AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ

Telangana ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ
ನೀರಲ್ಲಿ ಮುಳುಗಿದ ಬಸ್
TV9 Web
| Edited By: |

Updated on:Jul 08, 2022 | 3:08 PM

Share

ತೆಲಂಗಾಣದ (Telangana) ಮೆಹಬೂಬಾನಗರದಲ್ಲಿ (Mahbubnagar )ಶುಕ್ರವಾರ ಜಲಾವೃತವಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಅರ್ಧಕ್ಕೆ ಮುಳುಗಿದೆ. ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು ಜುಲೈ 8 ಮತ್ತು 9ಕ್ಕೆ ಇಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದೀಚೆಗೆ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ   ಬೆಳಗ್ಗೆ 8.30ರವರೆಗೆ ಆತ್ಮಕುರ್, ಸೂರ್ಯಪೇಟ್ ನಲ್ಲಿ 190.4 ಮಿಮಿ ಮಳೆಯಾಗಿದೆ. ಅದೇ ವೇಳೆ  ಖಾನಾಪುರ್ ನಲ್ಲಿ 162 ಮಿಮಿ, ಖಮ್ಮಂನ  ನಗುಲಾ ವಚಾದಲ್ಲಿ 154.5 ಮಿಮಿ ಮಳೆಯಾಗಿದೆ

ಸೂರ್ಯಪೇಟ್, ಖಮ್ಮಂ, ಭದ್ರಾದ್ರಿ ಕೊತಗುಡೆಂ ಮತ್ತು ನಲ್ಗೊಂಡಾದಲ್ಲಿ 10 ಮಿಮಿಗಿಂತಲೂ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಶುಕ್ರುವಾರ ಬೆಳಗ್ಗೆ ಮಳೆಯ ಪ್ರಮಾಣ 21.8 ಮಿಮಿ ಆಗಿದೆ. ಸಾಮಾನ್ಯವಾಗಿ  ಜುಲೈ ತಿಂಗಳಲ್ಲಿ ಇಲ್ಲಿ 244.4ಮಿಮೀ ಮಳೆಯಾಗುತ್ತದೆ. ನೈಋತ್ಯ ಮುಂಗಾರು ತೆಲಂಗಾಣದಲ್ಲಿ ಸಕ್ರಿಯವಾಗಿದ್ದು, ಜೂನ್ 1 ರಿಂದ ಜುಲೈ8ರ ವರೆಗೆ 265.7 ಮಿಮಿ ಮಳೆಯಾಗಿದೆ.

ಏತನ್ಮಧ್ಯೆ ಕರ್ನಾಟಕದಲ್ಲಿ ಭಾರೀ ಮಳೆಯಾಗಿರುವುದರಿಂದ ತುಂಗಭದ್ರಾ ಅಣೆಕಟ್ಟಿನಲ್ಲಿ ಒಳಹರಿವು ಜಾಸ್ತಿಯಾಗಿದೆ. ಪ್ರಸ್ತುತ ಇಲ್ಲಿ 82,103 ಕ್ಯುಸೆಕ್ಸ್ ಒಳಹರಿವು ಇದ್ದು  221 ಕ್ಯುಸೆಕ್ಸ್ ಹೊರ ಹರಿವು ಇದೆ.

Published On - 2:54 pm, Fri, 8 July 22

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ