AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ
ಸೌರಭ್​ ಕಿರ್ಪಲ್​
TV9 Web
| Edited By: |

Updated on:Nov 16, 2021 | 12:42 PM

Share

ಹಿರಿಯ ವಕೀಲ ಸೌರಭ್​ ಕಿರ್ಪಲ್​ರನ್ನು ದೆಹಲಿ ಹೈಕೋರ್ಟ್​​ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿದೆ.  ಸೌರಬ್​ ಕಿರ್ಪಲ್​ ತಾವೊಬ್ಬರು ಸಲಿಂಗಕಾಮಿ ಎಂದು ಸ್ವಯಂ ಆಗಿಯೇ ಘೋಷಿಸಿಕೊಂಡವರು. ಇದೀಗ ಇವರು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರೆ, ದೇಶದಲ್ಲಿಯೇ ಮೊದಲ ಬಾರಿಗೆ ಒಬ್ಬರು ಎಲ್​ಜಿಬಿಟಿ ಸಮುದಾಯಕ್ಕೆ ಸೇರಿದ ನ್ಯಾಯಾಧೀಶರನ್ನು ನೇಮಕ ಮಾಡಿದಂತೆ ಆಗುತ್ತದೆ. 

ನವೆಂಬರ್​ 11ರಂದು, ಸಿಜೆಐ ಎನ್​.ವಿ.ರಮಣ ನೇತೃತ್ವದ ಸುಪ್ರೀಂಕೋರ್ಟ್​ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಸೌರಭ್​ ಕಿರ್ಪಲ್​ ಮತ್ತು ಇನ್ನಿಬ್ಬರು ನ್ಯಾಯಾಧೀಶರಾದ ಯುಯು ಲಲಿತ್​ ಮತ್ತು ಎಎಂ ಖಾನ್ವಿಲ್ಕರ್​​ ಅವರ ಹೆಸರನ್ನು ಅಂತಿಮಗೊಳಿಸಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಲಾಗಿದೆ.  ಕಿರ್ಪಲ್​​ರನ್ನು ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಸಂಬಂಧ ಸುಪ್ರೀಂಕೋರ್ಟ್​ ಕೊಲಿಜಿಯಂ ವಿಳಂಬ ಮಾಡುತ್ತಲೇ ಬಂದಿತ್ತು. ಇತ್ತೀಚೆಗಷ್ಟೇ ಕಿರ್ಪಲ್​​ರಿಗೆ ಹಿರಿಯ ವಕೀಲ ಎಂದು ಬಡ್ತಿ ನೀಡಲಾಗಿತ್ತು.

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಆದರೆ ಅವರ ಪದೋನ್ನತಿ ಪರಿಗಣನೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು. ಅದಾದ ಬಳಿಕ ಈ ಬಾರಿಯ ಮಾರ್ಚ್​ ತಿಂಗಳಲ್ಲಿ, ಸೌರಬ್​ ಕಿರ್ಪಲ್​​ರಿಗೆ ದೆಹಲಿ ಕೋರ್ಟ್​​ನ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ನೀಡುವ ಸಂಬಂಧ ನಿಮ್ಮ ಒಲವು ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಆಗ  ಸಿಜೆಐ ಆಗಿದ್ದ ಎಸ್​. ಎ.ಬಾಬ್ಡೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.  ಆಗಲೂ ಸಹ ಅವರ ಪದೋನ್ನತಿಗೆ ನಿರಾಕರಣೆಯೇ ಸಿಕ್ಕಿತ್ತು.

ಇದನ್ನೂ ಓದಿ: Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

Published On - 12:39 pm, Tue, 16 November 21

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು