AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಲ್​ಗಾಂವ್​​ನಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ; ಪೊಲೀಸ್​ ಹುತಾತ್ಮ, ಉಗ್ರ ಸಾವು

ಸೋಮವಾರ ಕುಲಗಾಂವ್​​ ಜಿಲ್ಲೆಯ ಹುಸ್ಸೇನಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಅವರಿಬ್ಬರೂ ಸ್ಥಳೀಯ ಉಗ್ರರೇ ಆಗಿದ್ದರು. ಅಲ್​-ಬದ್ರ್​ ಎಂಬ ಸಂಘಟನೆಗೆ ಸೇರಿದವರಾಗಿದ್ದರು. 

ಕುಲ್​ಗಾಂವ್​​ನಲ್ಲಿ ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ; ಪೊಲೀಸ್​ ಹುತಾತ್ಮ, ಉಗ್ರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 13, 2022 | 7:57 AM

Share

ಜಮ್ಮು-ಕಾಶ್ಮೀರದ ಕುಲಗಾಂವ್ (Kulgam District In Jammu-Kashmir)​ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್​ ಇ ಮೊಹಮ್ಮದ್​ AJaish-e-Mohammad) ಸಂಘಟನೆಯ ಉಗ್ರ ಮತ್ತು ಓರ್ವ ಪೊಲೀಸ್​ ಸಿಬ್ಬಂದಿ ಮೃತರಾಗಿದ್ದಾರೆ.  ಹಾಗೇ, ಮೂವರು ಯೋಧರು ಸೇರಿ ಒಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಲಗಾಂವ್​ನ ಪರಿವಾನ್​ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂದ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು.  ತಾವಿದ್ದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.ಅದಕ್ಕೆ ಪ್ರತಿಯಾಗಿ ಭದ್ರತಾ ತಂಡವೂ ಕೂಡ ಫೈರಿಂಗ್​ ನಡೆಸಿದೆ. ಉಗ್ರರ ಗುಂಡಿಗೆ ಪೊಲೀಸ್​ವೊಬ್ಬ ಮೃತಪಟ್ಟಿದ್ದಾರೆ. ಹಾಗೇ, ಭದ್ರತಾ ಪಡೆಗಳ ಗುಂಡೇಟಿಗೆ ಭಯೋತ್ಪಾದಕನೂ ಒಬ್ಬ ಸತ್ತಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್​ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಕುಲಗಾಂವ್​​ ಜಿಲ್ಲೆಯ ಹುಸ್ಸೇನಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಅವರಿಬ್ಬರೂ ಸ್ಥಳೀಯ ಉಗ್ರರೇ ಆಗಿದ್ದರು. ಅಲ್​-ಬದ್ರ್​ ಎಂಬ ಸಂಘಟನೆಗೆ ಸೇರಿದವರಾಗಿದ್ದರು.  ಕಳೆದ 9 ದಿನಗಳಲ್ಲಿ ಏಳು ಎನ್​​ಕೌಂಟರ್​​ಗಳು ನಡೆದಿದ್ದು, ಒಟ್ಟು 13 ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದೂ ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: ಶೀತ, ಕೆಮ್ಮಿನಿಂದ ಬಳುತ್ತಿದ್ದರೆ ಸ್ಟೀಮ್ ಮೊರೆ ಹೋಗಿ; ಕಡಿಮೆ ಸಮಯದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು