AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುವಿನ ಸಗಣಿ, ಮೂತ್ರ ಸೇವಿಸಿದರೆ ಪ್ರಯೋಜನ ಹಲವು ಎಂದು ವಿವರಿಸುವ ವಿಡಿಯೊ ವೈರಲ್, ವಿಡಿಯೊದಲ್ಲಿರುವ ವ್ಯಕ್ತಿ ಎಂಬಿಬಿಎಸ್ ಡಾಕ್ಟರ್!

ಗರ್ಭಿಣಿ ಮಹಿಳೆ ಹೆರಿಗೆಯ ಸಮಯದಲ್ಲಿ ಹಸುವಿನ ಸಗಣಿ ತಿಂದರೆ, ಹೆರಿಗೆಯ ಸಮಯದಲ್ಲಿ ಹೆಚ್ಚಿನ ಅಸ್ವಸ್ಥತೆ ಇರುವುದಿಲ್ಲ. ಸಗಣಿ ತಿನ್ನುವುದರಿಂದ ಅನೇಕ ಕಾಯಿಲೆಗಳು ಗುಣವಾಗುತ್ತವೆ ಎಂದು ಮಿತ್ತಲ್ ಹೇಳಿದ್ದಾರೆ

ಹಸುವಿನ ಸಗಣಿ, ಮೂತ್ರ ಸೇವಿಸಿದರೆ ಪ್ರಯೋಜನ ಹಲವು ಎಂದು ವಿವರಿಸುವ ವಿಡಿಯೊ ವೈರಲ್,  ವಿಡಿಯೊದಲ್ಲಿರುವ ವ್ಯಕ್ತಿ ಎಂಬಿಬಿಎಸ್ ಡಾಕ್ಟರ್!
ಮನೋಜ್ ಮಿತ್ತಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 18, 2021 | 11:33 AM

Share

ದೆಹಲಿ: ವೈದ್ಯರೊಬ್ಬರು ಹಸುವಿನ ಸಗಣಿ (cow dung)ತಿನ್ನುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಗಣಿಯ ಮಹತ್ವವನ್ನು ವಿವರಿಸುವ ಈ ವೈದ್ಯರ ಹೆಸರು ಮನೋಜ್ ಮಿತ್ತಲ್ (Manoj Mittal). ಇವರು ಕರ್ನಾಲ್ ನಿವಾಸಿ. ಎಂಬಿಬಿಎಸ್ (MBBS) ಪದವಿ ಪಡೆದಿರುವ ಮನೋಜ್ ಕಳೆದ ಹಲವು ವರ್ಷಗಳಿಂದ ಗೋಮೂತ್ರ (cow urine), ಸಗಣಿ ಸೇವಿಸುತ್ತಿದ್ದಾರೆ. ಹಸುವಿನ ಸಗಣಿಯಲ್ಲಿ ಬಿ ಜೀವಸತ್ವಗಳು ಅಧಿಕವಾಗಿವೆ. ಇದು ವಿಕಿರಣದಿಂದ ರಕ್ಷಿಸುತ್ತದೆ ಎಂದು ಮಿತ್ತಲ್ ಹೇಳುತ್ತಾರೆ. ಮೊಬೈಲ್, ಎಸಿ, ಫ್ರಿಡ್ಜ್ ಮತ್ತಿತರ ವಿದ್ಯುತ್ ಉಪಕರಣಗಳಿಂದ ವಿಕಿರಣ ಹೊರಸೂಸುತ್ತದೆ. ಇದು ಕ್ಯಾನ್ಸರ್‌ನಂತಹ ರೋಗಗಳಿಗೆ ಕಾರಣವಾಗುತ್ತದೆ. ಆದರೆ, ಹಸುವಿನ ಸಗಣಿ ತಿನ್ನುವುದರಿಂದ ವಿಕಿರಣದ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ಮಿತ್ತಲ್ ಹೇಳಿದ್ದಾರೆ.  ಗರ್ಭಿಣಿ ಮಹಿಳೆ ಹೆರಿಗೆಯ ಸಮಯದಲ್ಲಿ ಹಸುವಿನ ಸಗಣಿ ತಿಂದರೆ, ಹೆರಿಗೆಯ ಸಮಯದಲ್ಲಿ ಹೆಚ್ಚಿನ ಅಸ್ವಸ್ಥತೆ ಇರುವುದಿಲ್ಲ. ಸಗಣಿ ತಿನ್ನುವುದರಿಂದ ಅನೇಕ ಕಾಯಿಲೆಗಳು ಗುಣವಾಗುತ್ತವೆ ಎಂದು ಮಿತ್ತಲ್ ಹೇಳಿದ್ದಾರೆ. ಮನೋಜ್ ಮಿತ್ತಲ್ ಅವರು ಮಕ್ಕಳ ವೈದ್ಯರಾಗಿದ್ದಾರೆ ಮತ್ತು ಕರ್ನಾಲ್‌ನಲ್ಲಿ ದೊಡ್ಡ ಆಸ್ಪತ್ರೆಯನ್ನು ಹೊಂದಿದ್ದಾರೆ. ಅವರು ಯಾವಾಗಲೂ ನೆಲದ ಮೇಲೆ ಮಲಗುತ್ತಾರೆ ಮತ್ತು ಎಸಿ ಬಳಸುವುದಿಲ್ಲ ಎಂದು ಮಿತ್ತಲ್ ಹೇಳುತ್ತಾರೆ.

ಹಸುವಿನ ಸಗಣಿ ಶೇ28ರಷ್ಟು ಆಮ್ಲಜನಕವನ್ನು ಹೊಂದಿರುತ್ತದೆ. ಹೀಗಾಗಿ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಮನೋಜ್ ಮಿತ್ತಲ್ ಅವರ ವಿಡಿಯೊ ವೈರಲ್ ಆದ ತಕ್ಷಣ, ವಿವಿಧ ಪ್ರತಿಕ್ರಿಯೆಗಳು ಕಂಡುಬರುತ್ತಿವೆ. ಮನೋಜ್ ಅವರ ಮಾತು ನಿಜ ಎಂದು ಕೆಲವರು ಹೇಳುತ್ತಿದ್ದು ಇನ್ನ ಕೆಲವರು ಮನೋಜ್ ಪದವಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸರ್ಕಾರವನ್ನು ಟೀಕಿಸುವವರು ಮತ್ತು ಹೋರಾಟಗಾರರ ಟ್ವಿಟರ್ ಖಾತೆ ಮೇಲೆ ತ್ರಿಪುರಾ ಪೊಲೀಸ್ ನಿಗಾ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ