AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಟಿಟಿಇ ಕೆಲಸದಿಂದ ವಜಾ

ಕುಡಿದ ಮತ್ತಿನಲ್ಲಿ ಪ್ರಯಾಣ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಮಾ.12ರಂದು ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೀಗ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಸೂಚನೆ ಮೇರೆಗೆ ಆತನನ್ನು ಬಂಧಿಸಿ, ಕೆಲಸದಿಂದ ವಜಾ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿ ಟಿಟಿಇ ಕೆಲಸದಿಂದ ವಜಾ
TTE
ಅಕ್ಷಯ್​ ಪಲ್ಲಮಜಲು​​
|

Updated on:Mar 14, 2023 | 4:41 PM

Share

ಲಕ್ನೋ: ಅಕಾಲ್ ತಖ್ತ್ ಎಕ್ಸ್‌ಪ್ರೆಸ್‌ನಲ್ಲಿ ಕುಡಿದ ಮತ್ತಿನಲ್ಲಿ ಪ್ರಯಾಣ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಮಾ.12ರಂದು ನಡೆದಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೀಗ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಸೂಚನೆ ಮೇರೆಗೆ ಆತನನ್ನು ಬಂಧಿಸಿ, ಕೆಲಸದಿಂದ ವಜಾ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಮಹಿಳೆ ತನ್ನ ಪತಿ ರಾಜೇಶ್ ಕುಮಾರ್ ಜೊತೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿತ್ತು. ಇಬ್ಬರೂ ಅಮೃತಸರ ಮೂಲದವರಾಗಿದ್ದಾರೆ.

ಅಮೃತಸರದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್‌ಪ್ರೆಸ್‌ನ ಎ1 ಕೋಚ್‌ನಲ್ಲಿ ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಜಿಆರ್‌ಪಿ ಅಧಿಕಾರಿ ತಿಳಿಸಿದ್ದಾರೆ. ಮಹಿಳೆಯ ಕೂಗು ಕೇಳಿ ಸುತ್ತಮುತ್ತ ಜಮಾಯಿಸಿದ ಪ್ರಯಾಣಿಕರು ಕುಡಿದ ಮತ್ತಿನಲ್ಲಿದ್ದ ಟಿಟಿಇಯನ್ನು ಬಿಹಾರದ ನಿವಾಸಿ ಮುನ್ನಾ ಕುಮಾರ್ ಎಂದು ಗುರುತಿಸಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಕುಡಿದ ಅಮಲಿನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ತಲೆ ಮೇಲೆ ಮೂತ್ರ ವಿಸರ್ಜಿಸಿದ ಟಿಟಿಇ ಬಂಧನ

ಸೋಮವಾರ ರೈಲು ಲಕ್ನೋದ ಚಾರ್‌ಬಾಗ್ ರೈಲು ನಿಲ್ದಾಣವನ್ನು ತಲುಪಿದಾಗ ಟಿಟಿಇಯನ್ನು ಜಿಆರ್‌ಪಿಗೆ ಹಸ್ತಾಂತರಿಸಲಾಯಿತು. ಟಿಟಿಇ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕೆಲ ತಿಂಗಳ ಹಿಂದೆ ವಿಮಾನದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎನ್ನಲಾಗಿದೆ. ನಂತರ, ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ ಶಂಕರ್ ಮಿಶ್ರಾ ಅವರನ್ನು ಬಂಧಿಸಲಾಯಿತು ಮತ್ತು ಏರ್ ಇಂಡಿಯಾ ವಿಮಾನದಲ್ಲಿ ಹಾರಾಟ ಮಾಡದಂತೆ 4 ತಿಂಗಳ ನಿಷೇಧವನ್ನು ವಿಧಿಸಲಾಯಿತು.

ಇತ್ತೀಚೆಗಿನ ಮತ್ತೊಂದು ಘಟನೆಯೆಂದರೆ ನ್ಯೂಯಾರ್ಕ್‌ನಿಂದ ದೆಹಲಿಗೆ ಅಮೆರಿಕನ್ ಏರ್‌ಲೈನ್ಸ್ ಟ್ರಿಪ್‌ನಲ್ಲಿ ಕುಡುಕನೊಬ್ಬ ತನ್ನ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅದರ ನಂತರ, ಪ್ರಯಾಣಿಕರನ್ನು ಐಜಿಐ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಬೆಂಗಳೂರಿನಲ್ಲಿ ಈ ರೀತಿಯ ಘಟನೆಯು ನಡೆದಿತ್ತು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಹೇಳಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Tue, 14 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ