AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಚ್ಚಿದ ಚೇಳು; ಅಪಾಯದಿಂದ ಪಾರು

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಚೇಳು ಕಚ್ಚಿರುವ ಘಟನೆ ಏಪ್ರಿಲ್ 23 ರಂದು ನಡೆದಿದ್ದು, ಇದೀಗ ಏರ್ ಇಂಡಿಯಾ ದೃಢಪಡಿಸಿದೆ. ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದಿದೆ.

ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕಚ್ಚಿದ ಚೇಳು; ಅಪಾಯದಿಂದ ಪಾರು
ಏರ್​ ಇಂಡಿಯಾ
ಕಿರಣ್ ಹನುಮಂತ್​ ಮಾದಾರ್
|

Updated on: May 06, 2023 | 12:04 PM

Share

ಏಪ್ರಿಲ್ 23 ರಂದು ನಾಗ್ಪುರದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ(Air India) ವಿಮಾನ AI 630 ನಲ್ಲಿ ಚೇಳೊಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಕಚ್ಚಿರುವ ಘಟನೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಏರ್ ಇಂಡಿಯಾ ವಕ್ತಾರರು ANI ಗೆ ತಿಳಿಸಿದ್ದಾರೆ. ಈ ಹಿಂದೆ ವಿಮಾನದಲ್ಲಿ ಜೀವಂತ ಪಕ್ಷಿಗಳು ಮತ್ತು ಇಲಿಗಳು ಕಂಡುಬಂದ ನಿದರ್ಶನಗಳಿದ್ದರೂ, ಇದೇ ಮೊದಲ ಬಾರಿಗೆ ಪ್ರಯಾಣಿಕರಿಗೆ ಚೇಳು ಕಚ್ಚಿದ್ದು, ಇದು ಅಪರೂಪದ ನಿದರ್ಶನವಾಗಿದೆ.

ಇನ್ನು ಚೇಳು ಕಚ್ಚಿದ ಕೂಡಲೇ ಮಹಿಳಾ ಪ್ರಯಾಣಿಕರಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡಿದ್ದು, ಮತ್ತು ವಿಮಾನ ಲ್ಯಾಂಡ್ ಆದ ಕೂಡಲೇ ನಮ್ಮ ಅಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಿದರು.ಇನ್ನು ಅವರನ್ನು ಡಿಸ್ಚಾರ್ಜ್ ಮಾಡುವವರೆಗೂ ಪ್ರಯಾಣಿಕರಿಗೆ ಎಲ್ಲಾ ಬೆಂಬಲವನ್ನು ನೀಡಿದ್ದೇವೆ ಎಂದು AI ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ:Air India: ಏರ್ ಇಂಡಿಯಾ ಭರ್ಜರಿ ಡೀಲ್; ಫ್ರಾನ್ಸ್, ಅಮೆರಿಕದಿಂದ ದಾಖಲೆ ಸಂಖ್ಯೆಯಲ್ಲಿ ವಿಮಾನ ಖರೀದಿ

ಇನ್ನು ಘಟನೆಯ ಮಾಹಿತಿ ಪಡೆದ ಏರ್ ಇಂಡಿಯಾದ ಇಂಜಿನಿಯರಿಂಗ್ ತಂಡವು ವಿಮಾನವನ್ನ ಸಂಪೂರ್ಣ ತಪಾಸಣೆ ನಡೆಸಿತು. ಚೇಳನ್ನು ಪತ್ತೆಹಚ್ಚಿದ ನಂತರ ವಿಮಾನವನ್ನ ಸಂಪೂರ್ಣವಾಗಿ ಹೊಗೆ(Smoke) ಹಾಕುವ ಪ್ರಕ್ರಿಯೆ ನಡೆಸಲಾಯಿತು. ಪ್ರಯಾಣಿಕರಿಗೆ ಉಂಟಾದ ಸಂಕಟ ಮತ್ತು ಅನಾನುಕೂಲತೆಗಾಗಿ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ” ಎಂದು ಏರ್ ಇಂಡಿಯಾ ಹೇಳಿದೆ.

ಇನ್ನಷ್ಟು ದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?