AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲಿ ಒಮಿಕ್ರಾನ್​​ನಿಂದ ಈವರೆಗೆ 115 ಜನ ಸಾವು, ಭಾರತದಲ್ಲಿ ಒಂದು ಸಾವು ಸಂಭವಿಸಿದೆ: ಕೇಂದ್ರ ಆರೋಗ್ಯ ಸಚಿವಾಲಯ

ಭಾರತದಾದ್ಯಂತ ಕೊರೊನಾವೈರಸ್ ಪ್ರಕರಣಗಳಲ್ಲಿ ಉಲ್ಬಣವನ್ನು ಪ್ರಸ್ತಾಪಿಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ "ಭಾರತದಲ್ಲಿ ಇಂದು 9,55,319 ಸಕ್ರಿಯ ಪ್ರಕರಣಗಳೊಂದಿಗೆ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ವಿಶ್ವದಲ್ಲಿ ಒಮಿಕ್ರಾನ್​​ನಿಂದ ಈವರೆಗೆ 115 ಜನ ಸಾವು, ಭಾರತದಲ್ಲಿ ಒಂದು ಸಾವು ಸಂಭವಿಸಿದೆ: ಕೇಂದ್ರ ಆರೋಗ್ಯ ಸಚಿವಾಲಯ
ಲವ್ ಅಗರವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 12, 2022 | 6:11 PM

ದೆಹಲಿ: ಕೊವಿಡ್-19ನ ಒಮಿಕ್ರಾನ್ (omicron) ರೂಪಾಂತರದಿಂದಾಗಿ ಇದುವರೆಗೆ ವಿಶ್ವದಾದ್ಯಂತ ಒಟ್ಟು 115 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಭಾರತದಲ್ಲಿ ಒಂದು ಸಾವು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ (Lav Agarwal) ಬುಧವಾರ ಮಾಹಿತಿ ನೀಡಿದ್ದಾರೆ. ಆರೋಗ್ಯ ಸಚಿವಾಲಯದ (Union Health Ministry) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಗರ್ವಾಲ್, “ಒಮಿಕ್ರಾನ್‌ನಿಂದ ಜಾಗತಿಕವಾಗಿ ಒಟ್ಟು 115 ಸಾವುಗಳು ಸಂಭವಿಸಿದ್ದು ಮತ್ತು ಭಾರತದಲ್ಲಿ ಒಂದು ಸಾವು ಸಂಭವಿಸಿದೆ” ಎಂದು ಹೇಳಿದರು. “ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಒಮಿಕ್ರಾನ್ ಡೆಲ್ಟಾಕ್ಕಿಂತ ಗಣನೀಯ ಬೆಳವಣಿಗೆಯ ಪ್ರಯೋಜನವನ್ನು ಹೊಂದಿದೆ.ದಕ್ಷಿಣ ಆಫ್ರಿಕಾ, ಯುಕೆ, ಕೆನಡಾ, ಡೆನ್ಮಾರ್ಕ್‌ನ ಡೇಟಾವು ಡೆಲ್ಟಾಕ್ಕೆ ಹೋಲಿಸಿದರೆ ಒಮಿಕ್ರಾನ್​​ನಿಂದಾಗಿ ಆಸ್ಪತ್ರೆಗೆ ದಾಖಲಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ” ಎಂದು ಅಗರ್ವಾಲ್ ಹೇಳಿದರು.

ಭಾರತದಾದ್ಯಂತ ಕೊರೊನಾವೈರಸ್ ಪ್ರಕರಣಗಳಲ್ಲಿ ಉಲ್ಬಣವನ್ನು ಪ್ರಸ್ತಾಪಿಸಿದ ಅವರು, “ಭಾರತದಲ್ಲಿ ಇಂದು 9,55,319 ಸಕ್ರಿಯ ಪ್ರಕರಣಗಳೊಂದಿಗೆ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗಿದೆ. ಕೊವಿಡ್ ಪ್ರಕರಣದ ಉಲ್ಬಣದಿಂದಾಗಿ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ದೆಹಲಿ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ಕೇರಳ ಮತ್ತು ಗುಜರಾತ್ ನಲ್ಲಿ ಆತಂಕವಿದೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಧನಾತ್ಮಕ ದರಗಳನ್ನು ವರದಿ ಮಾಡಿರುವ ರಾಜ್ಯಗಳೆಂದರೆ 22.39 ಶೇಕಡಾ ಧನಾತ್ಮಕ ದರದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಶೇಕಡಾ 32.18, ದೆಹಲಿ ಶೇಕಡಾ 23.1 ಮತ್ತು ಉತ್ತರ ಪ್ರದೇಶ ಶೇಕಡಾ 4.47 ಎಂದು ಅವರು ಹೇಳಿದರು.

ಯುರೋಪ್‌ನಲ್ಲಿ ಎಂಟು ದೇಶಗಳು ಕಳೆದ ಎರಡು ವಾರಗಳಲ್ಲಿ ಎರಡು ಪಟ್ಟು ಹೆಚ್ಚು ಪ್ರಕರಣಗಳ ಹೆಚ್ಚಳವನ್ನು ವರದಿ ಮಾಡುತ್ತಿವೆ ಎಂದು ಅಗರ್ವಾಲ್ ಹೇಳಿದ್ದಾರೆ.  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 9 ರಂದು ಕೊವಿಡ್ 19 ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ ನಂತರ, ಆರೋಗ್ಯ ಸಚಿವಾಲಯವು ಸೌಮ್ಯ ಮತ್ತು ಮಧ್ಯಮ ಪ್ರಕರಣಗಳಾಗಿ ವರ್ಗೀಕರಿಸಲಾದ ತೀವ್ರತೆಯೊಂದಿಗೆ ಡಿಸ್ಚಾರ್ಜ್ ನೀತಿಯನ್ನು ಪರಿಷ್ಕರಿಸಿದೆ ಎಂದು ಜಂಟಿ ಕಾರ್ಯದರ್ಶಿ ಹೇಳಿದರು.

ಪರೀಕ್ಷೆಯಲ್ಲಿ ಪಾಸಿಟಿವ್ ಆಗಿದ್ದು ಮಧ್ಯಮ ಪ್ರಕರಣವಾಗಿದ್ದರೆ ಕನಿಷ್ಠ ಏಳು ದಿನ ಮತ್ತು ಮೂರು ದಿನ ತುರ್ತು ಅಲ್ಲದಿದ್ದರೆ ಡಿಸ್ಚಾರ್ಜ್ ಮುನ್ನ ಪರೀಕ್ಷೆ ಮಾಡುವ ಅಗತ್ಯವಿಲ್ಲ.  ಮಧ್ಯಮ ಪ್ರಕರಣಗಳಿಗೆ “ರೋಗಲಕ್ಷಣಗಳ ಪರಿಹಾರವಿದ್ದರೆ, ರೋಗಿಯು ಸತತ ಮೂರು ದಿನಗಳವರೆಗೆ (ಆಕ್ಸಿಜನ್ ಇಲ್ಲದೆ) ಶೇಕಡಾ 93 ಕ್ಕಿಂತ ಹೆಚ್ಚು O2 ಸ್ಯಾಚುರೇಷನ್ ನಿರ್ವಹಿಸುತ್ತಾನೆ. ಅಂತಹ ರೋಗಿಯನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಜಂಟಿ ಕಾರ್ಯದರ್ಶಿ ಹೇಳಿದ್ದಾರೆ.

ಏತನ್ಮಧ್ಯೆ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೊವಿಡ್ ಸೋಂಕುಗಳು ಮತ್ತು 442 ಸಾವುಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ. ಇದರೊಂದಿಗೆ, 9,55,319 ಸಕ್ರಿಯ ಪ್ರಕರಣಗಳು ಸೇರಿದಂತೆ ದೇಶದಲ್ಲಿ ಒಟ್ಟು ಕೊವಿಡ್ ಪ್ರಕರಣಗಳ ಸಂಖ್ಯೆ 3,60,70,510 ಕ್ಕೆ ಏರಿದೆ. ದೇಶದಲ್ಲಿ ಈ ವೈರಸ್‌ನಿಂದ ದೈನಂದಿನ ಸಕಾರಾತ್ಮಕತೆಯ ಪ್ರಮಾಣವು ಶೇಕಡಾ 11.05 ರಷ್ಟಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 2.65 ರಷ್ಟಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ ಒಂದೇ ದಿನ 1,94,720 ಹೊಸ ಕೊವಿಡ್ ಪ್ರಕರಣ ಪತ್ತೆ, 9.5 ಲಕ್ಷ ಗಡಿ ದಾಟಿದ ಸಕ್ರಿಯ ಪ್ರಕರಣ

Published On - 6:09 pm, Wed, 12 January 22

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ