AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮದ ಬಗೆಗಿನ ಹೇಳಿಕೆಗಳು ಇಂಡಿಯಾ ಮೈತ್ರಿಕೂಟದ ಮಾನಸಿಕ ದಿವಾಳಿತನ ಹಾಗೂ ಹಿಂದೂಫೋಬಿಯಾವನ್ನು ಪ್ರತಿಬಿಂಬಿಸುತ್ತದೆ: ಧರ್ಮೇಂದ್ರ ಪ್ರಧಾನ್

ಹೆಸರನ್ನು ಬದಲಾಯಿಸುವುದರಿಂದ ವ್ಯಕ್ತಿಯ ಉದ್ದೇಶ ಅಥವಾ ಚಾರಿತ್ರ್ಯ ಬದಲಾಗುವುದಿಲ್ಲ ಎಂದು ಕೇಂದ್ರ ಸಚಿವ ಧಮೇಂದ್ರ ಪ್ರಧಾನ್(Dharmendra Pradhan) ಕಿಡಿಕಾರಿದ್ದಾರೆ. ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕ ಎ ರಾಜಾ( A Raja) ನೀಡಿರುವ ಹೇಳಿಕೆಯನ್ನು ಸಚಿವ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ. ಸನಾತನ ಧರ್ಮ ಶಾಶ್ವತ ಹಾಗೂ ಸತ್ಯವಾದ್ದದ್ದು, ಸನಾತನ ಧರ್ಮದ ಬಗ್ಗೆ ನೀಡುವ ಅವಹೇಳನಕಾರಿ ಹೇಳಿಕೆಗಳು ಡಿಎಂಕೆ ನಾಯಕ ಎ ರಾಜಾ ಹಾಗೂ ಇಂಡಿಯಾ ಮೈತ್ರಿಕೂಟದ ಮಾನಸಿಕ ದಿವಾಳಿತನ ಹಾಗೂ ಹಿಂದೂಫೋಬಿಯಾವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಸನಾತನ ಧರ್ಮದ ಬಗೆಗಿನ ಹೇಳಿಕೆಗಳು ಇಂಡಿಯಾ ಮೈತ್ರಿಕೂಟದ ಮಾನಸಿಕ ದಿವಾಳಿತನ ಹಾಗೂ ಹಿಂದೂಫೋಬಿಯಾವನ್ನು ಪ್ರತಿಬಿಂಬಿಸುತ್ತದೆ: ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್Image Credit source: Economic Times
ನಯನಾ ರಾಜೀವ್
|

Updated on: Sep 08, 2023 | 10:13 AM

Share

ಹೆಸರನ್ನು ಬದಲಾಯಿಸುವುದರಿಂದ ವ್ಯಕ್ತಿಯ ಉದ್ದೇಶ ಅಥವಾ ಚಾರಿತ್ರ್ಯ ಬದಲಾಗುವುದಿಲ್ಲ ಎಂದು ಕೇಂದ್ರ ಸಚಿವ ಧಮೇಂದ್ರ ಪ್ರಧಾನ್(Dharmendra Pradhan) ಕಿಡಿಕಾರಿದ್ದಾರೆ. ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕ ಎ ರಾಜಾ( A Raja) ನೀಡಿರುವ ಹೇಳಿಕೆಯನ್ನು ಸಚಿವ ಧರ್ಮೇಂದ್ರ ಪ್ರಧಾನ್ ಖಂಡಿಸಿದ್ದಾರೆ. ಸನಾತನ ಧರ್ಮ ಶಾಶ್ವತ ಹಾಗೂ ಸತ್ಯವಾದ್ದದ್ದು, ಸನಾತನ ಧರ್ಮದ ಬಗ್ಗೆ ನೀಡುವ ಅವಹೇಳನಕಾರಿ ಹೇಳಿಕೆಗಳು ಡಿಎಂಕೆ ನಾಯಕ ಎ ರಾಜಾ ಹಾಗೂ ಇಂಡಿಯಾ ಮೈತ್ರಿಕೂಟದ ಮಾನಸಿಕ ದಿವಾಳಿತನ ಹಾಗೂ ಹಿಂದೂಫೋಬಿಯಾವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಉದ್ದೇಶಪೂರ್ವಕವಾಗಿ ಭಾರತದ ಮಾನಹಾನಿ ಮಾಡುತ್ತಿರುವುದನ್ನು ದೇಶದ ಜನತೆ ನೋಡುತ್ತಿದೆ ಎಂದು ಹೇಳಿದರು.

ಡಿಎಂಕೆ ನಾಯಕ ರಾಜಾ ಸನಾತನ ಧರ್ಮವನ್ನು ಏಡ್ಸ್​, ಕುಷ್ಠರೋಗದಂತಹ ಕಾಯಿಲೆಗಳಿಗೆ ಹೋಲಿಕೆ ಮಾಡಿದ್ದಾರೆ. ಈ ಮೊದಲು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಸಿದ್ದರು, ಈ ರೋಗಗಳ ಜತೆ ಹೋರಾಡಿದರೆ ಸಾಲದು ಮುಡಸಮೇತ ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡುವುದಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಮತ್ತಷ್ಟು ಓದಿ: ರಾವಣನ ಅಹಂಕಾರ, ಕಂಸನ ಘರ್ಜನೆಯಿಂದ ಅಲುಗಾಡದ ಸನಾತನ ಧರ್ಮವನ್ನು ಈಗ ಅಳಿಸಲು ಸಾಧ್ಯವೇ?: ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತು ರಾವಣನ ಅಹಂಕಾರ, ಕಂಸನ ಘರ್ಜನೆಯಿಂದ ಅಲುಗಾಡದ ಸನಾತನ ಧರ್ಮವನ್ನು ಈಗ ಅಳಿಸಲು ಸಾಧ್ಯವೇ? ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಪ್ರಶ್ನೆ ಮಾಡಿದ್ದಾರೆ. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin) ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಸಿದ್ದರು, ಇವುಗಳ ವಿರುದ್ಧ ಹೋರಾಡುವ ಬದಲು ಸನಾತನ ಧರ್ಮವನ್ನು ಬುಡದಿಂದಲೇ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಧರ್ಮೇಂದ್ರ ಪ್ರಧಾನ್ ಟ್ವೀಟ್

ರಾವಣನ ಅಹಂಕಾರದಿಂದ, ಕಂಸನ ಘರ್ಜನೆಯಿಂದ ಅಲುಗಾಡದ, ಔರಂಗಜೇಬನ ದುಷ್ಕೃತ್ಯಗಳಿಂದ ನಾಶಮಾಡಲು ಸಾಧ್ಯವಾಗದ ಸನಾತನ ಧರ್ಮವನ್ನು ಪರಾವಲಂಬಿ ಜೀವಿ ಅಳಿಸಿಹಾಕಲು ಸಾಧ್ಯವೇ ಎಂದು ಕೇಳಿದ್ದಾರೆ.

ಸನಾತನ ಧರ್ಮದತ್ತ ಬೆರಳು ತೋರುವುದು ಮಾನವೀಯತೆಯನ್ನು ಸಂಕಷ್ಟಕ್ಕೆ ಸಿಲುಕಿಸುವ ದುರುದ್ದೇಶಪೂರ್ವಕ ಪ್ರಯತ್ನಕ್ಕೆ ಸಮನಾಗಿದೆ ಎಂದು ಹೇಳಿದರು. ಸನಾತನ ಧರ್ಮವು ಸೂರ್ಯನಂತೆ ಶಕ್ತಿಯ ಮೂಲ ಎಂದು ಬಣ್ಣಿಸಿದರು, ಮೂರ್ಖ ಮಾತ್ರ ಸೂರ್ಯನ ಮೇಲೆ ಉಗುಳುವ ಆಲೋಚನೆ ಮಾಡಬಹುದು, ಆದರೆ ಆ ಎಂಜಿಲು ಉಗುಳುವವನ ಮುಖದ ಮೇಲೆಯೇ ಬೀಳುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ