AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್​ಗಾಂವ್​​ನಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ; ಪೊಲೀಸ್​ ಹುತಾತ್ಮ, ಉಗ್ರ ಸಾವು

ಸೋಮವಾರ ಕುಲಗಾಂವ್​​ ಜಿಲ್ಲೆಯ ಹುಸ್ಸೇನಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಅವರಿಬ್ಬರೂ ಸ್ಥಳೀಯ ಉಗ್ರರೇ ಆಗಿದ್ದರು. ಅಲ್​-ಬದ್ರ್​ ಎಂಬ ಸಂಘಟನೆಗೆ ಸೇರಿದವರಾಗಿದ್ದರು. 

ಕುಲ್​ಗಾಂವ್​​ನಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ; ಪೊಲೀಸ್​ ಹುತಾತ್ಮ, ಉಗ್ರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 13, 2022 | 7:57 AM

Share

ಜಮ್ಮು-ಕಾಶ್ಮೀರದ ಕುಲಗಾಂವ್ (Kulgam District In Jammu-Kashmir)​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್​ ಇ ಮೊಹಮ್ಮದ್​ AJaish-e-Mohammad) ಸಂಘಟನೆಯ ಉಗ್ರ ಮತ್ತು ಓರ್ವ ಪೊಲೀಸ್​ ಸಿಬ್ಬಂದಿ ಮೃತರಾಗಿದ್ದಾರೆ.  ಹಾಗೇ, ಮೂವರು ಯೋಧರು ಸೇರಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಲಗಾಂವ್​ನ ಪರಿವಾನ್​ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು.  ತಾವಿದ್ದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.ಅದಕ್ಕೆ ಪ್ರತಿಯಾಗಿ ಭದ್ರತಾ ತಂಡವೂ ಕೂಡ ಫೈರಿಂಗ್​ ನಡೆಸಿದೆ. ಉಗ್ರರ ಗುಂಡಿಗೆ ಪೊಲೀಸ್​ವೊಬ್ಬ ಮೃತಪಟ್ಟಿದ್ದಾರೆ. ಹಾಗೇ, ಭದ್ರತಾ ಪಡೆಗಳ ಗುಂಡೇಟಿಗೆ ಭಯೋತ್ಪಾದಕನೂ ಒಬ್ಬ ಸತ್ತಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್​ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಕುಲಗಾಂವ್​​ ಜಿಲ್ಲೆಯ ಹುಸ್ಸೇನಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಅವರಿಬ್ಬರೂ ಸ್ಥಳೀಯ ಉಗ್ರರೇ ಆಗಿದ್ದರು. ಅಲ್​-ಬದ್ರ್​ ಎಂಬ ಸಂಘಟನೆಗೆ ಸೇರಿದವರಾಗಿದ್ದರು.  ಕಳೆದ 9 ದಿನಗಳಲ್ಲಿ ಏಳು ಎನ್​​ಕೌಂಟರ್​​ಗಳು ನಡೆದಿದ್ದು, ಒಟ್ಟು 13 ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದೂ ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಶೀತ, ಕೆಮ್ಮಿನಿಂದ ಬಳುತ್ತಿದ್ದರೆ ಸ್ಟೀಮ್ ಮೊರೆ ಹೋಗಿ; ಕಡಿಮೆ ಸಮಯದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ