ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ

ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಅಥವಾ ಕಾರಣಾಂತರಗಳಿಂದ ಆಧಾರ್ ಆನ್​ಲೈನ್ ವೆರಿಫಿಕೇಷನ್ ಆಗದೇ ಉಳಿದಿದ್ದರೆ ಸಂಬಂಧಪಟ್ಟ ಇಲಾಖೆ ಅಥವಾ ವಿಭಾಗವು ಆಧಾರ್ ಆಕ್ಟ್​ನ ಸೆಕ್ಷನ್ 7ರ ಪ್ರಕಾರ ಸೇವೆಯನ್ನು ನೀಡಬೇಕು ಎಂದು ಯುಐಡಿಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕೊವಿಡ್ ಸಂಬಂಧಿ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ; ಯುಐಡಿಎಐ ಸ್ಪಷ್ಟನೆ
ಆಧಾರ್ ಕಾರ್ಡ್
Follow us
| Updated By: ganapathi bhat

Updated on:Aug 23, 2021 | 12:30 PM

ದೆಹಲಿ: ಕೊರೊನಾಕ್ಕೆ ಸಂಬಂಧಪಟ್ಟ ಯಾವುದೇ ಸೇವೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಯುಐಡಿಎಐ (Unique Identification Authority of India) ಶನಿವಾರ ಸ್ಪಷ್ಟೀಕರಣ ನೀಡಿದೆ. ಆಸ್ಪತ್ರೆಗೆ ದಾಖಲಾಗುವುದಕ್ಕೆ ಹಾಗೂ ಕೊರೊನಾ ಲಸಿಕೆಗೆ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ ಎಂಬ ಸಂದೇಶಗಳು ಹರಿದಾಡಿದ್ದವು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಯುಐಡಿಎಐ, ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.

ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಇಲ್ಲದಿದ್ದರೆ ಅಥವಾ ಕಾರಣಾಂತರಗಳಿಂದ ಆಧಾರ್ ಆನ್​ಲೈನ್ ವೆರಿಫಿಕೇಷನ್ ಆಗದೇ ಉಳಿದಿದ್ದರೆ ಸಂಬಂಧಪಟ್ಟ ಇಲಾಖೆ ಅಥವಾ ವಿಭಾಗವು ಆಧಾರ್ ಆಕ್ಟ್​ನ ಸೆಕ್ಷನ್ 7ರ ಪ್ರಕಾರ ಸೇವೆಯನ್ನು ನೀಡಬೇಕು ಎಂದು ಯುಐಡಿಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಲಸಿಕೆ ರಿಜಿಸ್ಟ್ರೇಷನ್ ಪ್ರಕ್ರಿಯೆಗೆ ಆಧಾರ್ ಕಾರ್ಡ್ ಫೊಟೊ ಐಡೆಂಟಿಟಿ ಕಾರ್ಡ್ ಆಗಿ ಕೆಲಸ ಮಾಡುತ್ತದೆ. ಆದರೆ, ಆಧಾರ್ ಕಾರ್ಡ್ ಹೊರತಾಗಿ ಬೇರೆ ದಾಖಲೆಗಳನ್ನು ಕೂಡ ವ್ಯಕ್ತಿಯು ಬಳಸಬಹುದಾಗಿದೆ. ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪೆನ್ಶನ್ ಡಾಕ್ಯುಮೆಂಟ್ ಕೂಡ ಲಸಿಕೆ ರಿಜಿಸ್ಟ್ರೇಶನ್​ಗೆ ದಾಖಲೆಯಾಗಿ ಬಳಸಬಹುದಾಗಿದೆ.

ಆಧಾರ್ ಕಾರ್ಡ್ ಸಹಿತ ನಿಗದಿತ ದಾಖಲೆ ಪತ್ರಗಳು ಇಲ್ಲದ ಜನರಿಗೆ ಲಸಿಕೆ ನೀಡುವ ಬಗ್ಗೆಯೂ ಆರೋಗ್ಯ ಸಚಿವಾಲಯ ಹೊಸ ಮಾರ್ಗವನ್ನು ಸೂಚಿಸಿದೆ. ಅಗತ್ಯ ವಸ್ತು ಅಥವಾ ಸೇವೆಯ ಪೂರೈಕೆಯನ್ನು ಆಧಾರ್ ಕಾರ್ಡ್ ಇಲ್ಲ ಎಂದು ನೆಪವೊಡ್ಡಿ ತಪ್ಪಿಸುವಂತಿಲ್ಲ. ಆಧಾರ್ ಕಾರ್ಡ್ ಇಲ್ಲದೇ ಹೋದರೂ ಸೇವೆ ನೀಡಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕ ಕೊವಿಡ್ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41,664 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 349 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 13,402 ಜನರಿಗೆ ಸೋಂಕು ಪತ್ತೆಯಾಗಿದ್ದು, 94 ಜನರು ನಿಧನರಾಗಿದ್ದಾರೆ. ಇವೆಲ್ಲವುಗಳ ಜತೆ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 34,422 ಜನರು ಕೊವಿಡ್​ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಇಂದು ಪತ್ತೆಯಾದ ಕೊವಿಡ್ ಸೋಂಕಿತರನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಪೈಕಿ 15,44,982 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 21,434 ಜನರ ಸಾವನ್ನಪ್ಪಿದ್ದು, 6,05,494 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಈ ಪ್ರದೇಶದಲ್ಲಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ದಾಖಲು; ಅಧಿಕಾರಿಗಳಲ್ಲಿ ಆತಂಕ

ಸೋಂಕಿತರ ಸಾವನ್ನು ನೋಡಲು ಕಷ್ಟವಾಗುತ್ತಿದೆ; ಕೊರೊನಾ ಪರಿಸ್ಥಿತಿ ವಿವರಿಸುತ್ತಾ ಕಣ್ಣೀರು ಹಾಕಿದ ವೈದ್ಯ

Published On - 9:03 pm, Sat, 15 May 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ