AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ

ಹೆಂಡತಿ, ಸೋದರಳಿಯ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ
ಎಸಿಪಿ ಭರತ್ ಗಾಯಕ್ವಾಡ್ ದಂಪತಿ
ಅಕ್ಷಯ್​ ಪಲ್ಲಮಜಲು​​
|

Updated on: Jul 24, 2023 | 3:48 PM

Share

ಪುಣೆ, ಜು.24: 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್​ರೊಬ್ಬರು (ಎಸಿಪಿ) ಇಂದು (ಜು.24) ಬೆಳಿಗ್ಗೆ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ. ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ. ಜತೆಗೆ ತನ್ನ ಪತ್ನಿ ಮತ್ತು ಸೋದರಳಿಯನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಭರತ್ ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಭರತ್ ಗಾಯಕ್ವಾಡ್ ಅವರು ತಮ್ಮ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿದ ತಕ್ಷಣ ಅವರ ಮಗ ಮತ್ತು ಸೋದರಳಿಯ ರೂಮ್​​​ನಿಂದ ಓಡಿಬಂದಿದ್ದಾರೆ. ಮೊದಲು ರೂಮ್​​ ಬಾಗಿಲು ತೆರೆದು ಹೊರಗೆ ಬಂದ ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಭರತ್ ಗಾಯಕ್ವಾಡ್ ಕೂಡ ತಮ್ಮ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ:ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ 

ಗುಂಡೇಟಿನಿಂದ ಸಾವನ್ನಪ್ಪಿರುವವರನ್ನು ಎಸಿಪಿ ಭರತ್ ಗಾಯಕ್ವಾಡ್ ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್