AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ.

Video: ಯುದ್ಧಾತಂಕ ಎದುರಾದ ಉಕ್ರೇನ್​​ನಿಂದ 242 ಭಾರತೀಯರನ್ನು ಕರೆತಂದ ಏರ್​ ಇಂಡಿಯಾ ವಿಮಾನ
ಉಕ್ರೇನ್​​ನಿಂದ ಭಾರತಕ್ಕೆ ಬಂದವರು
TV9 Web
| Edited By: |

Updated on:Feb 23, 2022 | 10:26 AM

Share

ಮುಂಬೈ: ಉಕ್ರೇನ್​-ರಷ್ಯಾ ಗಡಿಯಲ್ಲಿ (Russia-Ukraine Border) ಉದ್ವಿಗ್ನತೆ ಮುಂದುವರಿದ ಬೆನ್ನಲ್ಲೇ ಭಾರತ ಉಕ್ರೇನ್​​​ನಿಂದ ಭಾರತೀಯರನ್ನು ಕರೆತರಲು ನಿನ್ನೆಯಿಂದ ಏರ್​ ಇಂಡಿಯಾ ವಿಮಾನ ಸಂಚಾರ ಶುರು ಮಾಡಿದೆ. ನಿನ್ನೆ (ಫೆ.22) ಈ ವಿಮಾನದಲ್ಲಿ ಉಕ್ರೇನ್​​ನಿಂದ 242 ಭಾರತೀಯರು ವಾಪಸ್​ ದೇಶಕ್ಕೆ ಬಂದಿದ್ದಾರೆ. ಉಕ್ರೇನ್​​ನಿಂದ ಬಂದ ಏರ್​ ಇಂಡಿಯಾ ವಿಮಾನ ನಿನ್ನೆ ರಾತ್ರಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Indira Gandhi International Airport) ಲ್ಯಾಂಡ್ ಆಗಿದೆ. ಈ ಬಗ್ಗೆ ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದ್ದು, ಉಕ್ರೇನ್​​ನಲ್ಲಿರುವ ಭಾರತೀಯರನ್ನು ವಾಪಸ್​ ಕರೆತರಲು ಮಂಗಳವಾರ ಮುಂಜಾನೆ 7.30ಕ್ಕೆ, ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಹೊರಟಿತ್ತು. ಸುಮಾರು 242 ಪ್ರಯಾಣಿಕರನ್ನು ಒಳಗೊಂಡ ಈ ವಿಮಾನ ಕೈವ್​​ನಿಂದ ಸಂಜೆ 5.40ಕ್ಕೆ ಟೇಕ್​ ಆಫ್​ ಆಯಿತು. ರಾತ್ರಿ 10.15ರ ಹೊತ್ತಿಗೆ ದೆಹಲಿ ತಲುಪಿದೆ ಎಂದು ಮಾಹಿತಿ ನೀಡಿದೆ.

ಸದ್ಯ ಉಕ್ರೇನ್​​ನಲ್ಲಿರುವುದು ಭಾರತೀಯರಿಗೆ ಸುರಕ್ಷಿತವಲ್ಲ. ಹೀಗಾಗಿ ಇಲ್ಲಿರುವ ವಿದ್ಯಾರ್ಥಿಗಳೂ ಸೇರಿ ಎಲ್ಲರೂ ಶೀಘ್ರದಲ್ಲೇ ಭಾರತಕ್ಕೆ ಮರಳಿ ಎಂದು ಕೈವ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿತ್ತು. ಅದರಂತೆ ಏರ್​ ಇಂಡಿಯಾ ವಿಮಾನ ವ್ಯವಸ್ಥೆಯನ್ನೂ ಮಾಡಲಾಗಿದೆ. ಸದ್ಯ ಒಂದು ವಿಮಾನ ಭಾರತೀಯರನ್ನು ಕರೆತಂದಿದ್ದು, ಇನ್ನೊಂದು ಫ್ಲೈಟ್​ ಗುರುವಾರ ಹಾಗೂ ಮತ್ತೊಂದು ವಿಮಾನ ಶನಿವಾರ ಉಕ್ರೇನ್​ನಿಂದ ಭಾರತೀಯರನ್ನು ಕರೆ ತರಲಿದೆ.

ಏರ್​ ಇಂಡಿಯಾ ಈ ಹಿಂದೆ ಉಕ್ರೇನ್​ಗೆ ಯಾವುದೇ ವಾಣಿಜ್ಯ ವಿಮಾನ ಕಾರ್ಯಾಚರಣೆ ನಡೆಸಿರಲಿಲ್ಲ. ಇದೀಗ ಏರ್​ ಇಂಡಿಯಾ ವಿಮಾನ ಸಂಚಾರ ಪ್ರಾರಂಭ ಮಾಡಿದ ಬೆನ್ನಲ್ಲೇ, ಭಾರತದ ಇತರ ವಿಮಾನ ಆಪರೇಟರ್​ಗಳೂ ಕೂಡ ಆಸಕ್ತಿ ತೋರಿಸುತ್ತಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತೀಯರ ಬೇಡಿಕೆಯನ್ನು ನೋಡಿಕೊಂಡು ಮುಂದುವರಿಯಲಾಗುವುದು ಎಂದು ಸಿವಿಲ್​ ಏವಿಯೇಶನ್​ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸದ್ಯ ಅಲ್ಲಿ ಯುದ್ಧ  ಭೀತಿ ಇರುವ ಕಾರಣ, ಭಾರತೀಯರನ್ನು ರಕ್ಷಿಸುವ ಅಗತ್ಯವಿದೆ. ಹೀಗಾಗಿ ಹೆಚ್ಚೆಚ್ಚು ವಿಮಾನಗಳ ಕಾರ್ಯಾಚರಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಖಾಸಗಿ ಏರ್​​ಲೈನ್ಸ್​​ಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿನಾಯಕನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಮುಸ್ಲಿಂ ಕುಟುಂಬ; ಇದು ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪ್ರತೀಕ

Published On - 8:53 am, Wed, 23 February 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ