AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುದೊಡ್ಡ ಮಟ್ಟದ ರೈಲು ದುರಂತ ತಪ್ಪಿಸಿದ ಮಹಿಳೆ; ರೈಲು ನಿಲ್ಲಿಸಲು ತಮ್ಮ ಕೆಂಪು ಸೀರೆ ಕಟ್ಟಿ, ಹಳಿ ಮೇಲೇ ನಿಂತರು !

ಎಂದಿನಂತೆ ಗುರುವಾರ ಬೆಳಗ್ಗೆ 8ಗಂಟೆಯ ಒಳಗೇ ಓಮವತಿ ಕೆಲಸಕ್ಕೆಂದು ಹೊಲಕ್ಕೆ ಹೊರಟಿದ್ದರು. ಆಗ ಅವರಿಗೆ ಅಲ್ಲಿನ ರೈಲ್ವೆ ಹಳಿ ಬಿರುಕುಬಿಟ್ಟಿದ್ದು ಕಾಣಿಸಿಕೊಂಡಿದೆ. ಅಂದರೆ ಕಂಬಿ ಕಟ್​ ಆಗಿತ್ತು. ಸಮಯ ಎಂಟುಗಂಟೆಯಾಗುತ್ತಿತ್ತು, ಅದು ಇಟಾಹ್​-ಟುಂಡ್ಲಾ ರೈಲು ಬರುವ ಸಮಯ.

ಬಹುದೊಡ್ಡ ಮಟ್ಟದ ರೈಲು ದುರಂತ ತಪ್ಪಿಸಿದ ಮಹಿಳೆ; ರೈಲು ನಿಲ್ಲಿಸಲು ತಮ್ಮ ಕೆಂಪು ಸೀರೆ ಕಟ್ಟಿ, ಹಳಿ ಮೇಲೇ ನಿಂತರು !
ರೈಲ್ವೆ ಹಳಿಗೆ ಅಡ್ಡಲಾಗಿ ಸೀರೆ ಕಟ್ಟಿದ ಮಹಿಳೆ
TV9 Web
| Edited By: |

Updated on: Apr 03, 2022 | 8:27 AM

Share

ಯಾವುದಾದರೂ ಒಂದು ಸಮಸ್ಯೆ ಎದುರಾದಾಗ, ಕಷ್ಟಕ್ಕೆ ಸಿಲುಕಿದಾಗ ಅದರಿಂದ ಹೊರಗೆ ಬರುವ ವಿಧಾನವನ್ನು ಅತ್ಯಂತ ವೇಗವಾಗಿ ಯೋಚಿಸುವ ಸ್ವಭಾವ ಅಳವಡಿಸಿಕೊಳ್ಳುವುದು, ಸಮಯಪ್ರಜ್ಞೆ ರೂಢಿಸಿಕೊಳ್ಳುವುದು ಪ್ರತಿನಿತ್ಯದ ಜೀವನದಲ್ಲಿ ತುಂಬ ಮುಖ್ಯ. ಈಗ ಉತ್ತರ ಪ್ರದೇಶದ ಇಟಾಹ್​​ನಲ್ಲಿ 58 ವರ್ಷದ ಮಹಿಳೆಯೊಬ್ಬರು ತಮ್ಮ ಸಮಯಪ್ರಜ್ಞೆಯಿಂದ ರೈಲು ದುರಂತವನ್ನು ತಪ್ಪಿಸಿದ್ದಾರೆ. ಅಷ್ಟಕ್ಕೂ ಅವರು ಮಾಡಿದ್ದು ಸಣ್ಣ ಕೆಲಸವೇನೂ ಅಲ್ಲ, 150 ಪ್ರಯಾಣಿಕರ ಜೀವ ಉಳಿಸಿದ್ದಾರೆ.

ಸೀರೆ ಕಟ್ಟಿದ ಓಮವತಿ !

ಇಟಾಹ್​ನ ನಾಗ್ಲಾ ಗುಲೇರಿಯಾ ಎಂಬ ಪ್ರದೇಶದ ನಿವಾಸಿ ಈ ಮಹಿಳೆ. ಹೆಸರು ಓಮವತಿ. ಮನೆ ಸಮೀಪವೇ ಇವರ ಹೊಲವಿದೆ. ಹಾಗೇ ಅಲ್ಲೆಲ್ಲ ರೈಲ್ವೆ ಹಳಿಗಳು ಹಾದುಹೋಗಿದ್ದು, ಪ್ರತಿದಿನ ವಿವಿಧ ಪ್ರದೇಶಗಳಿಗೆ ಹೋಗುವ ರೈಲುಗಳು ಸಂಚಾರ ಮಾಡುತ್ತಿರುತ್ತವೆ. ಎಂದಿನಂತೆ ಗುರುವಾರ ಬೆಳಗ್ಗೆ 8ಗಂಟೆಯ ಒಳಗೇ ಓಮವತಿ ಕೆಲಸಕ್ಕೆಂದು ಹೊಲಕ್ಕೆ ಹೊರಟಿದ್ದರು. ಆಗ ಅವರಿಗೆ ಅಲ್ಲಿನ ರೈಲ್ವೆ ಹಳಿ ಬಿರುಕುಬಿಟ್ಟಿದ್ದು ಕಾಣಿಸಿಕೊಂಡಿದೆ. ಅಂದರೆ ಕಂಬಿ ಕಟ್​ ಆಗಿತ್ತು. ಸಮಯ ಎಂಟುಗಂಟೆಯಾಗುತ್ತಿತ್ತು, ಅದು ಇಟಾಹ್​-ಟುಂಡ್ಲಾ ರೈಲು ಬರುವ ಸಮಯ ಎಂದು ಅರಿತ ಓಮವತಿ ತಕ್ಷಣಕ್ಕೆ ಕಾರ್ಯಪ್ರವೃತ್ತರಾದರು. ಒಂದು ಕ್ಷಣವನ್ನೂ ಹಾಳು ಮಾಡದೆ ಸೀದಾ ಮನೆಗೆ ಓಡಿ ತಮ್ಮ ಕೆಂಪು ಸೀರೆ ತಂದರು. ಹಳಿಯ ಅಕ್ಕಪಕ್ಕ ಎರಡು ಕೋಲುಗಳನ್ನು ನಿಲ್ಲಿಸಿ, ಅದಕ್ಕೆ ಸೀರೆ ಕಟ್ಟಿದರು.

ಇಷ್ಟು ಮಾಡಿ ಸುಮ್ಮನೆ ನಿಲ್ಲಲಿಲ್ಲ. ಅಷ್ಟರಲ್ಲಿ ರೈಲು ಬರುತ್ತಿರುವ ಶಬ್ದ ದೂರದಿಂದ ಕೇಳುತ್ತಿತ್ತು. ಕೂಡಲೇ ಹಳಿಯ ಮೇಲೆ ರೈಲು ಬರುತ್ತಿರುವ ಮಾರ್ಗಕ್ಕೆ ಅಭಿಮುಖವಾಗಿ ನಿಧಾನಕ್ಕೆ ಓಡಲು ಶುರು ಮಾಡಿದರು. ಆಗ ಅಪಾಯದ ಮುನ್ಸೂಚನೆ ಅರಿತ ಚಾಲಕ ರೈಲಿನ ವೇಗ ತಗ್ಗಿಸಿ, ಕೊನೆಗೂ ನಿಲ್ಲಿಸಿದರು. ಅಷ್ಟರಲ್ಲಿ ಸ್ಥಳೀಯರೂ ಕೆಲವರು ಅಲ್ಲಿಗೆ ಆಗಮಿಸಿದರು. ಬಳಿಕ ಬಂದ ರೈಲ್ವೆ ವಿಭಾಗದ ಅಧಿಕಾರಿಗಳು, ಸಿಬ್ಬಂದಿ, ಇಂಜಿನಿಯರ್​​ಗಳು ಹಳಿಪರಿಶೀಲನೆ ಮಾಡಿದ್ದಾರೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ರೈಲ್ವೆ ಹಳಿ ದುರಸ್ತಿಯಾಗಿದೆ. ಇದಕ್ಕೆ ಸುಮಾರು 45 ನಿಮಿಷಗಳು ಬೇಕಾಯಿತು ಎಂದು ಹೇಳಲಾಗಿದೆ.

ಓಮವತಿ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಯಾಗ್​ರಾಜ್​ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಮಿತ್ ಸಿಂಗ್​ ಪ್ರತಿಕ್ರಿಯೆ ನೀಡಿ, ನಾಗ್ಲಾ ಗುಲೇರಿಯಾ ಹಳ್ಳಿಯ ಬಳಿ ರೈಲ್ವೆ ಹಳಿ ದುರಸ್ತಿ ಕಾರ್ಯ ನಡೆಸುತ್ತಿದ್ದು, ಅಲ್ಲಿ ರೈಲು 20 ಕಿಮೀ ವೇಗದಲ್ಲಿ ಚಲಿಸಲು ಸಾಧ್ಯವಿಲ್ಲ. ಹೀಗಿರುವಾಗ ಮಹಿಳೆ ಚಾಲಕನನ್ನು ಅಲರ್ಟ್ ಮಾಡಿದ್ದು, ನಿಜಕ್ಕೂ ಶ್ಲಾಘನೀಯ ಕೆಲಸ. ಯಾಕೆಂದರೆ ಬಿರುಕು ಬಿಟ್ಟ ಕಂಬಿಯಲ್ಲಿ ರೈಲು ಹೋಗಿದ್ದರೆ, ದೊಡ್ಡಮಟ್ಟದ ಅಪಾಯ ಆಗುವ ಸಾಧ್ಯತೆ ಇರುತ್ತಿತ್ತು ಎಂದು ಹೇಳಿದ್ದಾರೆ.  ಹಾಗೇ, ಸಚಿನ್​ ಕೌಶಿಕ್​ ಎಂಬುವರು ಮಹಿಳೆಯ ಫೋಟೋವನ್ನೂ ಹಂಚಿಕೊಂಡಿದ್ದಾರೆ.

ನಾನು ಅನಕ್ಷರಸ್ಥೆ

ರೈಲ್ವೆ ಹಳಿಯಲ್ಲಿ ಬಿರುಕು ಕಂಡ ಕ್ಷಣವನ್ನು ಓಮವತಿ ವಿವರಿಸಿದ್ದಾರೆ. ನಾನು ವಿದ್ಯೆ ಕಲಿತವಳಲ್ಲ. ಆದರೆ ಕೆಂಪು ಬಣ್ಣ ಅಪಾಯದ ಸಂಕೇತ ಎಂಬುದು ನನಗೆ ಗೊತ್ತಿತ್ತು. ಹಾಗೇ, ಕೆಂಪು ಬಣ್ಣದ ಬಾವುಟ ತೋರಿಸಿದರೆ ರೈಲನ್ನು ನಿಲ್ಲಿಸಿಬಹುದು ಎಂದು ತಿಳಿದಿತ್ತು. ಹಾಗಾಗಿ ಕೆಂಪು ಬಣ್ಣದ ಸೀರೆ ಕಟ್ಟಿದೆ. ಚಾಲಕ ನನಗೆ 100 ರೂಪಾಯಿ ಕೊಟ್ಟು, ಕೃತಜ್ಞತೆ ಸಲ್ಲಿಸಿದ. ನಾನು ಮೊದಲು ತೆಗೆದುಕೊಳ್ಳಲಿಲ್ಲ. ಆದರೆ ಗೌರವ ಸಲ್ಲಿಸಲು ಕೊಡುತ್ತಿದ್ದೇನೆ, ತೆಗೆದುಕೊಳ್ಳಿ ಎಂದು ಹೇಳಿದ ಬಳಿಕ ನಾನು ಸ್ವೀಕರಿಸಿದೆ. ನನ್ನ ಹಳ್ಳಿಯವರಂತೂ ಸಿಕ್ಕಾಪಟೆ ಖುಷಿಯಾಗಿದ್ದಾರೆ. ನಿಂತಿರುವ ರೈಲಿನ ಎದುರು, ನನ್ನೊಂದಿಗೆ ಫೋಟೋವನ್ನೂ ತೆಗೆದುಕೊಂಡಿದ್ದಾರೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: Petrol Diesel Price Hike: ಮತ್ತೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ, 13 ದಿನಗಳಲ್ಲಿ ಏರಿಕೆಯಾದ ಮೊತ್ತ 8 ರೂಪಾಯಿಗೂ ಹೆಚ್ಚು

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ