AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ
ಉಕ್ರೇನ್​​ನಿಂದ ಭಾರತಕ್ಕೆ ಬಂದವರು
TV9 Web
| Edited By: |

Updated on:Feb 23, 2022 | 10:26 AM

Share

ಮುಂಬೈ: ಉಕ್ರೇನ್​-ರಷ್ಯಾ ಗಡಿಯಲ್ಲಿ (Russia-Ukraine Border) ಉದ್ವಿಗ್ನತೆ ಮುಂದುವರಿದ ಬೆನ್ನಲ್ಲೇ ಭಾರತ ಉಕ್ರೇನ್​​​ನಿಂದ ಭಾರತೀಯರನ್ನು ಕರೆತರಲು ನಿನ್ನೆಯಿಂದ ಏರ್​ ಇಂಡಿಯಾ ವಿಮಾನ ಸಂಚಾರ ಶುರು ಮಾಡಿದೆ. ನಿನ್ನೆ (ಫೆ.22) ಈ ವಿಮಾನದಲ್ಲಿ ಉಕ್ರೇನ್​​ನಿಂದ 242 ಭಾರತೀಯರು ವಾಪಸ್​ ದೇಶಕ್ಕೆ ಬಂದಿದ್ದಾರೆ. ಉಕ್ರೇನ್​​ನಿಂದ ಬಂದ ಏರ್​ ಇಂಡಿಯಾ ವಿಮಾನ ನಿನ್ನೆ ರಾತ್ರಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಲ್ಯಾಂಡ್ ಆಗಿದೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದ್ದು, ಉಕ್ರೇನ್​​ನಲ್ಲಿರುವ ಭಾರತೀಯರನ್ನು ವಾಪಸ್​ ಕರೆತರಲು ಮಂಗಳವಾರ ಮುಂಜಾನೆ 7.30ಕ್ಕೆ, ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಹೊರಟಿತ್ತು. ಸುಮಾರು 242 ಪ್ರಯಾಣಿಕರನ್ನು ಒಳಗೊಂಡ ಈ ವಿಮಾನ ಕೈವ್​​ನಿಂದ ಸಂಜೆ 5.40ಕ್ಕೆ ಟೇಕ್​ ಆಫ್​ ಆಯಿತು. ರಾತ್ರಿ 10.15ರ ಹೊತ್ತಿಗೆ ದೆಹಲಿ ತಲುಪಿದೆ ಎಂದು ಮಾಹಿತಿ ನೀಡಿದೆ.

ಸದ್ಯ ಉಕ್ರೇನ್​​ನಲ್ಲಿರುವುದು ಭಾರತೀಯರಿಗೆ ಸುರಕ್ಷಿತವಲ್ಲ. ಹೀಗಾಗಿ ಇಲ್ಲಿರುವ ವಿದ್ಯಾರ್ಥಿಗಳೂ ಸೇರಿ ಎಲ್ಲರೂ ಶೀಘ್ರದಲ್ಲೇ ಭಾರತಕ್ಕೆ ಮರಳಿ ಎಂದು ಕೈವ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿತ್ತು. ಅದರಂತೆ ಏರ್​ ಇಂಡಿಯಾ ವಿಮಾನ ವ್ಯವಸ್ಥೆಯನ್ನೂ ಮಾಡಲಾಗಿದೆ. ಸದ್ಯ ಒಂದು ವಿಮಾನ ಭಾರತೀಯರನ್ನು ಕರೆತಂದಿದ್ದು, ಇನ್ನೊಂದು ಫ್ಲೈಟ್​ ಗುರುವಾರ ಹಾಗೂ ಮತ್ತೊಂದು ವಿಮಾನ ಶನಿವಾರ ಉಕ್ರೇನ್​ನಿಂದ ಭಾರತೀಯರನ್ನು ಕರೆ ತರಲಿದೆ.

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಬೇಡಿಕೆಯನ್ನು ನೋಡಿಕೊಂಡು ಮುಂದುವರಿಯಲಾಗುವುದು ಎಂದು ಸಿವಿಲ್​ ಏವಿಯೇಶನ್​ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ ಅಲ್ಲಿ ಯುದ್ಧ  ಭೀತಿ ಇರುವ ಕಾರಣ, ಭಾರತೀಯರನ್ನು ರಕ್ಷಿಸುವ ಅಗತ್ಯವಿದೆ. ಹೀಗಾಗಿ ಹೆಚ್ಚೆಚ್ಚು ವಿಮಾನಗಳ ಕಾರ್ಯಾಚರಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಖಾಸಗಿ ಏರ್​​ಲೈನ್ಸ್​​ಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

Published On - 8:53 am, Wed, 23 February 22

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ