AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬ್​ನ್ನು ಬಾಲ್​​ ಎಂದು ತಿಳಿದು ಗೋಡೆಗೆ ಎಸೆದ ವಿದ್ಯಾರ್ಥಿ ಸಾವು

ಪಶ್ಚಿಮ ಬಂಗಾಳದ ಮುರ್ಷಿಬಾದ್​​​ನ ಶಾಲೆಯೊಂದರ ಬಳಿ ಗುರುವಾರ ಮಧ್ಯಾಹ್ನ ಊಟದ ವೇಳೆ ಬಾಂಬಾ ಸ್ಫೋಟಗೊಂಡು 2 ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈ ಸ್ಫೋಟದಿಂದ ಅನೇಕರಿಗೆ ಗಾಯಗಳಾಗಿವೆ. ದೌಲತಾಬಾದ್ ಪೊಲೀಸ್​​​ ಠಾಣೆ ಬಳಿ ಈ ಘಟನೆ ನಡೆದಿದೆ.

ಬಾಂಬ್​ನ್ನು ಬಾಲ್​​ ಎಂದು ತಿಳಿದು ಗೋಡೆಗೆ ಎಸೆದ ವಿದ್ಯಾರ್ಥಿ ಸಾವು
ಅಕ್ಷಯ್​ ಪಲ್ಲಮಜಲು​​
|

Updated on: Jan 05, 2024 | 3:41 PM

Share

ದೌಲತಾಬಾದ್, ಜ.5: ಪಶ್ಚಿಮ ಬಂಗಾಳದ (West Bengal) ಮುರ್ಷಿಬಾದ್​​​ನ ಶಾಲೆಯೊಂದರ ಬಳಿ ಗುರುವಾರ ಮಧ್ಯಾಹ್ನ ಊಟದ ವೇಳೆ ಬಾಂಬಾ ಸ್ಫೋಟಗೊಂಡು 2 ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಈ ಸ್ಫೋಟದಿಂದ ಅನೇಕರಿಗೆ ಗಾಯಗಳಾಗಿವೆ. ದೌಲತಾಬಾದ್ ಪೊಲೀಸ್​​​ ಠಾಣೆ ಬಳಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಕ್ಲೇಸೂರ್​​ ರೆಹಮಾನ್​​​​ (7) ಎಂದು ಗುರುತಿಸಲಾಗಿದೆ.

ಇನ್ನು ಪೊಲೀಸರು ಹಾಗೂ ಸ್ಥಳೀಯ ಪ್ರಕಾರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿ ಹೊರಗಡೆ ಬರಬೇಕಾದರೆ ಚೆಂಡಿನಂತಿರುವ ಬಾಂಬ್​​​ ಕೈಯಲ್ಲಿ ಹಿಡಿದು, ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಈ ವೇಳೆ ರೆಹಮಾನ್​​​​ ಚೆಂಡಿನಂತಿರುವ ಬಾಂಬ್ ಗೋಡೆ ಎಸೆದಿದ್ದಾನೆ, ಈ ವೇಳೆ ಬಾಂಬ್​​​ ಸ್ಫೋಟಗೊಂಡಿದೆ. ಈ ವೇಳೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಾಂಬ್​​​ ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಶಾಲೆಯತ್ತ ಬಂದಿದ್ದಾರೆ. ಸ್ಫೋಟದಿಂದ ಬಾಲಕ ಸಾವನ್ನಪ್ಪಿದ್ದಾನೆ. ಹಾಗೂ ಅನೇಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಬಾಲಕನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಾಯ 

ಇನ್ನು ಪೋಷಕರು ಶಾಲಾ ಮಂಡಳಿಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಶಾಲೆಯಲ್ಲಿ ಬಾಂಬ್​​​​ ಹೇಗೆ ಬಂತು, ಯಾರು ತಂದ್ದದು, ಮಕ್ಕಳ ಬಗ್ಗೆ ಶಾಲಾ ಶಿಕ್ಷಕರು ಕಾಳಜಿ ವಹಿಸಬೇಕಿತ್ತು ಎಂದು ಹೇಳಿದ್ದಾರೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದು, ಗಾಯಾಳು ವಿದ್ಯಾರ್ಥಿಗಳಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ.

ಹಂದಿ ಬೇಟೆಗೆ ಬಳಸುವ ಸ್ಫೋಟಕ ಉಂಡೆಯನ್ನು ಬಾಲ್ ಎಂದು ಆಟವಾಡಿದ ಮಕ್ಕಳು, ಸಾವನ್ನಪ್ಪಿದ್ದು ನಾಯಿ

ಶಾಲೆ ಪಕ್ಕದಲ್ಲೇ ಎಸೆದಿದ್ದ ಸಿಡಿಮದ್ದಿನ ಉಂಡೆ ಮಕ್ಕಳ ಕೈಗೆ ಸಿಕ್ಕಿದ್ದು, ಅದೃಷ್ಟವಶಾತ್ ಸಂಭಾವ್ಯ ದುರಂತ ಸ್ವಲ್ಪದರಲ್ಲೇ ತಪ್ಪಿದೆ. ತುಮಕೂರು (Tumkur) ಜಿಲ್ಲೆ ಚಿಕ್ಕನಾಯನಕನಹಳ್ಳಿ ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆಯನ್ನು (Explosive) ಶಾಲೆಯೊಂದರ ಪಕ್ಕದಲ್ಲಿ ಎಸೆಯಲಾಗಿತ್ತು. ಇದನ್ನು ಬಾಲ್ ಅಂತ ಭಾವಿಸಿದ್ದ ಬಾಲಕನೊಬ್ಬ ಎತ್ತಿಕೊಂಡು ಶಾಲೆಯತ್ತ ತೆರಳಿದ್ದ. ಬಳಿಕ ಆ ಸಿಡಿ ಮದ್ದಿನ ಉಂಡೆಯನ್ನು ಕೈಯಲ್ಲಿ ಹಿಡಿದುಕೊಂಡು ಮಕ್ಕಳು ಓಡಾಡಿದ್ದರು. ಯುವರಾಜ ಎಂಬ ಬಾಲಕನಿಗೆ ಸ್ಫೋಟಕ ಸಿಕ್ಕಿದ್ದು, ಆತ ಅದನ್ನು ಶ್ರೀನಿವಾಸ್ ಎಂಬ ಹುಡುಗನಿಗೆ ನೀಡಿದ್ದ. ಆ ಸ್ಫೋಟಕ ಉಂಡೆಯನ್ನು ಮನೆಗೆ ತೆಗೆದುಕೊಂಡು ಹೋಗಿದ್ದ ಶ್ರೀನಿವಾಸ್ ತಂದೆಗೆ ನೀಡಿದ್ದ. ಇದು ಯಾವುದೋ ಮಾಟ ಮಂತ್ರದ ಬಾಲ್ ಇರಬೇಕೆಂದು ಭಾವಿಸಿದ ಶ್ರೀನಿವಾಸ್ ತಂದೆ ಅದನ್ನು ದೂರಕ್ಕೆ ಎಸೆದಿದ್ದರು. ಶ್ರೀನಿವಾಸ್ ತಂದೆ ಎಸೆದಿದ್ದ ಬಾಲ್​ ಅನ್ನು ಬೀದಿನಾಯಿಯೊಂದು ಕಚ್ಚಿದ್ದು, ಅಷ್ಟರಲ್ಲಿ ಅದು ಸ್ಫೋಟಗೊಂಡಿದೆ. ಬಾಯಿ ಛಿದ್ರಗೊಂಡು ನಾಯಿ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ