AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ
ಸೌರಭ್​ ಕಿರ್ಪಲ್​
TV9 Web
| Edited By: |

Updated on:Nov 16, 2021 | 12:42 PM

Share

ಹಿರಿಯ ವಕೀಲ ಸೌರಭ್​ ಕಿರ್ಪಲ್​ರನ್ನು ದೆಹಲಿ ಹೈಕೋರ್ಟ್​​ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿದೆ.  ಸೌರಬ್​ ಕಿರ್ಪಲ್​ ತಾವೊಬ್ಬರು ಸಲಿಂಗಕಾಮಿ ಎಂದು ಸ್ವಯಂ ಆಗಿಯೇ ಘೋಷಿಸಿಕೊಂಡವರು. ಇದೀಗ ಇವರು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರೆ, ದೇಶದಲ್ಲಿಯೇ ಮೊದಲ ಬಾರಿಗೆ ಒಬ್ಬರು ಎಲ್​ಜಿಬಿಟಿ ಸಮುದಾಯಕ್ಕೆ ಸೇರಿದ ನ್ಯಾಯಾಧೀಶರನ್ನು ನೇಮಕ ಮಾಡಿದಂತೆ ಆಗುತ್ತದೆ. 

ನವೆಂಬರ್​ 11ರಂದು, ಸಿಜೆಐ ಎನ್​.ವಿ.ರಮಣ ನೇತೃತ್ವದ ಸುಪ್ರೀಂಕೋರ್ಟ್​ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಸೌರಭ್​ ಕಿರ್ಪಲ್​ ಮತ್ತು ಇನ್ನಿಬ್ಬರು ನ್ಯಾಯಾಧೀಶರಾದ ಯುಯು ಲಲಿತ್​ ಮತ್ತು ಎಎಂ ಖಾನ್ವಿಲ್ಕರ್​​ ಅವರ ಹೆಸರನ್ನು ಅಂತಿಮಗೊಳಿಸಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಲಾಗಿದೆ.  ಕಿರ್ಪಲ್​​ರನ್ನು ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಸಂಬಂಧ ಸುಪ್ರೀಂಕೋರ್ಟ್​ ಕೊಲಿಜಿಯಂ ವಿಳಂಬ ಮಾಡುತ್ತಲೇ ಬಂದಿತ್ತು. ಇತ್ತೀಚೆಗಷ್ಟೇ ಕಿರ್ಪಲ್​​ರಿಗೆ ಹಿರಿಯ ವಕೀಲ ಎಂದು ಬಡ್ತಿ ನೀಡಲಾಗಿತ್ತು.

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಆದರೆ ಅವರ ಪದೋನ್ನತಿ ಪರಿಗಣನೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು. ಅದಾದ ಬಳಿಕ ಈ ಬಾರಿಯ ಮಾರ್ಚ್​ ತಿಂಗಳಲ್ಲಿ, ಸೌರಬ್​ ಕಿರ್ಪಲ್​​ರಿಗೆ ದೆಹಲಿ ಕೋರ್ಟ್​​ನ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ನೀಡುವ ಸಂಬಂಧ ನಿಮ್ಮ ಒಲವು ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಆಗ  ಸಿಜೆಐ ಆಗಿದ್ದ ಎಸ್​. ಎ.ಬಾಬ್ಡೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.  ಆಗಲೂ ಸಹ ಅವರ ಪದೋನ್ನತಿಗೆ ನಿರಾಕರಣೆಯೇ ಸಿಕ್ಕಿತ್ತು.

ಇದನ್ನೂ ಓದಿ: Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

Published On - 12:39 pm, Tue, 16 November 21

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್