AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಕಾಲು ಜಾರಿ ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದ ಮಹಿಳೆ, ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತ್​​ನ ಗಾಂಧಿನಗರ ರೈಲು ನಿಲ್ದಾಣದಲ್ಲಿ ನಡೆದಿದೆ.

ಅಕ್ಷಯ್​ ಪಲ್ಲಮಜಲು​​
|

Updated on:Jul 31, 2023 | 3:45 PM

Share

ಗಾಂಧಿನಗರ, ಜು.31: ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುಜರಾತ್​​ನ ಗಾಂಧಿನಗರ ರೈಲು ನಿಲ್ದಾಣದಲ್ಲಿ ನಡೆದಿದೆ. ರೈಲ್ವೆ ಪೊಲೀಸ್ ಪಡೆ (ಆರ್‌ಪಿಎಫ್) ಇನ್‌ಸ್ಪೆಕ್ಟರ್​​ರೊಬ್ಬರ ಸಮಯಪ್ರಜ್ಞೆಯಿಂದ ಆ ಮಹಿಳೆಯನ್ನು ಕಾಪಾಡಿದ್ದಾರೆ ಎಂದು ನ್ಯೂಸ್​​9 ವರದಿ ಮಾಡಿದೆ. ಈ ಘಟನೆಗೆ ಸಂಬಂಧಿಸಿದಂತೆ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ವಿಡಿಯೋದಲ್ಲಿ ಕೆಂಪು ಮತ್ತು ಕಿತ್ತಳೆ ಬಣ್ಣದ ಸೀರೆಯನ್ನು ಧರಿಸಿದ ಮಹಿಳೆ ತನ್ನ ಕಂಪಾರ್ಟ್‌ಮೆಂಟ್ ಅನ್ನು ಹುಡುಕುತ್ತಾ ರೈಲಿನ ಕಡೆಗೆ ಹೋಗುತ್ತಿರುವುದನ್ನು ಕಾಣಬಹುದು. ಬಳಿಕ ಆಕೆ ಒಂದು ಕೋಚ್ ಹತ್ತಲು ಪ್ರಯತ್ನಿಸಿದಾಗ ರೈಲು ಮುಂದೆ ಚಲಿಸಿದೆ. ಈ ಸಮಯದಲ್ಲಿ ಮಹಿಳೆ ಕಾಲು ಜಾರಿ ರೈಲಿನ ಬಾಗಿಲು ಹಿಡಿದುಕೊಂಡು ಪ್ಲಾಟ್‌ಫಾರ್ಮ್‌ ಮೇಲೆ ಬಿದ್ದಿದ್ದರೆ. ರೈಲು ಚಲಿಸುತ್ತಿದ್ದ ಕಾರಣ, ಆಕೆಯನ್ನು ಸ್ವಲ್ಪ ದೂರ ವರೆಗೆ ಎಳೆದುಕೊಂಡು ಹೋಗಿದೆ. ಬಳಿಕ ಅಲ್ಲಿದ್ದ ಪೊಲೀಸ್​​ ಸಿಬ್ಬಂದಿ ಮಹಿಳೆಯನ್ನು ಕಾಪಾಡಿರುವುದನ್ನು ನೀವು ಈ ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಗುಜರಾತ್​ನಲ್ಲಿ ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು

ಇಂತಹದೇ ಒಂದು ಘಟನೆ ಜು.10ರಂದು ಮಹಾರಾಷ್ಟ್ರದ ಥಾಣೆ ಬಳಿಯ ದಿವಾ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಿಂದ ಬಿದ್ದ ಪ್ರಯಾಣಿಕನನ್ನು ಆರ್‌ಪಿಎಫ್ ಸಿಬ್ಬಂದಿ ರಕ್ಷಿಸಿದ್ದರು. ಅವರ ಸಮಯಪ್ರಜ್ಞೆಯಿಂದ ಒಂದು ಜೀವ ಉಳಿದ್ದಿದೆ ಎಂದು ಅವರ ಧೈರ್ಯಕ್ಕೆ ಮೆಚ್ಚಿ ಭಾರತೀಯ ರೈಲ್ವೇಯ ಆರ್‌ಪಿಎಫ್ ವಿಭಾಗ ಅವರನ್ನು ಸನ್ಮಾನಿಸಿದೆ. ಇಂತಹ ಅನೇಕ ಘಟನೆ ದೇಶದ ಬೇರೆ ಬೇರೆ ರೈಲು ನಿಲ್ದಾಣಗಳಲ್ಲಿ ನಡೆದಿದೆ. ಇದೀಗ ಭಾರತೀಯ ರೈಲ್ವೇ ಪ್ರಯಾಣಿಕರಿಗೆ ಜಾಗ್ರತೆ ವಹಿಸುವಂತೆ ಮತ್ತು ಸಿಬ್ಬಂದಿಗಳು ಪ್ರಯಾಣಿಕರ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:26 pm, Mon, 31 July 23

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?