AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ

Telangana ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ.

ತೆಲಂಗಾಣ: ಜಲಾವೃತವಾದ ರಸ್ತೆಯಲ್ಲಿ ಅರ್ಧಕ್ಕೆ ಮುಳುಗಿದ ಶಾಲಾ ಬಸ್; ಬಸ್ಸಲ್ಲಿದ್ದ 30 ಮಕ್ಕಳ ರಕ್ಷಣೆ
ನೀರಲ್ಲಿ ಮುಳುಗಿದ ಬಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 08, 2022 | 3:08 PM

Share

ತೆಲಂಗಾಣದ (Telangana) ಮೆಹಬೂಬಾನಗರದಲ್ಲಿ (Mahbubnagar )ಶುಕ್ರವಾರ ಜಲಾವೃತವಾದ ರಸ್ತೆಯಲ್ಲಿ ಶಾಲಾ ಬಸ್ಸೊಂದು ಅರ್ಧಕ್ಕೆ ಮುಳುಗಿದೆ. ಮಾಧ್ಯಮಗಳ ವರದಿ ಪ್ರಕಾರ ಈ ಬಸ್ಸಲ್ಲಿ 30 ವಿದ್ಯಾರ್ಥಿಗಳಿದ್ದರು. ಬಸ್ಸಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿದ್ದು, ನಂತರ ಆ ಬಸ್ಸನ್ನು ಅಲ್ಲಿಂದ ಮೇಲೆತ್ತಲಾಗಿದೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು ಜುಲೈ 8 ಮತ್ತು 9ಕ್ಕೆ ಇಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ದಿನಗಳಿಂದೀಚೆಗೆ ತೆಲಂಗಾಣದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ   ಬೆಳಗ್ಗೆ 8.30ರವರೆಗೆ ಆತ್ಮಕುರ್, ಸೂರ್ಯಪೇಟ್ ನಲ್ಲಿ 190.4 ಮಿಮಿ ಮಳೆಯಾಗಿದೆ. ಅದೇ ವೇಳೆ  ಖಾನಾಪುರ್ ನಲ್ಲಿ 162 ಮಿಮಿ, ಖಮ್ಮಂನ  ನಗುಲಾ ವಚಾದಲ್ಲಿ 154.5 ಮಿಮಿ ಮಳೆಯಾಗಿದೆ

ಸೂರ್ಯಪೇಟ್, ಖಮ್ಮಂ, ಭದ್ರಾದ್ರಿ ಕೊತಗುಡೆಂ ಮತ್ತು ನಲ್ಗೊಂಡಾದಲ್ಲಿ 10 ಮಿಮಿಗಿಂತಲೂ ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಶುಕ್ರುವಾರ ಬೆಳಗ್ಗೆ ಮಳೆಯ ಪ್ರಮಾಣ 21.8 ಮಿಮಿ ಆಗಿದೆ. ಸಾಮಾನ್ಯವಾಗಿ  ಜುಲೈ ತಿಂಗಳಲ್ಲಿ ಇಲ್ಲಿ 244.4ಮಿಮೀ ಮಳೆಯಾಗುತ್ತದೆ. ನೈಋತ್ಯ ಮುಂಗಾರು ತೆಲಂಗಾಣದಲ್ಲಿ ಸಕ್ರಿಯವಾಗಿದ್ದು, ಜೂನ್ 1 ರಿಂದ ಜುಲೈ8ರ ವರೆಗೆ 265.7 ಮಿಮಿ ಮಳೆಯಾಗಿದೆ.

ಏತನ್ಮಧ್ಯೆ ಕರ್ನಾಟಕದಲ್ಲಿ ಭಾರೀ ಮಳೆಯಾಗಿರುವುದರಿಂದ ತುಂಗಭದ್ರಾ ಅಣೆಕಟ್ಟಿನಲ್ಲಿ ಒಳಹರಿವು ಜಾಸ್ತಿಯಾಗಿದೆ. ಪ್ರಸ್ತುತ ಇಲ್ಲಿ 82,103 ಕ್ಯುಸೆಕ್ಸ್ ಒಳಹರಿವು ಇದ್ದು  221 ಕ್ಯುಸೆಕ್ಸ್ ಹೊರ ಹರಿವು ಇದೆ.

Published On - 2:54 pm, Fri, 8 July 22

Follow Us
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
ಅಂಬೋಲಿ ಫಾಲ್ಸ್​​ ನೋಡಲು ಮುಗಿಬಿದ್ದ ಪ್ರವಾಸಿಗರು
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
‘ದೇವಿ’ ಸಿನಿಮಾ ಬಗ್ಗೆ ಸಂಭಾಷಣೆಕಾರ ಮಾಸ್ತಿ ಹೇಳಿದ್ದೇನು: ವಿಡಿಯೋ
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
ಬೇಬಿ ಯಡಿಯೂರಪ್ಪ ತಮ್ಮ ನಾಯಕರ ಮೇಲಿರುವ ಕೇಸ್​ಗಳ ಬಗ್ಗೆ ಮಾತನಾಡಲಿ: BKH
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
'ನಮ್ಮಿಬ್ರನ್ನ ಊರಿಗೆ ಕರ್ಕೊಂಡು ಹೋಗಿ': 112ಕ್ಕೆ ಕರೆ ಮಾಡಿ ದಂಪತಿ ಕಿರಿಕ್!
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಮಣಿಪಾಲ ಬಳಿ ಕಂದಕಕ್ಕೆ ಉರುಳಿದ ಶಾಲಾ ಬಸ್
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್