AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ

ಹೆಂಡತಿ, ಸೋದರಳಿಯ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ಹೆಂಡತಿ, ಸೋದರಳಿಯನಿಗೆ ಗುಂಡು ಹಾರಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ಪುಣೆಯ ಹಿರಿಯ ಪೋಲೀಸ್ ಅಧಿಕಾರಿ
ಎಸಿಪಿ ಭರತ್ ಗಾಯಕ್ವಾಡ್ ದಂಪತಿ
ಅಕ್ಷಯ್​ ಪಲ್ಲಮಜಲು​​
|

Updated on: Jul 24, 2023 | 3:48 PM

Share

ಪುಣೆ, ಜು.24: 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್​ರೊಬ್ಬರು (ಎಸಿಪಿ) ಇಂದು (ಜು.24) ಬೆಳಿಗ್ಗೆ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದಿದೆ. ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ. ಜತೆಗೆ ತನ್ನ ಪತ್ನಿ ಮತ್ತು ಸೋದರಳಿಯನನ್ನು ಕೂಡ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾನೇರ್ ಪ್ರದೇಶದ ಎಸಿಪಿ ಭರತ್ ಗಾಯಕ್ವಾಡ್ ಅವರ ಬಂಗಲೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಚತುರ್ಶೃಂಗಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಭರತ್ ಗಾಯಕ್ವಾಡ್ ಅವರನ್ನು ಅಮರಾವತಿಯಲ್ಲಿ ಎಸಿಪಿಯಾಗಿ ನಿಯೋಜಿಸಲಾಗಿತ್ತು. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಎಸಿಪಿ ಭರತ್ ಗಾಯಕ್ವಾಡ್ ಅವರು ತಮ್ಮ ಪತ್ನಿಯ ತಲೆಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನ ಸದ್ದು ಕೇಳಿದ ತಕ್ಷಣ ಅವರ ಮಗ ಮತ್ತು ಸೋದರಳಿಯ ರೂಮ್​​​ನಿಂದ ಓಡಿಬಂದಿದ್ದಾರೆ. ಮೊದಲು ರೂಮ್​​ ಬಾಗಿಲು ತೆರೆದು ಹೊರಗೆ ಬಂದ ತಮ್ಮ ಸೋದರಳಿಯನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಭರತ್ ಗಾಯಕ್ವಾಡ್ ಕೂಡ ತಮ್ಮ ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ:ಪತ್ನಿಯನ್ನು ಕೊಲೆ ಮಾಡಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ 

ಗುಂಡೇಟಿನಿಂದ ಸಾವನ್ನಪ್ಪಿರುವವರನ್ನು ಎಸಿಪಿ ಭರತ್ ಗಾಯಕ್ವಾಡ್ ಅವರ ಪತ್ನಿ ಮೋನಿ ಗಾಯಕ್ವಾಡ್ (44) ಮತ್ತು ಸೋದರಳಿಯ ದೀಪಕ್ (35) ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ