AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತಿನಲ್ಲಿ 999 ಜಾನುವಾರುಗಳಿಗೆ ಚರ್ಮದ ಕಾಯಿಲೆ: 37,000ಕ್ಕೂ ಹೆಚ್ಚು ಪ್ರಾಣಿಗಳಿಗೆ ಚಿಕಿತ್ಸೆ

ಹಸುಗಳು ಮತ್ತು ಎಮ್ಮೆಗಳು ಚರ್ಮದ ಕಾಯಿಲೆಯಿಂದ ಸಾವನ್ನಪ್ಪಿವೆ ಎಂದು ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಸಚಿವ ರಾಘವ್ಜಿ ಪಟೇಲ್ ಹೇಳಿದ್ದಾರೆ. 14 ಜಿಲ್ಲೆಗಳಲ್ಲಿ ವೈರಲ್ ಕಾಯಿಲೆ ವರದಿಯಾಗಿದ್ದು, 37,000 ಕ್ಕೂ ಹೆಚ್ಚು ಪ್ರಾಣಿಗಳಿಗೆ  ಚಿಕಿತ್ಸೆ ನೀಡಲಾಗಿದೆ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು 2.68 ಲಕ್ಷ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವರನ್ನು  ಸರ್ಕಾರದ ಪ್ರಕಟಣೆ ತಿಳಿಸಿದ್ದಾರೆ. 

ಗುಜರಾತಿನಲ್ಲಿ 999 ಜಾನುವಾರುಗಳಿಗೆ ಚರ್ಮದ ಕಾಯಿಲೆ: 37,000ಕ್ಕೂ ಹೆಚ್ಚು ಪ್ರಾಣಿಗಳಿಗೆ ಚಿಕಿತ್ಸೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 25, 2022 | 1:01 PM

Share

ಅಹಮದಾಬಾದ್: ಗುಜರಾತಿನಲ್ಲಿ ಒಟ್ಟು 999 ಜಾನುವಾರುಗಳು, ವಿಶೇಷವಾಗಿ ಹಸುಗಳು ಮತ್ತು ಎಮ್ಮೆಗಳು ಚರ್ಮದ ಕಾಯಿಲೆಯಿಂದ ಸಾವನ್ನಪ್ಪಿವೆ ಎಂದು ರಾಜ್ಯ ಕೃಷಿ ಮತ್ತು ಪಶುಸಂಗೋಪನೆ ಸಚಿವ ರಾಘವ್ಜಿ ಪಟೇಲ್ ಹೇಳಿದ್ದಾರೆ. 14 ಜಿಲ್ಲೆಗಳಲ್ಲಿ ವೈರಲ್ ಕಾಯಿಲೆ ವರದಿಯಾಗಿದ್ದು, 37,000 ಕ್ಕೂ ಹೆಚ್ಚು ಪ್ರಾಣಿಗಳಿಗೆ  ಚಿಕಿತ್ಸೆ ನೀಡಲಾಗಿದೆ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು 2.68 ಲಕ್ಷ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವರನ್ನು  ಸರ್ಕಾರದ ಪ್ರಕಟಣೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೊದಲ ರೋಗದ ಪ್ರಕರಣ ಕಾಣಿಸಿಕೊಂಡಿದ್ದರಿಂದ ಇದರ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು  ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಇದರ ಪರಿಣಾಮವಾಗಿ, ರೋಗವು ಮತ್ತಷ್ಟು ಹರಡುವುದನ್ನು ನಿಲ್ಲಿಸಲಾಗಿದೆ ಎಂದು ಪಟೇಲ್ ಮೊದಲ ಪ್ರಕರಣ ಯಾವಾಗ ಬೆಳಕಿಗೆ ಬಂದಿತು ಎಂಬುದನ್ನು  ಕಂಡುಹಿಡಿಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಚರ್ಮ ರೋಗವು ಸೊಳ್ಳೆಗಳು, ನೊಣಗಳು, ಪರೋಪಜೀವಿಗಳು, ಕಣಜಗಳು, ಜಾನುವಾರುಗಳ ನೇರ ಸಂಪರ್ಕದಿಂದ ಮತ್ತು ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುವ ವೈರಲ್ ರೋಗವಾಗಿದೆ. ಪ್ರಾಣಿಗಳಲ್ಲಿ ಜ್ವರ, ಕಣ್ಣು ಮತ್ತು ಮೂಗಿನಿಂದ ನೀರು ಬರುವುದು ಮತ್ತು  ಬಾಯಿಯಿಂದ ಜೊಲ್ಲು ಸುರಿಸುವುದು, ದೇಹದಾದ್ಯಂತ ಗಂಟುಗಳಂತಹ ಮೃದುವಾದ ಗುಳ್ಳೆಗಳು, ಹಾಲು ಉತ್ಪಾದನೆ ಕಡಿಮೆಯಾಗುವುದು, ತಿನ್ನಲು ತೊಂದರೆ ಎಂದು ರೋಗ ಲಕ್ಷಣಗಳನ್ನು ತಿಳಿಸಿದ್ದಾರೆ. ಇದರ ಜೊತೆಗೆ   ಕೆಲವೊಮ್ಮೆ ಪ್ರಾಣಿಗಳ ಸಾವಿಗೆ ಕಾರಣವಾಗುತ್ತದೆ ಎಂದು ಪ್ರಕಟಣೆ ತಿಳಿಸಿದ್ದಾರೆ

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಗುಜರಾತ್‌ನ 14 ಜಿಲ್ಲೆಗಳಾದ ಕಚ್, ಜಾಮ್‌ನಗರ, ದೇವಭೂಮಿ ದ್ವಾರಕಾ, ರಾಜ್‌ಕೋಟ್, ಪೋರಬಂದರ್, ಮೊರ್ಬಿ, ಸುರೇಂದ್ರನಗರ, ಅಮ್ರೇಲಿ, ಭಾವನಗರ, ಬೊಟಾಡ್, ಜುನಾಗಢ್, ಗಿರ್ ಸೋಮನಾಥ್, ಬನಸ್ಕಾಂತ ಮತ್ತು ಸೂರತ್‌ನಲ್ಲಿ ಈ ವೈರಲ್ ಕಾಯಿಲೆ ವರದಿಯಾಗಿದೆ. 880 ಹಳ್ಳಿಗಳಲ್ಲಿ ಈ ರೋಗವನ್ನು ಗಮನಿಸಲಾಗಿದೆ, 37,121 ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಟೇಲ್ ಹೇಳಿದ್ದಾರೆ.

ತಾಲೂಕು ಮಟ್ಟದ ಸಾಂಕ್ರಾಮಿಕ ರೋಗ ವರದಿ ಪ್ರಕಾರ ಇದುವರೆಗೆ 999 ಜಾನುವಾರುಗಳು ಮುದ್ದೆ ಚರ್ಮ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿವೆ ಎಂದು ಸಚಿವರು ತಿಳಿಸಿದ್ದಾರೆ.  ಗ್ರಾಮಗಳಲ್ಲಿನ ರೋಗಪೀಡಿತ ಪ್ರಾಣಿಗಳನ್ನು ತಕ್ಷಣವೇ ಪ್ರತ್ಯೇಕಿಸಲಾಗಿದೆ ಮತ್ತು ಇದು ಹರಡುವುದನ್ನು ತಡೆಯಲು ಇದುವರೆಗೆ 2.68 ಲಕ್ಷಕ್ಕೂ ಹೆಚ್ಚು ಪ್ರಾಣಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಪಶುಸಂಗೋಪನಾ ಇಲಾಖೆಯ 152 ಪಶುವೈದ್ಯಾಧಿಕಾರಿಗಳು ಮತ್ತು 438 ಜಾನುವಾರು ನಿರೀಕ್ಷಕರನ್ನು ಒಳಗೊಂಡ ವ್ಯಾಪಕ ಸಮೀಕ್ಷೆ, ಚಿಕಿತ್ಸೆ ಮತ್ತು ಲಸಿಕೆ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಹೆಚ್ಚುವರಿಯಾಗಿ 267 ಹೊರಗುತ್ತಿಗೆ ಪಶುವೈದ್ಯರನ್ನು, ಚಿಕಿತ್ಸೆ ಮತ್ತು ಲಸಿಕೆಗೆ ಅಗತ್ಯವಿರುವ ವಾಹನಗಳನ್ನು ನಿಯೋಜನೆ ಮಾಡಲಾಗಿದೆ.

ಇದಕ್ಕಾಗಿ ರಾಜ್ಯ ಮತ್ತು ವಿಭಾಗೀಯ ಕಚೇರಿ ಮಟ್ಟದಿಂದ ನಿರಂತರ ನಿಗಾ ಮತ್ತು ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಅಹಮದಾಬಾದ್‌ನ GVK-ತುರ್ತು ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (EMRI) ವಿಶೇಷ ನಿಯಂತ್ರಣ ಕೊಠಡಿಯನ್ನು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು 24 ಗಂಟೆಗಳ ಮೇಲ್ವಿಚಾರಣೆಯೊಂದಿಗೆ ಪ್ರಾರಂಭಿಸಲಾಗಿದೆ ಮತ್ತು ತಕ್ಷಣದ ಚಿಕಿತ್ಸೆ ಮತ್ತು ಇತರ ಮಾಹಿತಿಗಾಗಿ ಟೋಲ್ ಫ್ರೀ ಸಹಾಯವಾಣಿ 1962 ಸೌಲಭ್ಯವನ್ನು ಹೊಂದಿದೆ.

ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೂ ಈ ರೋಗದ ಬಗ್ಗೆ ಅರಿವು ಮೂಡಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದಲ್ಲದೇ ಮಳೆಗಾಲದಲ್ಲಿ ಪ್ರಾಣಿಗಳ ಆವಾಸಸ್ಥಾನಗಳಲ್ಲಿ ಸೊಳ್ಳೆ, ನೊಣ, ಹೇನುಗಳ ಕಾಟ ತಡೆಯಲು ಕೀಟನಾಶಕ ಸಿಂಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

Follow Us
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ