ಯೂನಿವರ್ಸಿಟಿ ಕ್ಲಾಸ್​ ರೂಂನಲ್ಲೇ ನಮಾಜ್​ ಮಾಡಿದ ವಿದ್ಯಾರ್ಥಿನಿ; ತನಿಖೆ ನಡೆಸುತ್ತಿದ್ದೇವೆ ಎಂದ ಉಪ ಕುಲಪತಿ

ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಡಾ. ಹರಿಸಿಂಗ್​ ಗೌರ್ ಸಾಗರ್​ ಯೂನಿರ್ವಸಿಟಿ ಉಪಕುಲಪತಿ ನೀಲಿಮಾ ಗುಪ್ತಾ, ನಾವು ಈಗಾಗಲೇ ತನಿಖೆ ಪ್ರಾರಂಭಿಸಿದ್ದೇವೆ.  ವಿದ್ಯಾರ್ಥಿನಿ ತರಗತಿಯಲ್ಲಿ ನಮಾಜ್ ಮಾಡಿದ್ದರ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿಯನ್ನು ರಚಿಸಿದ್ದೇವೆ ಎಂದಿದ್ದಾರೆ.

ಯೂನಿವರ್ಸಿಟಿ ಕ್ಲಾಸ್​ ರೂಂನಲ್ಲೇ ನಮಾಜ್​ ಮಾಡಿದ ವಿದ್ಯಾರ್ಥಿನಿ; ತನಿಖೆ ನಡೆಸುತ್ತಿದ್ದೇವೆ ಎಂದ ಉಪ ಕುಲಪತಿ
ವಿದ್ಯಾರ್ಥಿನಿ ನಮಾಜ್ ಮಾಡುತ್ತಿರುವುದು ಮತ್ತು ಉಪಕುಲಪತಿ
Follow us
| Updated By: Lakshmi Hegde

Updated on: Mar 26, 2022 | 5:37 PM

ಭೋಪಾಲ್​: ಮಧ್ಯಪ್ರದೇಶದ (Madhya Pradesh) ಸಾಗರ್​​ ನಗರದಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕ್ಲಾಸ್​ರೂಂನಲ್ಲಿಯೇ ನಮಾಜ್​ ಮಾಡಿದ ಫೋಟೋ, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿರುವ ಬೆನ್ನಲ್ಲೇ, ಯೂನಿರ್ವಸಿಟಿ ಈ ಬಗ್ಗೆ ತನಿಖೆ ಆದೇಶ ನೀಡಿದೆ. ಸಾಗರ್​​ನಲ್ಲಿರುವ ಡಾ.ಹರಿಸಿಂಗ್​ ಗೌರ್​ ವಿಶ್ವವಿದ್ಯಾಲಯದ ತರಗತಿ ಕೋಣೆಯೊಂದರಲ್ಲಿ ಯುವತಿ ನಮಾಜ್ ಮಾಡುತ್ತಿರುವ ವಿಡಿಯೋವನ್ನು ಹಿಂದು ಜಾಗರಣ ಮಂಚ್​ ಮೊದಲು ಬಿಡುಗಡೆ ಮಾಡಿತ್ತು. ಅದು ಯೂನಿವರ್ಸಿಟಿಯ ಗಮನಕ್ಕೂ ತಂದಿದೆ. ವಿಶ್ವವಿದ್ಯಾಲಯಕ್ಕೆ ಈ ವಿಡಿಯೋ ಸಲ್ಲಿಸಿದ ಹಿಂದು ಜಾಗರಣ್​ ಮಂಚ್, ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯನ್ನೂ ಮಾಡಿತ್ತು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಹಿಂದು ಜಾಗರಣ ಮಂಚ್​​ ಸಾಗರ ಘಟಕದ ಅಧ್ಯಕ್ಷ ಉಮೇಶ್ ಸರಫ್​, ವಿದ್ಯಾರ್ಥಿನಿ ಅನೇಕ ದಿನಗಳಿಂದಲೂ ಹಿಜಾಬ್ ಧರಿಸಿಯೇ ತರಗತಿಗೆ ಬರುತ್ತಿದ್ದಾಳೆ. ಅಷ್ಟೇ ಅಲ್ಲ ಶುಕ್ರವಾರ ಯೂನಿವರ್ಸಿಟಿ ಕ್ಲಾಸ್​ ರೂಂನಲ್ಲಿಯೇ ನಮಾಜ್ ಕೂಡ ಮಾಡಿದ್ದು, ವಿಡಿಯೋ ಸಾಕ್ಷಿಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಇಂಥ ಧಾರ್ಮಿಕ ಚಟುವಟಿಕೆಗಳಿಗೆ ಅನುಮತಿ, ಅವಕಾಶ ಇರುವುದಿಲ್ಲ. ನಾವು ಈ ವಿಚಾರವಾಗಿ ಯೂನಿರ್ವಸಿಟಿಯ ಉಪಕುಲಪತಿ ಮತ್ತು ರಿಜಿಸ್ಟ್ರಾರ್​ಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಕರ್ನಾಟಕ ಹಿಜಾಬ್​ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್​ ನೀಡಿರುವ ತೀರ್ಪನ್ನೂ ಉಲ್ಲೇಖಿಸಿದ್ದಾರೆ.

ದೂರಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಡಾ. ಹರಿಸಿಂಗ್​ ಗೌರ್ ಸಾಗರ್​ ಯೂನಿರ್ವಸಿಟಿ ಉಪಕುಲಪತಿ ನೀಲಿಮಾ ಗುಪ್ತಾ, ನಾವು ಈಗಾಗಲೇ ತನಿಖೆ ಪ್ರಾರಂಭಿಸಿದ್ದೇವೆ.  ವಿದ್ಯಾರ್ಥಿನಿ ತರಗತಿಯಲ್ಲಿ ನಮಾಜ್ ಮಾಡಿದ್ದರ ಬಗ್ಗೆ ತನಿಖೆ ನಡೆಸಲು ಒಂದು ಸಮಿತಿಯನ್ನು ರಚಿಸಿದ್ದೇವೆ. ಅಷ್ಟೇ ಅಲ್ಲ, ಇದೊಂದು ಕೇಂದ್ರೀಯ ವಿಶ್ವವಿದ್ಯಾಲಯ. ಇಲ್ಲಿ ಯಾವುದೇ ಧರ್ಮದವರಿಗೂ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ. ಅವರು ತಮ್ಮ ಖಾಸಗಿ ಸ್ಥಳಗಳಲ್ಲಿ ಮತ್ತು ಆಯಾ ಧರ್ಮದವರ ಧಾರ್ಮಿಕ ಕ್ಷೇತ್ರಗಳಲ್ಲಿ ಆಚರಣೆ ಮಾಡಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಹಿಜಾಬ್​ ವಿವಾದ ಯಾವ ಮಟ್ಟಕ್ಕೆ ತಲುಪಿದೆ ಎಂದು ಇಡೀ ದೇಶ ನೋಡಿದೆ. ಸದ್ಯ ಹೈಕೋರ್ಟ್ ಕೂಡ ತೀರ್ಪು ನೀಡಿದ್ದು, ಹಿಜಾಬ್​ ಇಸ್ಲಾಮ್​​ನಲ್ಲಿ ಅತ್ಯಗತ್ಯ ಅಂಶವಲ್ಲ. ಹೀಗಾಗಿ ಕ್ಲಾಸ್​ ರೂಮಿಗೆ ಹೋಗುವಾಗ ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ಹೇಳಿದೆ. ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದವರೂ ಇದ್ದಾರೆ.

ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆ ಇದ್ದವರು ಇವುಗಳನ್ನ ಸೇವಿಸಿ; ತಕ್ಷಣ ನಿವಾರಣೆಯಾಗುತ್ತದೆ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ