AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯ; ಸರಪಂಚರೊಬ್ಬರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು

ಭಟ್​ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಜಮ್ಮು-ಕಾಶ್ಮೀರ ವಕ್ತಾರ ಆಲ್ತಫ್ ಠಾಕೂರ್​, ಮಾನವೀಯತೆ ಮತ್ತು ಶಾಂತಿಗೆ ಈ ಉಗ್ರರು ಬಹುದೊಡ್ಡ ಶತ್ರುಗಳಾಗಿದ್ದಾರೆ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯ; ಸರಪಂಚರೊಬ್ಬರನ್ನು ಗುಂಡಿಕ್ಕಿ ಕೊಂದ ಭಯೋತ್ಪಾದಕರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 10, 2022 | 10:01 AM

Share

ಶ್ರೀನಗರದ ಹೊರವಲಯದಲ್ಲಿ ಸರಪಂಚ​​ರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್​ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ಇವರ ಹತ್ಯೆಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಖಂಡಿಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್​ ಫ್ರಂಟ್​ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಸಮೀರ್ ಭಟ್​​ರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೆಲ್​ವೊಂದರಲ್ಲಿ ಇಟ್ಟು, ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ಅನಿವಾರ್ಯ ಕೆಲಸಕ್ಕಾಗಿ ಬುಧವಾರ ಅವರು ಅಲ್ಲಿಂದ ಹೊರಬೀಳಬೇಕಾಯಿತು. ಅದೂ ಕೂಡ ತುಂಬ ಮುನ್ನೆಚ್ಚರಿಕೆಯಿಂದ, ಗೌಪ್ಯವಾಗಿಯೇ ಹೊರಬಿದ್ದಿದ್ದರು. ಆದರೂ ಕೂಡ ಭಯೋತ್ಪಾದಕರು ದಾಳಿ ಮಾಡಿದರು. ಶ್ರೀನಗರದ ಹೊರವಲಯದಲ್ಲಿರುವ ಖೋನ್​ಮೋಹ್​ ಎಂಬಲ್ಲಿ ಉಗ್ರರು ಅವರಿಗೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ. ಭಟ್​ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಜಮ್ಮು-ಕಾಶ್ಮೀರ ವಕ್ತಾರ ಆಲ್ತಫ್ ಠಾಕೂರ್​, ಮಾನವೀಯತೆ ಮತ್ತು ಶಾಂತಿಗೆ ಈ ಉಗ್ರರು ಬಹುದೊಡ್ಡ ಶತ್ರುಗಳಾಗಿದ್ದಾರೆ. ಮುಗ್ಧ ನಾಗರಿಕರನ್ನು ಕೊಲ್ಲುವುದು ತಮ್ಮ ಶೌರ್ಯ ಎಂದು ಭಾವಿಸಿದ್ದಾರೆ. ಆದರೆ ನಿಜಕ್ಕೂ ಅದು ಅವರ ಹೇಡಿತನದ ಪರಮಾವಧಿ ಎಂದು ಹೇಳಿದ್ದಾರೆ. ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿ, ಇದು ನಿಜಕ್ಕೂ ದುರಂತ. ಸಮೀರ್​ ಭಟ್​ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರು ತುಂಬ ಒಳ್ಳೆಯ ಕೆಲಸಗಳನ್ನು ಮಾಡುವ ಇಚ್ಛೆ ಹೊಂದಿದ್ದರು. ಇದೇ ಕಾರಣಕ್ಕಾಗಿಯೇ ಉಗ್ರರಿಂದ ಹತ್ಯೆಗೀಡಾಗಿದ್ದಾರೆ ಎಂದು ನೋವು ವ್ಯಕ್ತಪಡಿಸಿದ್ದಾರೆ. ಇನ್ನುಳಿದಂತೆ ಪಿಡಿಪಿ ಪಕ್ಷ, ಅಪ್ನಿ ಪಾರ್ಟಿಗಳೂ ಸಮೀರ್ ಭಟ್​ ಹತ್ಯೆಯನ್ನು ಖಂಡಿಸಿವೆ.

ಇದನ್ನೂ ಓದಿ: ಬಟ್ಟೆಯೊಳಗೆ 52 ಹಲ್ಲಿ ಮತ್ತು ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯ ಬಂಧನ

Published On - 9:49 am, Thu, 10 March 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ