AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ರೈಲ್ವೆ ಟಿಕೆಟ್​ ಬುಕ್ ಮಾಡಲು ಆಧಾರ್​ ಕಾರ್ಡ್, ಪಾಸ್​ಪೋರ್ಟ್​ ಕಡ್ಡಾಯವಾಗಲಿದೆ; ಶೀಘ್ರದಲ್ಲೇ ನಿಯಮ ಜಾರಿ

ಕೆಲವು ಮಧ್ಯವರ್ತಿಗಳು ರೈಲ್ವೆ ಟಿಕೆಟ್​​ನ್ನು ತ್ವರಿತವಾಗಿ ಬುಕ್​​ ಮಾಡಲು ಮುಂದುವರಿದ ಸಾಫ್ಟ್​ವೇರ್​ ಬಳಸುತ್ತಾರೆ. ಇದರಿಂದಾಗಿ ಒಂದೇ ಸಲಕ್ಕೆ 10-15 ಟಿಕೆಟ್​ ಬುಕ್​ ಮಾಡಬಹುದು. ನಕಲಿ ಪ್ರಯಾಣಿಕರ ಹೆಸರಿನಲ್ಲಿ ಟಿಕೆಟ್​ ಬುಕ್​ ಮಾಡಿ, ನಂತರ ಪ್ರೀಮಿಯಂ ದರಕ್ಕೆ ಮಾರಾಟ ಮಾಡುತ್ತಾರೆ ಎಂದು ಡಿಜಿ ಮಾಹಿತಿ ನೀಡಿದ್ದಾರೆ.

ಆನ್​ಲೈನ್​ನಲ್ಲಿ ರೈಲ್ವೆ ಟಿಕೆಟ್​ ಬುಕ್ ಮಾಡಲು ಆಧಾರ್​ ಕಾರ್ಡ್, ಪಾಸ್​ಪೋರ್ಟ್​ ಕಡ್ಡಾಯವಾಗಲಿದೆ; ಶೀಘ್ರದಲ್ಲೇ ನಿಯಮ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 26, 2021 | 9:03 AM

Share

ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ಕಿಂಗ್ ಮಾಡುವ ಏಜೆಂಟ್​​ಗಳು ಮಾಡಬಹುದಾದ ಅಕ್ರಮಗಳನ್ನು ತಡೆಯಲು ಭಾರತೀಯ ರೈಲ್ವೆ ಒಂದು ಹೊಸ ಕ್ರಮವನ್ನು ಜಾರಿಗೊಳಿಸಲು ಮುಂದಾಗಿದೆ. ಆನ್​​ಲೈನ್​ನಲ್ಲಿ ರೈಲ್ವೆ ಟಿಕೆಟ್​ ಬುಕ್​ ಮಾಡುವಾಗ ಆಧಾರ್​ ಕಾರ್ಡ್ ಮತ್ತು ಪಾಸ್​ಪೋರ್ಟ್​ನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಹೇಳಿದೆ. ಇಷ್ಟು ದಿನ ಬಳಕೆದಾರರ ಹೆಸರು ಮತ್ತು ಪಾಸ್​ವರ್ಡ್​ ಹಾಕಿ ವೆಬ್​ಸೈಟ್​​ನಲ್ಲಿ ಸರಳವಾಗಿ ಲಾಗಿನ್​ ಆಗಿ, ರೈಲ್ವೆ ಟಿಕೆಟ್​ ಬುಕ್​ ಮಾಡಬಹುದಿತ್ತು. ಆದರೆ ಇನ್ನುಮುಂದೆ ಲಾಗಿನ್​ ಆಗುವವರು ತಮ್ಮ ಪಾಸ್​ಪೋರ್ಟ್ ಅಥವಾ ಆಧಾರ್​ಕಾರ್ಡ್​​ನಂತಹ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

ರೈಲ್ವೆ ಟಿಕೆಟ್​ ಬುಕ್ಕಿಂಗ್ ವೆಬ್​​ಸೈಟ್​ ದುರ್ಬಳಕೆ ಆಗುತ್ತಿರುವುದು ಹೆಚ್ಚಾದ ಬೆನ್ನಲ್ಲೇ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಈ ನಿರ್ಧಾರ ಕೈಗೊಂಡಿದೆ. ಅದೆಷ್ಟೋ ದಲ್ಲಾಳಿಗಳು ಟಿಕೆಟ್​ ಬುಕ್ಕಿಂಗ್​ ಹೆಸರಲ್ಲಿ ಪ್ರಯಾಣಿಕರಿಗೆ, ನಿಗಮಕ್ಕೆ ವಂಚನೆ ಮಾಡುತ್ತಿದ್ದಾರೆ. ಅದನ್ನು ತಡೆಯಲು, ನಮ್ಮ ವೆಬ್​ಸೈಟ್​ಗೆ ಲಾಗಿನ್ ಆಗಲು ಆಧಾರ್ ಕಾರ್ಡ್​, ಪಾಸ್​ಪೋರ್ಟ್​​​ಗಳನ್ನು ಕಡ್ಡಾಯ ಮಾಡುವ ಬಗ್ಗೆ ಕ್ರಮಕೈಗೊಳ್ಳುತ್ತಿದ್ದೇವೆ ಎಂದು ರೈಲ್ವೆ ರಕ್ಷಣಾ ದಳದ ಡಿಜಿ ಅರುಣ್​ ಕುಮಾರ್ ತಿಳಿಸಿದ್ದಾರೆ.

ಕೆಲವು ಮಧ್ಯವರ್ತಿಗಳು ರೈಲ್ವೆ ಟಿಕೆಟ್​​ನ್ನು ತ್ವರಿತವಾಗಿ ಬುಕ್​​ ಮಾಡಲು ಮುಂದುವರಿದ ಸಾಫ್ಟ್​ವೇರ್​ ಬಳಸುತ್ತಾರೆ. ಇದರಿಂದಾಗಿ ಒಂದೇ ಸಲಕ್ಕೆ 10-15 ಟಿಕೆಟ್​ ಬುಕ್​ ಮಾಡಬಹುದು. ನಕಲಿ ಪ್ರಯಾಣಿಕರ ಹೆಸರಿನಲ್ಲಿ ಟಿಕೆಟ್​ ಬುಕ್​ ಮಾಡಿ, ನಂತರ ಪ್ರೀಮಿಯಂ ದರಕ್ಕೆ ಮಾರಾಟ ಮಾಡುತ್ತಾರೆ ಎಂದು ಡಿಜಿ ಮಾಹಿತಿ ನೀಡಿದ್ದಾರೆ. ವೆಬ್​ಸೈಟ್​ಗೆ ಆಧಾರ್​ ಕಾರ್ಡ್​ ಲಿಂಕ್ ಮಾಡುವ ವ್ಯವಸ್ಥೆ ಶೀಘ್ರದಲ್ಲೇ ಆಗುತ್ತದೆ. ಆದರೆ ಪಾಸ್​ಪೋರ್ಟ್​​ ಲಿಂಕ್​ ಮಾಡುವ ಸಂಬಂಧ ಕೆಲವು ಅಧಿಕಾರಿಗಳೊಂದಿಗೆ ಮಾತುಕತೆ ನಡೆಯುತ್ತಿದ್ದು, ಅದೂ ಕೂಡ ಆದಷ್ಟು ಬೇಗನೇ ಜಾರಿಯಾಗುತ್ತದೆ. ಹೀಗೆ ಲಾಗಿನ್​ ಮಾಡುವಾಗ ಆಧಾರ್​ ಕಾರ್ಡ್ ಅಥವಾ ಪಾಸ್​ಪೋರ್ಟ್ ಕಡ್ಡಾಯವಾಗಿ ಒದಗಿಸಬೇಕು ಎಂಬ ನಿಯಮ ಜಾರಿಯಾದರೆ ಅಕ್ರಮಗಳನ್ನು ಪತ್ತೆಹಚ್ಚಬಹುದು ಎಂದೂ ಐಆರ್​ಸಿಟಿಸಿ ಹೇಳಿದೆ.

ಹೀಗೆ ಮಧ್ಯವರ್ತಿಗಳ ಹೆಸರಲ್ಲಿ ಅಕ್ರಮವಾಗಿ ರೈಲ್ವೆ ಟಿಕೆಟ್​ ಬುಕ್ ಮಾಡುವವರಿಗೆ ನೀಡಲಾಗುವ ಶಿಕ್ಷೆ ಪ್ರಮಾಣವನ್ನೂ ಭಾರತೀಯ ರೈಲ್ವೆ ಹೆಚ್ಚಿಸಿದೆ. 2018ರಿಂದ ಈ ಬಾರಿಯ ಮೇ ತಿಂಗಳವರೆಗೆ ಇಂಥ ಸುಮಾರು 14,250 ಮಂದಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಬಿಜೆಪಿ ಗರ್ಭಗುಡಿಯಲ್ಲಿ ರಮೇಶ್​ ಜಾರಕಿಹೊಳಿ ಇರೋದು ಕಷ್ಟ; ಕಾಂಗ್ರೆಸ್​ನಲ್ಲಿ 8-10 ಜನರಿಗೆ ಮುಖ್ಯಮಂತ್ರಿ ಆಗೋ ಯೋಗ್ಯತೆ ಇದೆ: ಕೈ ಶಾಸಕ

Published On - 9:01 am, Sat, 26 June 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!