು ಗಡಿಯಲ್ಲಿ ಮತ್ತೊಂದು ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆ

ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿರುವ ಕುಂಡ್ಲಿ ಠಾಣೆ ಪೊಲೀಸರು ಗುರ್​ಪ್ರೀತ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಹಾಗೇ, ಸಾವಿನ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದಾರೆ.

ಸಿಂಘು ಗಡಿಯಲ್ಲಿ ಮತ್ತೊಂದು ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ರೈತನ ಶವ ಪತ್ತೆ
ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ಚಿತ್ರ
TV9 Web
| Edited By: |

Updated on: Nov 10, 2021 | 10:36 AM

Share

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ(Farm Laws)ಗಳ ವಿರುದ್ಧ ಸಿಂಘು ಗಡಿ (Singhu Border)ಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತನೊಬ್ಬನ ಮೃತದೇಹ ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತನನ್ನು ಗುರ್​​ಪ್ರೀತ್​ ಸಿಂಗ್​ ಎಂದು ಗುರುತಿಸಲಾಗಿದ್ದು, ಪಂಜಾಬ್​ನ ಫತೇಘರ್ ಸಾಹಿಬ್​​​ನ ಅಮ್ರೋಹ್​ ಜಿಲ್ಲೆಯ ರೂಕಿ ಎಂಬ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಇವರು ಭಾರತೀಯ ಕಿಸಾನ್​ ಯೂನಿಯನ್​​ನ ಸಿಧಾಪುರದ ಜಗ್​ಜಿತ್​ ಸಿಂಗ್ ದಲ್ಲೇವಾಲ್​ ಬಣದೊಂದಿಗೆ ಗುರುತಿಸಿಕೊಂಡವರಾಗಿದ್ದರು. 

ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿರುವ ಕುಂಡ್ಲಿ ಠಾಣೆ ಪೊಲೀಸರು ಗುರ್​ಪ್ರೀತ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​​ಗೆ ಕಳಿಸಿದ್ದಾರೆ. ಹಾಗೇ, ಸಾವಿನ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದಾರೆ. ಗುರ್​ಪ್ರೀತ್​ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇದು ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ರೀತಿಯ ಸಾವೋ ಎಂಬ ಆಯಾಮದಲ್ಲೂ ತನಿಖೆ ಶುರುವಾಗಿದೆ.  ಪೋಸ್ಟ್​ಮಾರ್ಟ್​ಮ್​ ವರದಿ ಬಂದ ಹೊರತು ಯಾವುದೇ ಮಾಹಿತಿ ನೀಡುವುದಿಲ್ಲ ಎಂದು ಪೊಲೀಸ್​ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಒಂದು ವರ್ಷಗಳಿಂದಲೂ ದೆಹಲಿಯ ಗಡಿಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇಲ್ಲಿ ಆಗಾಗ ಪ್ರತಿಭಟನೆ, ಹಿಂಸಾಚಾರ, ಸಾವು-ನೋವು ನಡೆಯುತ್ತಲೇ ಇರುತ್ತಿದೆ. ಕಳೆದ ತಿಂಗಳು ಸಿಂಘು ಗಡಿಯಲ್ಲಿ ರೈತನೊಬ್ಬನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಆ ರೈತನ ಕೈ-ಕಾಲು ಕತ್ತರಿಸಿ ಮೃತದೇಹವನ್ನು ಬ್ಯಾರಿಕೇಡ್​ಗೆ ಕಟ್ಟಲಾಗಿತ್ತು. ಈತ ಸಿಖ್ಖರ ಪವಿತ್ರ ಗ್ರಂಥ ಗುರುಗ್ರಂಥ ಸಾಹೀಬನ್ನು ಅಪವಿತ್ರಗೊಳಿಸಿದ್ದೇ ಈ ಹತ್ಯೆಗೆ ಕಾರಣ ಎನ್ನಲಾಗಿತ್ತು.

ಇದನ್ನೂ ಓದಿ: ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ