AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ

Telangana ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ
ನೀರಲ್ಲಿ ಮುಳುಗಿದ ಬಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 08, 2022 | 3:08 PM

Share

ತೆಲಂಗಾಣದ (Telangana) ಮೆಹಬೂಬಾನಗರದಲ್ಲಿ (Mahbubnagar )ಶುಕ್ರವಾರ ಜಲಾವೃತವಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಅರ್ಧಕ್ಕೆ ಮುಳುಗಿದೆ. ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು ಜುಲೈ 8 ಮತ್ತು 9ಕ್ಕೆ ಇಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದೀಚೆಗೆ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ   ಬೆಳಗ್ಗೆ 8.30ರವರೆಗೆ ಆತ್ಮಕುರ್, ಸೂರ್ಯಪೇಟ್ ನಲ್ಲಿ 190.4 ಮಿಮಿ ಮಳೆಯಾಗಿದೆ. ಅದೇ ವೇಳೆ  ಖಾನಾಪುರ್ ನಲ್ಲಿ 162 ಮಿಮಿ, ಖಮ್ಮಂನ  ನಗುಲಾ ವಚಾದಲ್ಲಿ 154.5 ಮಿಮಿ ಮಳೆಯಾಗಿದೆ

ಸೂರ್ಯಪೇಟ್, ಖಮ್ಮಂ, ಭದ್ರಾದ್ರಿ ಕೊತಗುಡೆಂ ಮತ್ತು ನಲ್ಗೊಂಡಾದಲ್ಲಿ 10 ಮಿಮಿಗಿಂತಲೂ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಶುಕ್ರುವಾರ ಬೆಳಗ್ಗೆ ಮಳೆಯ ಪ್ರಮಾಣ 21.8 ಮಿಮಿ ಆಗಿದೆ. ಸಾಮಾನ್ಯವಾಗಿ  ಜುಲೈ ತಿಂಗಳಲ್ಲಿ ಇಲ್ಲಿ 244.4ಮಿಮೀ ಮಳೆಯಾಗುತ್ತದೆ. ನೈಋತ್ಯ ಮುಂಗಾರು ತೆಲಂಗಾಣದಲ್ಲಿ ಸಕ್ರಿಯವಾಗಿದ್ದು, ಜೂನ್ 1 ರಿಂದ ಜುಲೈ8ರ ವರೆಗೆ 265.7 ಮಿಮಿ ಮಳೆಯಾಗಿದೆ.

ಏತನ್ಮಧ್ಯೆ ಕರ್ನಾಟಕದಲ್ಲಿ ಭಾರೀ ಮಳೆಯಾಗಿರುವುದರಿಂದ ತುಂಗಭದ್ರಾ ಅಣೆಕಟ್ಟಿನಲ್ಲಿ ಒಳಹರಿವು ಜಾಸ್ತಿಯಾಗಿದೆ. ಪ್ರಸ್ತುತ ಇಲ್ಲಿ 82,103 ಕ್ಯುಸೆಕ್ಸ್ ಒಳಹರಿವು ಇದ್ದು  221 ಕ್ಯುಸೆಕ್ಸ್ ಹೊರ ಹರಿವು ಇದೆ.

Published On - 2:54 pm, Fri, 8 July 22

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ಸಾಲು ಸಾಲು ರಜೆ: ಮೆಜೆಸ್ಟಿಕ್​​​​ನಲ್ಲಿ ಬಸ್​​​​ಗಳಿಗೆ ಡಿಮ್ಯಾಂಡ್​​
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ