ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು

ಉತ್ತರ ಪ್ರದೇಶದ ವಿಚಿತ್ರ ಸಂಪ್ರದಾಯವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಜೊತೆಗೆ ಸಾಕಷ್ಟು ಟೀಕೆಗೂ ಕಾರಣವಾಗಿದೆ. ಏನಿದು ಘಟನೆ ಇಲ್ಲಿದೆ ಸಂಪೂರ್ಣ ವಿವರ.

ಕುದಿಯುತ್ತಿರುವ ಹಾಲಿನಲ್ಲಿ ಹಸುಗೂಸಿನ ಮುಖ ತೊಳೆದ ಅರ್ಚಕ, ಇದೆಂತಹ ಸಂಪ್ರದಾಯ ಎಂದ ನೆಟ್ಟಿಗರು
ಸಾಂದರ್ಭಿಕ ಚಿತ್ರ
Image Credit source: Emma's Diary

Updated on: Jul 01, 2023 | 4:34 PM

ಉತ್ತರಪ್ರದೇಶ: ಧಾರ್ಮಿಕ ಆಚರಣೆಯ ಭಾಗವಾಗಿ ಪೂಜಾರಿಯೊಬ್ಬರು ಹಸುಗೂಸಿನ ಮುಖ ಹಾಗೂ ಎದೆಯ ಭಾಗಕ್ಕೆ ಕುದಿಯುತ್ತಿರುವ ಹಾಲಿನ ಕೆನೆಯನ್ನು ಹಚ್ಚುತ್ತಿರುವುದು ವಿಡಿಯೋ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​​ ಆಗಿದೆ. ಈ ವಿಚಿತ್ರ ಆಚರಣೆ ಕಂಡುಬಂದಿದ್ದು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಶ್ರವಣಪುರ ಗ್ರಾಮದಲ್ಲಿ ಎಂದು ತಿಳಿದು ಬಂದಿದೆ. ವಿಡಿಯೋ ಎಲ್ಲೆಡೆ ವೈರಲ್​​​ ಆಗುತ್ತಿದ್ದಂತೆ ನೆಟ್ಟಿಗರಿಂದ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿವೆ.

ಪೂಜಾರಿಯು ಮಗುವನ್ನು ತನ್ನ ಮೊಣಕಾಲಿನ ಮೇಲೆ ಕೂರಿಸಿಕೊಂಡು, ಕುದಿಯುವ ಹಾಲಿನ ಪಾತ್ರೆಯಿಂದ ನೊರೆಯನ್ನು ತೆಗೆದು ಮಗುವಿನ ಮುಖ ಮತ್ತು ಎದೆಯ ಭಾಗದ ಮೇಲೆ ಹಚ್ಚುತ್ತಿರುವುದನ್ನು ಕಾಣಬಹುದು. ಮಗು ಎಷ್ಟೇ ಬಿಕ್ಕಿ ಬಿಕ್ಕಿ ಅಳುತ್ತಿದ್ದರೂ ಕೂಡ ತನ್ನ ಆಚರಣೆಯನ್ನು ಮಗ್ನನಾಗಿರುವ ಪೂಜಾರಿಯನ್ನು ವಾರಣಾಸಿಯ ಪಂಡಿತ್ ಅನಿಲ್ ಭಗತ್ ಎಂದು ಗುರುತಿಸಲಾಗಿದೆ.

ವಿಚಿತ್ರ ಸಂಪ್ರದಾಯದ ವೈರಲ್​ ವಿಡಿಯೋ ಇಲ್ಲಿದೆ ನೋಡಿ: 

ಇದನ್ನೂ ಓದಿ: ‘ಸಿಗರೇಟು ಭಾಗ್ಯದ ನಾರಿಯರು’ ಇದೇನು ನಿಜವೋ ನಾಟಕವೋ ರಾಜಕೀಯದಾಟವೋ?

ವರದಿಗಳ ಪ್ರಕಾರ, ಈ ವಿಚಿತ್ರ ಆಚರಣೆಯು ಶ್ರವಣಪುರ ಗ್ರಾಮದಲ್ಲಿ ಕಾಶಿ ದಾಸ್ ಬಾಬಾ ಪೂಜೆಯ ಭಾಗವಾಗಿದ್ದು, ಇದು ಯಾದವ ಸಮುದಾಯದಲ್ಲಿ ಸಾಮಾನ್ಯವಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us