AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆ್ಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ

ಈ ಗುಂಪಿನಲ್ಲಿ ಕನ್ನಡದಲ್ಲಿಯೇ ಸಂದೇಶಗಳನ್ನು ಮಾಡಲಾಗಿದೆ. ಕೆಲವು ಮಾಲ್​​ಗಳ ಬೇಸ್​ಮೆಂಟ್​ಗಳಲ್ಲಿ ಬುರ್ಕಾ ಧರಿಸಿಕೊಂಡು ನಿಂತು ಅನುಚಿತವಾಗಿ ವರ್ತನೆ ಮಾಡುವ ಹೆಣ್ಣುಮಕ್ಕಳು ಕಂಡುಬರುತ್ತಿದ್ದಾರೆ. ಅವರಿಗೆ ನಮ್ಮ ಕಾರ್ಯಕರ್ತರು ಅವರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ ಎಂದೂ ಈ ವಾಟ್ಸ್​ಆ್ಯಪ್ ಗ್ರೂಪ್​ ಹೇಳಿಕೊಂಡಿದೆ.

ಸಾರ್ವಜನಿಕ ಪ್ರದೇಶಗಳಲ್ಲಿ ಬುರ್ಕಾ ತೆಗೆದರೆ ಅಲ್ಲೇ ಬಂದು ಹೊಡೆಯುತ್ತೇವೆ; ಮುಸ್ಲಿಂ ಡಿಫೆನ್ಸ್​ ಫೋರ್ಸ್​ ವಾಟ್ಸ್​ಆ್ಯಪ್​ ಗ್ರೂಪ್​​ನಲ್ಲಿ ಬೆದರಿಕೆ ಸಂದೇಶ
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 05, 2022 | 6:06 PM

Share

ಮುಸ್ಲಿಂ ಮಹಿಳೆಯರಿಗೆ ಬೆದರಿಕೆ ಒಡ್ಡುತ್ತಿದ್ದ ಮುಸ್ಲಿಂ ಡಿಫೆನ್ಸ್​ ಫೋರ್ಸ್​ ಎಂಬ ವಾಟ್ಸ್​ಆ್ಯಪ್​ ಗ್ರೂಪ್​​ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಇದು ಮುಸ್ಲಿಂ ಸಮುದಾಯದ ಗುಂಪೇ ಆಗಿದ್ದು, ತಮ್ಮದೇ ಸಮುದಾಯದ ಮಹಿಳೆಯರಿಗೆ ಬೆದರಿಕೆ ಒಡ್ಡುವ, ಎಚ್ಚರಿಕೆ ನೀಡುವ ಸಂದೇಶಗಳು ಈ ಗ್ರೂಪ್​​ನಲ್ಲಿ ಹರಿದಾಡಿವೆ ಎಂದು ಹೇಳಲಾಗಿದೆ. ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ, ಹಿಜಾಬ್ ತೆಗೆಯದರೆ ಅಂಥವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಮೆಸೇಜ್​​ಗಳು ಗುಂಪಿನಲ್ಲಿವೆ ಎನ್ನಲಾಗಿದೆ. 

ಅಂದಹಾಗೇ, ಈ ಗುಂಪಿನಲ್ಲಿ ಕನ್ನಡದಲ್ಲಿಯೇ ಸಂದೇಶಗಳನ್ನು ಮಾಡಲಾಗಿದೆ. ಕೆಲವು ಮಾಲ್​​ಗಳ ಬೇಸ್​ಮೆಂಟ್​ಗಳಲ್ಲಿ ಬುರ್ಕಾ ಧರಿಸಿಕೊಂಡು ನಿಂತು ಅನುಚಿತವಾಗಿ ವರ್ತನೆ ಮಾಡುವ ಹೆಣ್ಣುಮಕ್ಕಳು ಕಂಡುಬರುತ್ತಿದ್ದಾರೆ. ಅವರಿಗೆ ನಮ್ಮ ಕಾರ್ಯಕರ್ತರು ಅವರಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಇನ್ನೊಮ್ಮೆ ಇಂಥ ದೃಶ್ಯ ಕಂಡುಬಂದರೆ ಅಂಥವರಿಗೆ ಹೊಡೆಯುತ್ತೇವೆ ಎಂದು ಈ ಮುಸ್ಲಿಂ ಡಿಫೆನ್ಸ್​ ಫೋರ್ಸ್ ವಾಟ್ಸ್​ಆ್ಯಪ್​ ಗ್ರೂಪ್​​ನಲ್ಲಿ ಹೇಳಲಾಗಿದೆ. ಅಷ್ಟೇ ಅಲ್ಲ, ನಿಮ್ಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ, ಏನು ಮಾಡುತ್ತಾರೆ ಎಂಬುದನ್ನು ಗಮನಿಸಿ ಎಂದು ಪಾಲಕರಿಗೂ ತಿಳಿಸಲಾಗಿದೆ. ಇವರು ಮಂಗಳೂರಿನ ಮುಸ್ಲಿಂ ಹೆಣ್ಣುಮಕ್ಕಳ ಮೇಲೆ ಕಣ್ಣಿಟ್ಟಿದ್ದಾಗಿಯೂ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಗಮನಕ್ಕೆ ಬಂದಿರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಶಶಿ ಕುಮಾರ್​ ತಿಳಿಸಿದ್ದು, ಸೋಷಿಯಲ್​ ಮೀಡಿಯಾಗಳಲ್ಲಿ ಹಾಕಲಾಗುತ್ತಿರುವ ಬೆದರಿಕೆಯುಕ್ತ ಮೆಸೇಜ್​​ಗಳ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಹಾಗೇ, ಪಾಲಕರ ಬಳಿಯೂ ಎಚ್ಚರಿಕೆಯಿಂದ ಇರುವಂತೆ ಹೇಳಿದ್ದಾರೆ. ನಿಮ್ಮ ಮಕ್ಕಳಿಗೆ ಸಾರ್ವಜನಿಕ ಪ್ರದೇಶಗಳಲ್ಲಿ ಸೆಲ್ಫೀ ತೆಗೆಯದಂತೆ ಹೇಳಿ ಎಂಬ ಸಲಹೆಯನ್ನೂ ನೀಡಿದ್ದಾರೆ. (Source)

ಇದನ್ನೂ ಓದಿ: ಕತ್ರಿನಾ ಕೈಫ್ ತಾಯಿಗೆ 70ನೇ ವರ್ಷದ ಹುಟ್ಟುಹಬ್ಬ; ವಿಶೇಷವಾಗಿ ಬರ್ತ್​ಡೇ ಆಚರಿಸಿದ ನಟಿ

Published On - 6:05 pm, Thu, 5 May 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ