AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯ; ಸರಪಂಚರೊಬ್ಬರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಭಟ್​ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಜಮ್ಮು-ಕಾಶ್ಮೀರ ವಕ್ತಾರ ಆಲ್ತಫ್ ಠಾಕೂರ್​, ಮಾನವೀಯತೆ ಮತ್ತು ಶಾಂತಿಗೆ ಈ ಉಗ್ರರು ಬಹುದೊಡ್ಡ ಶತ್ರುಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯ; ಸರಪಂಚರೊಬ್ಬರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 10, 2022 | 10:01 AM

Share

ಶ್ರೀನಗರದ ಹೊರವಲಯದಲ್ಲಿ ಸರಪಂಚ​​ರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್​ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ಇವರ ಹತ್ಯೆಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಖಂಡಿಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್​ ಫ್ರಂಟ್​ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಮೀರ್ ಭಟ್​​ರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೆಲ್​ವೊಂದರಲ್ಲಿ ಇಟ್ಟು, ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ಅನಿವಾರ್ಯ ಕೆಲಸಕ್ಕಾಗಿ ಬುಧವಾರ ಅವರು ಅಲ್ಲಿಂದ ಹೊರಬೀಳಬೇಕಾಯಿತು. ಅದೂ ಕೂಡ ತುಂಬ ಮುನ್ನೆಚ್ಚರಿಕೆಯಿಂದ, ಗೌಪ್ಯವಾಗಿಯೇ ಹೊರಬಿದ್ದಿದ್ದರು. ಆದರೂ ಕೂಡ ಭಯೋತ್ಪಾದಕರು ದಾಳಿ ಮಾಡಿದರು. ಶ್ರೀನಗರದ ಹೊರವಲಯದಲ್ಲಿರುವ ಖೋನ್​ಮೋಹ್​ ಎಂಬಲ್ಲಿ ಉಗ್ರರು ಅವರಿಗೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ. ಭಟ್​ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಜಮ್ಮು-ಕಾಶ್ಮೀರ ವಕ್ತಾರ ಆಲ್ತಫ್ ಠಾಕೂರ್​, ಮಾನವೀಯತೆ ಮತ್ತು ಶಾಂತಿಗೆ ಈ ಉಗ್ರರು ಬಹುದೊಡ್ಡ ಶತ್ರುಗಳಾಗಿದ್ದಾರೆ. ಮುಗ್ಧ ನಾಗರಿಕರನ್ನು ಕೊಲ್ಲುವುದು ತಮ್ಮ ಶೌರ್ಯ ಎಂದು ಭಾವಿಸಿದ್ದಾರೆ. ಆದರೆ ನಿಜಕ್ಕೂ ಅದು ಅವರ ಹೇಡಿತನದ ಪರಮಾವಧಿ ಎಂದು ಹೇಳಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ, ಇದು ನಿಜಕ್ಕೂ ದುರಂತ. ಸಮೀರ್​ ಭಟ್​ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರು ತುಂಬ ಒಳ್ಳೆಯ ಕೆಲಸಗಳನ್ನು ಮಾಡುವ ಇಚ್ಛೆ ಹೊಂದಿದ್ದರು. ಇದೇ ಕಾರಣಕ್ಕಾಗಿಯೇ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ನೋವು ವ್ಯಕ್ತಪಡಿಸಿದ್ದಾರೆ. ಇನ್ನುಳಿದಂತೆ ಪಿಡಿಪಿ ಪಕ್ಷ, ಅಪ್ನಿ ಪಾರ್ಟಿಗಳೂ ಸಮೀರ್ ಭಟ್​ ಹತ್ಯೆಯನ್ನು ಖಂಡಿಸಿವೆ.

ಇದನ್ನೂ ಓದಿ: ಬಟ್ಟೆಯೊಳಗೆ 52 ಹಲ್ಲಿ ಮತ್ತು ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯ ಬಂಧನ

Published On - 9:49 am, Thu, 10 March 22

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ