AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ
ಉಕ್ರೇನ್​​ನಿಂದ ಭಾರತಕ್ಕೆ ಬಂದವರು
TV9 Web
| Edited By: |

Updated on:Feb 23, 2022 | 10:26 AM

Share

ಮುಂಬೈ: ಉಕ್ರೇನ್​-ರಷ್ಯಾ ಗಡಿಯಲ್ಲಿ (Russia-Ukraine Border) ಉದ್ವಿಗ್ನತೆ ಮುಂದುವರಿದ ಬೆನ್ನಲ್ಲೇ ಭಾರತ ಉಕ್ರೇನ್​​​ನಿಂದ ಭಾರತೀಯರನ್ನು ಕರೆತರಲು ನಿನ್ನೆಯಿಂದ ಏರ್​ ಇಂಡಿಯಾ ವಿಮಾನ ಸಂಚಾರ ಶುರು ಮಾಡಿದೆ. ನಿನ್ನೆ (ಫೆ.22) ಈ ವಿಮಾನದಲ್ಲಿ ಉಕ್ರೇನ್​​ನಿಂದ 242 ಭಾರತೀಯರು ವಾಪಸ್​ ದೇಶಕ್ಕೆ ಬಂದಿದ್ದಾರೆ. ಉಕ್ರೇನ್​​ನಿಂದ ಬಂದ ಏರ್​ ಇಂಡಿಯಾ ವಿಮಾನ ನಿನ್ನೆ ರಾತ್ರಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಲ್ಯಾಂಡ್ ಆಗಿದೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದ್ದು, ಉಕ್ರೇನ್​​ನಲ್ಲಿರುವ ಭಾರತೀಯರನ್ನು ವಾಪಸ್​ ಕರೆತರಲು ಮಂಗಳವಾರ ಮುಂಜಾನೆ 7.30ಕ್ಕೆ, ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಹೊರಟಿತ್ತು. ಸುಮಾರು 242 ಪ್ರಯಾಣಿಕರನ್ನು ಒಳಗೊಂಡ ಈ ವಿಮಾನ ಕೈವ್​​ನಿಂದ ಸಂಜೆ 5.40ಕ್ಕೆ ಟೇಕ್​ ಆಫ್​ ಆಯಿತು. ರಾತ್ರಿ 10.15ರ ಹೊತ್ತಿಗೆ ದೆಹಲಿ ತಲುಪಿದೆ ಎಂದು ಮಾಹಿತಿ ನೀಡಿದೆ.

ಸದ್ಯ ಉಕ್ರೇನ್​​ನಲ್ಲಿರುವುದು ಭಾರತೀಯರಿಗೆ ಸುರಕ್ಷಿತವಲ್ಲ. ಹೀಗಾಗಿ ಇಲ್ಲಿರುವ ವಿದ್ಯಾರ್ಥಿಗಳೂ ಸೇರಿ ಎಲ್ಲರೂ ಶೀಘ್ರದಲ್ಲೇ ಭಾರತಕ್ಕೆ ಮರಳಿ ಎಂದು ಕೈವ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿತ್ತು. ಅದರಂತೆ ಏರ್​ ಇಂಡಿಯಾ ವಿಮಾನ ವ್ಯವಸ್ಥೆಯನ್ನೂ ಮಾಡಲಾಗಿದೆ. ಸದ್ಯ ಒಂದು ವಿಮಾನ ಭಾರತೀಯರನ್ನು ಕರೆತಂದಿದ್ದು, ಇನ್ನೊಂದು ಫ್ಲೈಟ್​ ಗುರುವಾರ ಹಾಗೂ ಮತ್ತೊಂದು ವಿಮಾನ ಶನಿವಾರ ಉಕ್ರೇನ್​ನಿಂದ ಭಾರತೀಯರನ್ನು ಕರೆ ತರಲಿದೆ.

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಬೇಡಿಕೆಯನ್ನು ನೋಡಿಕೊಂಡು ಮುಂದುವರಿಯಲಾಗುವುದು ಎಂದು ಸಿವಿಲ್​ ಏವಿಯೇಶನ್​ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ ಅಲ್ಲಿ ಯುದ್ಧ  ಭೀತಿ ಇರುವ ಕಾರಣ, ಭಾರತೀಯರನ್ನು ರಕ್ಷಿಸುವ ಅಗತ್ಯವಿದೆ. ಹೀಗಾಗಿ ಹೆಚ್ಚೆಚ್ಚು ವಿಮಾನಗಳ ಕಾರ್ಯಾಚರಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಖಾಸಗಿ ಏರ್​​ಲೈನ್ಸ್​​ಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

Published On - 8:53 am, Wed, 23 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ