AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಂತ ಖರ್ಚಿನಲ್ಲಿ ಕೊವಿಡ್ ಆಸ್ಪತ್ರೆ, ಉಚಿತ ಚಿಕಿತ್ಸೆ ನೀಡಿದ ಈ ದೇವದೂತ ಯಾರು ಗೊತ್ತಾ?

ಸೂರತ್: ದೇಶಾದ್ಯಂತ ಕೊರೊನಾ ಹೆಮ್ಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲ ಜನರು ಕೊರೊನಾ ವಿರುದ್ಧದ ಹೊರಾಟದಲ್ಲಿ ತಮ್ಮ ನೆರವೂ ಸಮಾಜಕ್ಕಿರಲಿ ಅಂತಾ ತಮ್ಮ ತನುಮನ ಧನದಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಬಡವರ ಪಾಲಿಗೆ ದೇವದೂತನಂತೆ ಬಂದಿರುವ ಸೂರತ್‌ನ ಖಾದರ್ ಶೇಖ್ ತಮ್ಮ ಸ್ವಂತ ಬಿಲ್ಡಿಂಗ್‌ನಲ್ಲಿಯೇ ಕೊವಿಡ್ ಆಸ್ಪತ್ರೆ ಆರಂಭಿಸಿ ಬಡ ಜನರ ನೆರವಿಗೆ ಧಾವಿಸಿದ್ದಾರೆ. ಹೌದು, ವಜ್ರಗಳ ವ್ಯಾಪಾರದ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ನಗರದಲ್ಲಿ ಕೊರೊನಾ ಮಾರಿಯ ವಿರುದ್ಧದ ಹೋರಾಟಕ್ಕೆ ರಿಯಲ್ ಎಸ್ಟೇಟ್ […]

ಸ್ವಂತ ಖರ್ಚಿನಲ್ಲಿ ಕೊವಿಡ್ ಆಸ್ಪತ್ರೆ, ಉಚಿತ ಚಿಕಿತ್ಸೆ ನೀಡಿದ ಈ ದೇವದೂತ ಯಾರು ಗೊತ್ತಾ?
Guru
Guru| Edited By: |

Updated on:Jul 30, 2020 | 2:32 PM

Share

ಸೂರತ್: ದೇಶಾದ್ಯಂತ ಕೊರೊನಾ ಹೆಮ್ಮಾರಿ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲ ಜನರು ಕೊರೊನಾ ವಿರುದ್ಧದ ಹೊರಾಟದಲ್ಲಿ ತಮ್ಮ ನೆರವೂ ಸಮಾಜಕ್ಕಿರಲಿ ಅಂತಾ ತಮ್ಮ ತನುಮನ ಧನದಿಂದ ಸಹಾಯ ಮಾಡುತ್ತಿದ್ದಾರೆ. ಹೀಗೆ ಬಡವರ ಪಾಲಿಗೆ ದೇವದೂತನಂತೆ ಬಂದಿರುವ ಸೂರತ್‌ನ ಖಾದರ್ ಶೇಖ್ ತಮ್ಮ ಸ್ವಂತ ಬಿಲ್ಡಿಂಗ್‌ನಲ್ಲಿಯೇ ಕೊವಿಡ್ ಆಸ್ಪತ್ರೆ ಆರಂಭಿಸಿ ಬಡ ಜನರ ನೆರವಿಗೆ ಧಾವಿಸಿದ್ದಾರೆ.

ಹೌದು, ವಜ್ರಗಳ ವ್ಯಾಪಾರದ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ನಗರದಲ್ಲಿ ಕೊರೊನಾ ಮಾರಿಯ ವಿರುದ್ಧದ ಹೋರಾಟಕ್ಕೆ ರಿಯಲ್ ಎಸ್ಟೇಟ್ ಉದ್ಯಮಿ ಖಾದರ್ ಶೇಖ್ ಮುಂದೆ ಬಂದಿದ್ದಾರೆ. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಖಾದರ್, ಅದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನ ಖರ್ಚು ಮಾಡಬೇಕಾಯಿತು. ಈ ಸಮಯದಲ್ಲಿ ಅವರಿಗೆ ನಾನೇನೋ ಶ್ರೀಮಂತ ದುಡ್ಡು ಖರ್ಚು ಮಾಡಿದೆ. ಆದ್ರೆ ಬಡವರ ಗತಿ ಏನು ಎಂಬ ಚಿಂತೆ ಕಾಡಿದೆ. ಹೀಗಾಗಿ, ಬಡ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಸ್ವಂತ ಖರ್ಚಿನಲ್ಲಿ ಕೊವಿಡ್‌ ಆಸ್ಪತ್ರೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಖಾದರ್​ ಕೂಡಲೇ ತಮ್ಮ 30,000 ಚದರ ಅಡಿ ಆಫಿಸ್​ನ ಕೊವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿದ್ದಾರೆ. ಅಲ್ಲಿ 85 ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ. ಹಾಗೇಯೇ, ಇಲ್ಲಿ ತುರ್ತು ಚಿಕಿತ್ಸಾ ಘಟಕದ 15 ಬೆಡ್‌ಗಳು ಕೂಡಾ ಇವೆ. ಇದಕ್ಕಾಗಿ ಆಕ್ಸಿಜನ್ ವ್ಯವಸ್ಥೆ ಮಾಡಿದ್ದಾರೆ. ಅಷ್ಟೇ ಅಲ್ಲ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ಕೂಡಾ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಿದ್ದಾರೆ. ಜೊತೆಗೆ ಎಲ್ಲರಿಗೂ ಉಚಿತ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ.

ಇದಕ್ಕಾಗಿ, ಖಾದರ್​ ಶೇಖ್​ ಸೂರತ್ ನಗರ ಸಭೆ ಮತ್ತು ಆರೋಗ್ಯಾಧಿಕಾರಿಗಳಿಗೆ ತಮ್ಮ ಇಂಗಿತ ವ್ಯಕ್ತಪಡಿಸಿ ಅವರಿಂದ ಪರವಾನಗಿ ಪಡೆದಿದ್ದಾರೆ. ಅಷ್ಟೇ ಅಲ್ಲ ಅಗತ್ಯ ವೈದ್ಯರು ಮತ್ತು ಇತರ ಸಿಬ್ಬಂದಿಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿದ ನಗರ ಸಭೆ ಆಯುಕ್ತರು ಸ್ಥಳ ಪರಿಶೀಲಿಸಿ ಅಗತ್ಯ ಸಿಬ್ಬಂದಿ ಒದಗಿಸಿದ್ದಾರೆ. ಈ ಸಂಬಂಧ ವಿಶೇಷವಾಗಿ ಆಗಮಿಸಿದ್ದ ಗುಜರಾತ್ ಬಿಜೆಪಿ ಘಟಕದ ಅಧ್ಯಕ್ಷ ಸಿಪಿ ಪಾಟೀಲ್ ಕೊವಿಡ್ ಆಸ್ಪತ್ರೆಯನ್ನ ಉದ್ಘಾಟಿಸಿ ಖಾದರ್ ಶೇಖ್​ ಅವರ ಸಮಾಜ ಸೇವೆಯನ್ನ ಶ್ಲಾಘಿಸಿದ್ದಾರೆ.

Published On - 3:30 pm, Tue, 28 July 20

Follow Us
Guru
Guru
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ