AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಸಾವು: ಸಚಿವ ಸುನಿಲ್ ಕುಮಾರ್

"ಬೆಟ್ಟಿಯಾದಲ್ಲಿ 10 ಜನರು ಮತ್ತು ಗೋಪಾಲ್‌ಗಂಜ್‌ನಲ್ಲಿ 11 ಜನರು ಸೇರಿದಂತೆ ಒಟ್ಟು 21 ಜನರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ" ಎಂದು ರಾಜ್ಯ ಸಚಿವ ಸುನಿಲ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಸಾವು: ಸಚಿವ ಸುನಿಲ್ ಕುಮಾರ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 05, 2021 | 3:16 PM

Share

ಪಟನಾ: ಬಿಹಾರದಲ್ಲಿ(Bihar ) ನಕಲಿ ಮದ್ಯ ಸೇವಿಸಿ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸಚಿವ ಸುನಿಲ್ ಕುಮಾರ್ ಶುಕ್ರವಾರ ಹೇಳಿದ್ದಾರೆ. “ಬೆಟ್ಟಿಯಾದಲ್ಲಿ 10 ಜನರು ಮತ್ತು ಗೋಪಾಲ್‌ಗಂಜ್‌ನಲ್ಲಿ 11 ಜನರು ಸೇರಿದಂತೆ ಒಟ್ಟು 21 ಜನರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ” ಎಂದು ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ. ಬೆಟ್ಟಿಯಾದಲ್ಲಿ ನಕಲಿ ಮದ್ಯ ಸೇವಿಸಿ ಮತ್ತಿಬ್ಬರು ಮೃತಪಟ್ಟಿರುವ ಶಂಕೆ ಇದೆ ಎಂದು ಅವರು ಮಾಹಿತಿ ನೀಡಿದರು. ಆದಾಗ್ಯೂ, ಅವರ ಮರಣೋತ್ತರ ಪರೀಕ್ಷೆಯ ವರದಿಗಳು ಇನ್ನೂ ಕಾಯುತ್ತಿರುವ ಕಾರಣ ಅದನ್ನು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ. ಬೆಟ್ಟಿಯಾದಲ್ಲಿ ಇನ್ನೂ ಎರಡು ಸಾವುಗಳು ನಕಲಿ ಮದ್ಯ ಸೇವನೆಯಿಂದಾಗಿದೆ  ಎಂಬುದರ ಬಗ್ಗೆ ಶಂಕೆ ಇದ್ದು ಅವರ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವವರ ಸ್ಥಿತಿ ಸ್ಥಿರವಾಗಿದೆ,’’ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಮದ್ಯ ನಿಷೇಧವಿದ್ದರೂ ಈ ಹಿಂದೆಯೂ ಇಂತಹ ಹಲವಾರು ಘಟನೆಗಳು ವರದಿಯಾಗಿವೆ. ಈ ಹಿಂದೆ ಬೆಟ್ಟಿಯಾ ಮತ್ತು ಗೋಪಾಲ್‌ಗಂಜ್‌ನಲ್ಲಿ ಮೃತರ ಕುಟುಂಬಗಳನ್ನು ಭೇಟಿ ಮಾಡಿದ್ದ ಬಿಹಾರ ಸಚಿವ ಜನಕ್ ಚಮರ್, ಘಟನೆ ದುರದೃಷ್ಟಕರ ಎಂದು ಹೇಳಿದ್ದಾರೆ. ನಕಲಿ ಮದ್ಯದ ನೆಪದಲ್ಲಿ ಷಡ್ಯಂತ್ರ ಕಾಣಬಹುದು. ಅದನ್ನು ಸೇವಿಸುವವರು ಬಡವರು. ಕ್ರಮ ಕೈಗೊಂಡಾಗ ಅಥವಾ ದಾಳಿ ಮಾಡಿದಾಗ ದುರ್ಬಲರನ್ನು ಬಂಧಿಸಲಾಗುತ್ತದೆ. ದುರ್ಬಲರನ್ನು ಸೆರೆ ಹಿಡಿಯಲಾಗುತ್ತದೆ ಮತ್ತು ದುರ್ಬಲರು ಸಾಯುತ್ತಾರೆ ಇದು ದುರದೃಷ್ಟಕರ! ಎಂದಿದ್ದಾರೆ ಚಮರ್.

ನಾವು ಪ್ರತಿ ದುಃಖಿತ ಕುಟುಂಬವನ್ನು ಭೇಟಿ ಮಾಡಿದ್ದೇವೆ, ಸತ್ತವರನ್ನು ಮರಳಿ ತರಲು ಸಾಧ್ಯವಿಲ್ಲ ಆದರೆ ಜನರು ಆಸ್ಪತ್ರೆಗಳಲ್ಲಿ ಜೀವಕ್ಕಾಗಿ ಹೋರಾಡುತ್ತಿರುವವರಿಗಾಗಿ ಪ್ರಾರ್ಥಿಸುತ್ತಿದ್ದಾರೆ, ನಾನು ಡಿಎಂ, ಎಸ್ಪಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಇಂತಹ ಸಂಗತಿಗಳು ನಡೆಯುತ್ತಿವೆ, ಪೊಲೀಸರ ಭಯ ಕಾಣುತ್ತಿಲ್ಲ” ಎಂದು ಚಮರ್ ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳ (RJD) ನಾಯಕ ತೇಜಸ್ವಿ ಯಾದವ್ ಕೂಡ ಈ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮದ್ಯ ನಿಷೇಧ ಕಾನೂನು “ಸಂಪೂರ್ಣ ವೈಫಲ್ಯ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ: ಕುದುರೆ ರೇಸ್​ಗೆ ಅನುಮತಿ ನೀಡಿ ಕರ್ನಾಟಕ ಸರ್ಕಾರದ ಆದೇಶ; ಕೊವಿಡ್ ಕಾರ್ಯವಿಧಾನ ಪಾಲಿಸುವಂತೆ ಷರತ್ತು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ