AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ತೃಣಮೂಲ ಕಾಂಗ್ರೆಸ್(TMC) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಿಯಾರುಲ್ ಮೊಲ್ಲಾ ಎಂಬುವವರು  ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾರ್ಯಕರ್ತ ಪತ್ತೆಯಾಗಿದ್ದರು.

West Bengal: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ
Crime Scene
ನಯನಾ ರಾಜೀವ್
|

Updated on: Jul 02, 2023 | 9:17 AM

Share

ತೃಣಮೂಲ ಕಾಂಗ್ರೆಸ್(TMC) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಜಿಯಾರುಲ್ ಮೊಲ್ಲಾ ಎಂಬುವವರು  ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಕಾರ್ಯಕರ್ತ ಪತ್ತೆಯಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಅವರಿಗೆ ನಿರಂತರ ಜೀವ ಬೆದರಿಕೆ ಇತ್ತು ಎಂದು ಕುಟುಂಬ ಹೇಳಿದೆ.

ನನ್ನ ತಂದೆಗೆ ಸಾಕಷ್ಟು ಶತ್ರುಗಳಿದ್ದರು, ಅವರಿಗೆ ರಾಜಕೀಯ ದ್ವೇಷವಿತ್ತು, ಅವರಿಗೆ ಪಕ್ಷದ ಇನ್ನೊಂದು ಬಣದಿಂದ ಹಲವಾರು ಬಾರಿ ಬೆದರಿಕೆ ಇತ್ತು, ಅವರಿಗೆ ವಿವಿಧ ಸಂಖ್ಯೆಗಳಿಂದ ಫೋನ್ ಮೂಲಕ ಬೆದರಿಕೆ ಕರೆಗಳು ಬರುತ್ತಿದ್ದವು, ನನ್ನ ತಂದೆ ಅವರು ಟಿಎಂಸಿ ಯುವ ಘಟಕದ ಸದಸ್ಯರಾಗಿದ್ದರು. ಅವರು ತಮ್ಮ ಬಣಕ್ಕೆ ಸೇರುವಂತೆ ನನ್ನ ತಂದೆಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ತಿಳಿಸಿದ್ದಾರೆ. ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Bengal Panchayat Polls: ಪಶ್ಚಿಮ ಬಂಗಾಳದಲ್ಲಿ ನಡೆದ ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತ ಗುಂಡೇಟಿಗೆ ಬಲಿ, 6 ಮಂದಿಗೆ ಗಾಯ

ಇತ್ತೀಚೆಗೆ ನಡೆದಿತ್ತು ಮತ್ತೊಂದು ಹತ್ಯೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಘರ್ಷಣೆಯಲ್ಲಿ ಟಿಎಂಸಿ ಕಾರ್ಯಕರ್ತರೊಬ್ಬರು ಗುಂಡೇಟಿಗೆ ಬಲಿಯಾಗಿದ್ದಾರೆ. ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ಜುಲೈ 8 ರಂದು ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಇಲ್ಲಿಯವರೆಗೆ 11 ಮಂದಿ ಮೃತಪಟ್ಟಿದ್ದಾರೆ.

ಎರಡು ಗುಂಪುಗಳ ನಡುವೆ ರಾಜಕೀಯ ಘರ್ಷಣೆ ನಡೆದಿದೆ, ಏಳು ಮಂದಿಗೆ ಬುಲೆಟ್​ಗಳು ತಾಗಿವೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬು ಹಕ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ