AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಸೌರಭ್​ ಕಿರ್ಪಲ್ ಪದೋನ್ನತಿಗೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು; ಇವರು ನ್ಯಾಯಾಧೀಶರಾಗಿ ನೇಮಕವಾಗುವುದು ವಿಶೇಷತೆ
ಸೌರಭ್​ ಕಿರ್ಪಲ್​
TV9 Web
| Edited By: |

Updated on:Nov 16, 2021 | 12:42 PM

Share

ಹಿರಿಯ ವಕೀಲ ಸೌರಭ್​ ಕಿರ್ಪಲ್​ರನ್ನು ದೆಹಲಿ ಹೈಕೋರ್ಟ್​​ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿದೆ.  ಸೌರಬ್​ ಕಿರ್ಪಲ್​ ತಾವೊಬ್ಬರು ಸಲಿಂಗಕಾಮಿ ಎಂದು ಸ್ವಯಂ ಆಗಿಯೇ ಘೋಷಿಸಿಕೊಂಡವರು. ಇದೀಗ ಇವರು ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರೆ, ದೇಶದಲ್ಲಿಯೇ ಮೊದಲ ಬಾರಿಗೆ ಒಬ್ಬರು ಎಲ್​ಜಿಬಿಟಿ ಸಮುದಾಯಕ್ಕೆ ಸೇರಿದ ನ್ಯಾಯಾಧೀಶರನ್ನು ನೇಮಕ ಮಾಡಿದಂತೆ ಆಗುತ್ತದೆ. 

ನವೆಂಬರ್​ 11ರಂದು, ಸಿಜೆಐ ಎನ್​.ವಿ.ರಮಣ ನೇತೃತ್ವದ ಸುಪ್ರೀಂಕೋರ್ಟ್​ ಕೊಲಿಜಿಯಂ ನಡೆಸಿದ ಸಭೆಯಲ್ಲಿ ಸೌರಭ್​ ಕಿರ್ಪಲ್​ ಮತ್ತು ಇನ್ನಿಬ್ಬರು ನ್ಯಾಯಾಧೀಶರಾದ ಯುಯು ಲಲಿತ್​ ಮತ್ತು ಎಎಂ ಖಾನ್ವಿಲ್ಕರ್​​ ಅವರ ಹೆಸರನ್ನು ಅಂತಿಮಗೊಳಿಸಿ, ದೆಹಲಿ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಶಿಫಾರಸ್ಸು ಮಾಡಲಾಗಿದೆ.  ಕಿರ್ಪಲ್​​ರನ್ನು ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಸಂಬಂಧ ಸುಪ್ರೀಂಕೋರ್ಟ್​ ಕೊಲಿಜಿಯಂ ವಿಳಂಬ ಮಾಡುತ್ತಲೇ ಬಂದಿತ್ತು. ಇತ್ತೀಚೆಗಷ್ಟೇ ಕಿರ್ಪಲ್​​ರಿಗೆ ಹಿರಿಯ ವಕೀಲ ಎಂದು ಬಡ್ತಿ ನೀಡಲಾಗಿತ್ತು.

2017ರಲ್ಲಿ, ಸೌರಭ್​ ಕಿರ್ಪಲ್​ರನ್ನು ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಮೂರ್ತಿ ಗೀತಾ ಮಿತ್ತಲ್​ ನೇತೃತ್ವದ ದೆಹಲಿ ಹೈಕೋರ್ಟ್​ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಆದರೆ ಅವರ ಪದೋನ್ನತಿ ಪರಿಗಣನೆಯನ್ನು ಸುಪ್ರೀಂಕೋರ್ಟ್​ ಕೊಲಿಜಿಯಂ ಮೂರು ಬಾರಿ ಮುಂದೂಡಿತ್ತು. ಅದಾದ ಬಳಿಕ ಈ ಬಾರಿಯ ಮಾರ್ಚ್​ ತಿಂಗಳಲ್ಲಿ, ಸೌರಬ್​ ಕಿರ್ಪಲ್​​ರಿಗೆ ದೆಹಲಿ ಕೋರ್ಟ್​​ನ ನ್ಯಾಯಮೂರ್ತಿಯನ್ನಾಗಿ ಪದೋನ್ನತಿ ನೀಡುವ ಸಂಬಂಧ ನಿಮ್ಮ ಒಲವು ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಆಗ  ಸಿಜೆಐ ಆಗಿದ್ದ ಎಸ್​. ಎ.ಬಾಬ್ಡೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.  ಆಗಲೂ ಸಹ ಅವರ ಪದೋನ್ನತಿಗೆ ನಿರಾಕರಣೆಯೇ ಸಿಕ್ಕಿತ್ತು.

ಇದನ್ನೂ ಓದಿ: Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

Published On - 12:39 pm, Tue, 16 November 21

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು