AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ರೈತರಿಗಾಗಿ ಇಸ್ತ್ರಿ ಸೇವೆ; ಬಟ್ಟೆ ಬೇಗ ಒಣಗಿಸಲು ನೆರವು

ದೆಹಲಿಯ ಪ್ರಸ್ತುತ ಶೀತಲ ವಾತಾವರಣದಲ್ಲಿ ಒಗೆದು ಹಾಕಿದ ಬಟ್ಟೆಗಳು ಒಣಗುವುದಕ್ಕೆ ಹೆಚ್ಚು ಸಮಯ ಬೇಕಾಗಿರುವುದರಿಂದ ಇಸ್ತ್ರಿ ಮಾರ್ಗ ಕಂಡುಕೊಳ್ಳಲಾಗಿದೆ.

ಪ್ರತಿಭಟನಾ ನಿರತ ರೈತರಿಗಾಗಿ ಇಸ್ತ್ರಿ ಸೇವೆ; ಬಟ್ಟೆ ಬೇಗ ಒಣಗಿಸಲು ನೆರವು
ರೈತರ ಬಟ್ಟೆಗಳಿಗೆ ಇಸ್ತ್ರಿ ಹಾಕುತ್ತಿರುವುದು
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 3:07 PM

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರಿಗೆ ಅವರ ಬಟ್ಟೆಗಳನ್ನು ಬಲುಬೇಗನೆ ಒಣಗಿಸಲು ಸರವಣ್​ ಸಿಂಗ್​ ಎಂಬುವವರು ಇಸ್ತ್ರಿ ಸೇವೆ ಶುರುಮಾಡಿದ್ದಾರೆ. ದೆಹಲಿಯಲ್ಲಿ ಸದ್ಯ ಶೀತದ ವಾತಾವರಣವಿದು. ಒಗೆದ ಬಟ್ಟೆಗಳು ಒಣಗುವುದಕ್ಕೆ ಹೆಚ್ಚು ಸಮಯ ಬೇಕಾಗಿರುವುದರಿಂದ ಈ ಮಾರ್ಗ ಕಂಡುಕೊಳ್ಳಲಾಗಿದೆ.

ಅಮೃತಸರದಲ್ಲಿ ಆಟೊ ಓಡಿಸಿಕೊಂಡು ಜೀವನ ಸಾಗಿಸುತ್ತಿರುವ ಸರವಣ್​ ಸಿಂಗ್, ಪ್ರತಿಭಟನಾ ನಿರತ ರೈತರಿಗೆ ನೆವಾಗುವ ಉದ್ದೇಶದಿಂದ ಈ ಕೆಲಸವನ್ನು ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಮನೆಯಲ್ಲಿರುವ ಮಕ್ಕಳು ತನ್ನನ್ನು ಮರಳಿ ಬರಲು ಹೇಳುತ್ತಿದ್ದರೂ ರೈತರಿಗೆ ಸಹಾಯ ಮಾಡುವುದೇ ಈ ಕ್ಷಣದ ಮುಖ್ಯ ಅವಶ್ಯಕತೆ ಆಗಿರುವುದರಿಂದ ಇಲ್ಲೇ ಉಳಿದಿದ್ದೇನೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಸಂದರ್ಭದಲ್ಲಿ ಮಳೆ ಬಂದ ನಂತರ ಬಟ್ಟೆಗಳನ್ನು ಒಣಗಿಸುವುದು ಎಷ್ಟು ಕಷ್ಟ ಎನ್ನುವುದು ಅರ್ಥವಾಯಿತು. ಆದ್ದರಿಂದ ಕಳೆದ ವಾರವೇ ನಾವೊಂದಷ್ಟು ಜನ ಸಿಂಘು ಗಡಿಗೆ ಆಗಮಿಸಿದ್ದು ರೈತರ ಬಟ್ಟೆಗಳಿಗೆ ಇಸ್ತ್ರಿ ಹಾಕಿ ಅವುಗಳನ್ನು ಒಣಗಿಸಿಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದು ಎಲ್ಲರ ಒಳಿತನ್ನು ಬಯಸಿ ನಡೆಸಲಾಗುತ್ತಿರುವ ಪ್ರತಿಭಟನೆ. ಆದ್ದರಿಂದ ಇದಕ್ಕೆ ನಾವು ನಮ್ಮ ಕೈಲಾದ ಸಹಾಯವನ್ನು ಮಾಡಬೇಕಿದೆ. ಸದ್ಯ ಬಟ್ಟೆ ಒಣಗಿಸುವುದು ದೊಡ್ಡ ಸಮಸ್ಯೆಯಾಗಿ ಕಂಡ ಕಾರಣ ಅದನ್ನು ನೀಗಿಸಲು ಪ್ರಯತ್ನಿಸುತ್ತಿದ್ದೇವೆ. ಈ ಕೆಲಸದಲ್ಲಿ ನಾವು ಮೂರ್ನಾಲ್ಕು ಜನ ನಿರತರಾಗಿದ್ದು 2 ಇಸ್ತ್ರಿ ಪೆಟ್ಟಿಗೆ ಇಟ್ಟುಕೊಂಡಿದ್ದೇವೆ. ಇಸ್ತ್ರಿ ಪೆಟ್ಟಿಗೆ, ಬೆಂಚು ಎಲ್ಲವನ್ನೂ ನಮ್ಮ ಖರ್ಚಿನಲ್ಲೇ ತಂದುಕೊಂಡಿದ್ದು, ಇನ್ನೂ ಹೆಚ್ಚಿನ ಅವಶ್ಯಕತೆ ಇದೆ. ಯಾರಾದರೂ ಸಹಾಯ ಮಾಡಿದರೆ ತುಂಬಾ ಅನುಕೂಲ ಎಂದು ತಿಳಿಸಿದ್ದಾರೆ.

ನಾಲ್ಕು ತಾಸಿಗೆ ಸುಮಾರು 200-250 ಬಟ್ಟೆಗಳು ಬರುತ್ತವೆ. ಎಲ್ಲವನ್ನೂ ಖುಷಿಯಿಂದಲೇ ಇಸ್ತ್ರಿ ಮಾಡಿಕೊಡುತ್ತೇವೆ ಎಂದು ಇನ್ನೋರ್ವ ವ್ಯಕ್ತಿ ಸೇವಾ ಸಿಂಗ್​ ಹೇಳಿದ್ದಾರೆ. ರೈತರಿಗೆ ಬಟ್ಟೆ ಇಸ್ತ್ರಿ ಮಾಡಿಕೊಡುವ ದೃಷ್ಟಿಯಿಂದೇನೋ ಬಂದಿದ್ದೀರಿ. ಆದರೆ, ನಿಮ್ಮ ಉದ್ಯೋಗಕ್ಕೆ ತೊಂದರೆಯಾಗುವುದಿಲ್ಲವೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ, ರೈತರ ಹೋರಾಟಕ್ಕಿಂತ ಮುಖ್ಯವಾಗಿದ್ದು ಯಾವುದೂ ಇಲ್ಲ ಎಂದು ಉತ್ತರಿಸಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎನ್ನುವ ರೈತರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿರುವುದು ಇನ್ನಷ್ಟು ಉತ್ತೇಜನ ನೀಡುತ್ತಿದೆ.

ಕೃಷಿ ಕಾನೂನು ವಿರೋಧಿಸಿ ಸಿಂಘು ಗಡಿಯಲ್ಲಿ ಪ್ರತಿಭಟನೆ ನಿರತರಾಗಿದ್ದ ರೈತ ವಿಷ ಸೇವಿಸಿ ಆತ್ಮಹತ್ಯೆ

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್
ನೀವು ನೀರು ನಿಲ್ಲಿಸಿದ್ರೆ, ನಾವು ನಿಮ್ಮ ಉಸಿರು ನಿಲ್ಲಿಸ್ತೇವೆ: ಪಾಕ್