AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Melanistic Tiger: ಒಡಿಶಾದ ಸಿಮಿಲಿಪಾಲ್‌ದಲ್ಲಿ ಅಪರೂಪದ ಮೆಲನಿಸ್ಟಿಕ್ ಹುಲಿ ಸಾವು

ಅಪರೂಪದ ಮೆಲನಿಸ್ಟಿಕ್ ಹುಲಿಯೊಂದು ಸಾವನ್ನಪ್ಪಿರುವ ಘಟನೆ ಒಡಿಶಾದ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದ ಕೋರ್ ಪ್ರದೇಶದಲ್ಲಿ ನಡೆದಿದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Melanistic Tiger: ಒಡಿಶಾದ ಸಿಮಿಲಿಪಾಲ್‌ದಲ್ಲಿ ಅಪರೂಪದ ಮೆಲನಿಸ್ಟಿಕ್ ಹುಲಿ ಸಾವು
ಮೆಲನಿಸ್ಟಿಕ್ ಹುಲಿ
ಅಕ್ಷಯ್​ ಪಲ್ಲಮಜಲು​​
|

Updated on:May 02, 2023 | 12:11 PM

Share

ಬರಿಪಾದ: ಅಪರೂಪದ ಮೆಲನಿಸ್ಟಿಕ್  ಹುಲಿಯೊಂದು (Melanistic Tiger) ಸಾವನ್ನಪ್ಪಿರುವ ಘಟನೆ ಒಡಿಶಾದ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದ ಕೋರ್ ಪ್ರದೇಶದಲ್ಲಿ ನಡೆದಿದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವನಾದ ಬಡಮಕ್ಕಬಾಡಿ-ಎಲ್‌ಎಲ್ ಬೀಟ್ ಪ್ರದೇಶದಲ್ಲಿ ಸಿಮಿಲಿಪಾಲ್ ದಕ್ಷಿಣ ವಿಭಾಗದ ಸಿಬ್ಬಂದಿ ಇದನ್ನು ಪತ್ತೆ ಮಾಡಿದ್ದಾರೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸುಶೀಲ್ ಕುಮಾರ್ ಪೊಪ್ಲಿ ತಿಳಿಸಿದ್ದಾರೆ. ಅಪರೂಪದ ಮೆಲನಿಸ್ಟಿಕ್ ಹುಲಿ ಈ ಹಿಂದೆ ಭಾರೀ ವೈರಲ್​​ ಆಗಿತ್ತು, ಇದೀಗ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.

ಮೂರೂವರೆ ವರ್ಷದ ಗಂಡು ಹುಲಿ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಮತ್ತೊಂದು ಹುಲಿಯೊಂದಿಗಿನ ಕಾದಾಟದಲ್ಲಿ ಇದು ಸಾವನ್ನಪ್ಪಿರುವ ಶಂಕೆ ಇದೆ ಎಂದು ಸಿಬ್ಬಂದಿಗಳು ಸೋಮವಾರ ಹೇಳಿದರು.

ಹುಲಿಯ ಮೃತದೇಹದಲ್ಲಿ ಗೀರುಗಳ ಗುರುತುಗಳಿದ್ದು, ಇದು ಎರಡು ಹುಲಿಗಳ ನಡುವಿನ ಕದನವೇ ಇದರ ಸಾವಿಗೆ ಕಾರಣ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಹುಲಿಗಳು ಮೂರು ವರ್ಷ ವಯಸ್ಸಿನ ನಂತರ ಕಾಡಿನ ಅನೇಕ ಕಡೆ ಸುತ್ತಾಡುತ್ತದೆ. ಈ ಸಮಯದಲ್ಲಿ ಇದರ ಮುಂದೆ ಎದುರಾಗುವ ಇತರ ಹುಲಿಗಳ ಜತೆಗೆ ಕಾದಡುತ್ತದೆ ಎಂದು ಸುಶೀಲ್ ಕುಮಾರ್ ಪೊಪ್ಲಿ ಹೇಳಿದರು.

ಹುಲಿಯ ಸಾವಿನ ನಂತರ ಅದರ ದೇಹವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಬಹುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿ ಸೇರಿದಂತೆ ಇತರರ ಸಮ್ಮುಖದಲ್ಲಿ ಸೋಮವಾರ ಪ್ರಾಣಿಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮಾದರಿಗಳನ್ನು ಒಡಿಶಾ ಕೃಷಿ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಮತ್ತು ಭಾರತೀಯ ವನ್ಯಜೀವಿ ಸಂಸ್ಥೆಗೆ ವಿಶ್ಲೇಷಣೆಗಾಗಿ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Viral Video : ಈ ಕಪ್ಪು ಹುಲಿ ಇರುವುದು ಒಡಿಶಾದ ಸಿಮಿಲಿಪಲ್ ರಾಷ್ಟ್ರೀಯ ಉದ್ಯಾನದಲ್ಲಿ

ಮರಣೋತ್ತರ ಪರೀಕ್ಷೆಯ ನಂತರ ಹುಲಿ ದೇಹವನ್ನು ಕಾನೂನಿನಂತೆ ಸುಡಲಾಯಿತು. ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನವು 18 ರಾಯಲ್ ಬೆಂಗಾಲ್ ಟೈಗರ್‌ಗಳನ್ನು ಹೊಂದಿದ್ದು, ಅವುಗಳಲ್ಲಿ ಎಂಟು ಅಥವಾ ಒಂಬತ್ತು ಮೆಲನಿಸ್ಟಿಕ್ ವಿಧಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Tue, 2 May 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ