AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ವೇಗವಾಗಿ ಬಂದ ಕಾರು ಟ್ರೇಲರ್‌ ಲಾರಿಗೆ ಡಿಕ್ಕಿ, 4 ಮಂದಿ ಸಾವು

ಕಾರು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬಂಡನ್ವಾರ ನಗರದ ಬಳಿಯ ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

Accident: ವೇಗವಾಗಿ ಬಂದ ಕಾರು ಟ್ರೇಲರ್‌ ಲಾರಿಗೆ ಡಿಕ್ಕಿ, 4 ಮಂದಿ ಸಾವು
A speeding car collides with a trailer lorry, 4 people die kannada accident News Image Credit source: india today
TV9 Web
| Edited By: |

Updated on:Dec 23, 2022 | 10:13 AM

Share

ರಾಜಸ್ಥಾನ: ಕಾರು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬಂಡನ್ವಾರ ನಗರದ ಬಳಿಯ ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಮೃತರನ್ನು ಹವಾ ಸಿಂಗ್, ಸಂದೀಪ್ ಸಿಂಗ್, ಶೇರ್ ಸಿಂಗ್, ಸತ್ವೀರ್ ಎಂದು ಗುರುತಿಸಲಾಗಿದೆ. ಅವರು ಮಧ್ಯಪ್ರದೇಶದ ಉಜ್ಜಯಿನಿಯಿಂದ ಮಹಾಕಾಲ್‌ಗೆ ಭೇಟಿ ನೀಡಿದ ನಂತರ ಕೊಟ್‌ಪುಟ್ಲಿಗೆ ಹಿಂತಿರುಗುತ್ತಿದ್ದರು ಎಂದು ಹೇಳಲಾಗಿದೆ.

ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ ಅವರ ಕಾರು ವೇಗವಾಗಿ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಚೌಕಿ ಉಸ್ತುವಾರಿ ಗಿರಧಾರಿ ಸಿಂಗ್ ಮೇಜಪ್ತಾ ಸ್ಥಳಕ್ಕೆ ಆಗಮಿಸಿ ಮೃತದೇಹಗಳನ್ನು ವಾಹನದಿಂದ ಹೊರತೆಗೆದಿದ್ದಾರೆ. ಹೆದ್ದಾರಿ ಆಂಬ್ಯುಲೆನ್ಸ್ ಸಹಾಯದಿಂದ ಮೃತದೇಹಗಳನ್ನು ಭಿನಾಯ್‌ನಲ್ಲಿರುವ ಶವಾಗಾರಕ್ಕೆ ಕಳುಹಿಸಲಾಗಿದೆ.

ಇದನ್ನು ಓದಿ:Noida Bus Accident: ದಟ್ಟ ಮಂಜು: ಕಂಟೈನರ್​ಗೆ ಬಸ್​ ಡಿಕ್ಕಿ ಓರ್ವ ಸಾವು, 10 ಮಂದಿಗೆ ಗಂಭೀರ ಗಾಯ

ಬಹುತೇಕ ಟ್ರೇಲರ್‌ಗಳು ಎನ್‌ಎಚ್‌ 48ರಲ್ಲಿ ರಸ್ತೆಬದಿಯಲ್ಲಿ ನಿಂತಿರುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಕೂಡ ಈ ರಸ್ತೆ ಮಾರ್ಗದಲ್ಲಿ ಬಸ್ ಟ್ರೇಲರ್‌ ಲಾರಿ​ಗೆ ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಗಾಯಗೊಂಡಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 am, Fri, 23 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ