AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಧಾರ್ ಪೌರತ್ವದ ದಾಖಲೆಯಲ್ಲ’; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ

ಆಧಾರ್ ಅನ್ನು ಪೌರತ್ವದ ನಿರ್ಣಾಯಕ ದಾಖಲೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬ ಭಾರತದ ಚುನಾವಣಾ ಆಯೋಗದ (ECI) ನಿಲುವನ್ನು ಸುಪ್ರೀಂ ಕೋರ್ಟ್ ಇಂದು ಅನುಮೋದಿಸಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಅನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

'ಆಧಾರ್ ಪೌರತ್ವದ ದಾಖಲೆಯಲ್ಲ'; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬೆಂಬಲ
Aadhaar
ಸುಷ್ಮಾ ಚಕ್ರೆ
|

Updated on:Aug 12, 2025 | 5:27 PM

Share

ನವದೆಹಲಿ, ಆಗಸ್ಟ್ 12: ಆಧಾರ್ ಕಾರ್ಡ್ (Aadhaar Card) ಅನ್ನು ಭಾರತೀಯ ಪೌರತ್ವದ ಪುರಾವೆಯಾಗಿ ಪರಿಗಣಿಸಲು ಆಗುವುದಿಲ್ಲ. ಅದನ್ನು ಸರಿಯಾದ ಪರಿಶೀಲನೆಗೆ ಒಳಪಡಿಸಬೇಕು ಎಂಬ ಚುನಾವಣಾ ಆಯೋಗದ ನಿಲುವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿಹಿಡಿದಿದೆ. ವಿವಿಧ ಸೇವೆಗಳನ್ನು ಪಡೆಯಲು ಆಧಾರ್ ಒಂದು ಪ್ರಮುಖ ಗುರುತಿನ ದಾಖಲೆಯಾಗಿ ಕಾರ್ಯನಿರ್ವಹಿಸುತ್ತದೆಯಾದರೂ ಅದು ಭಾರತೀಯ ಪೌರತ್ವದ ದಾಖಲೆಯಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ. ಬಿಹಾರದ ವಿಶೇಷ ಪರಿಷ್ಕರಣೆ (SIR) ಕುರಿತಾದ ವಿವಾದದ ಮಧ್ಯೆ ಸುಪ್ರೀಂ ಕೋರ್ಟ್‌ನ ಈ ತೀರ್ಪು ಬಂದಿದೆ. ಈ ವಿಷಯವನ್ನು ಆಲಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೂರ್ಯ ಕಾಂತ್, ಆಧಾರ್ ಕಾರ್ಡ್ ಅನ್ನು ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂಬ ಚುನಾವಣಾ ಆಯೋಗದ ನಿರ್ಧಾರ ಸರಿಯಾಗಿದೆ. ಅದನ್ನು ಮಾನ್ಯ ಪುರಾವೆಯಾಗಿ ಪರಿಗಣಿಸುವ ಮೊದಲು ಸರಿಯಾದ ಪರಿಶೀಲನೆ ಅತ್ಯಗತ್ಯ ಎಂದು ಹೇಳಿದ್ದಾರೆ.

“ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಹೇಳುವುದು ಸರಿಯಾಗಿದೆ. ಅದನ್ನು ಪರಿಶೀಲಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ತಿಳಿಸಿದ್ದಾರೆ. ಭಾರತದ ಚುನಾವಣಾ ಆಯೋಗವು ಮತದಾರರ ಪರಿಶೀಲನಾ ಪ್ರಕ್ರಿಯೆಯನ್ನು ನಡೆಸುವ ಅಧಿಕಾರವನ್ನು ಹೊಂದಿದೆಯೇ ಎಂಬುದು ಮುಖ್ಯ. ಚುನಾವಣಾ ಆಯೋಗಕ್ಕೆ ಅಂತಹ ಅಧಿಕಾರವಿಲ್ಲದಿದ್ದರೆ ಆ ವಿಷಯ ಅಲ್ಲಿಗೆ ಕೊನೆಗೊಳ್ಳುತ್ತದೆ ಒಂದುವೇಳೆ ಅದು ಅಧಿಕಾರವನ್ನು ಹೊಂದಿದ್ದರೆ, ಪ್ರಕ್ರಿಯೆಗೆ ಯಾವುದೇ ಆಕ್ಷೇಪಣೆ ಇರಬಾರದು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರದ ಯಾವುದೇ ಮತದಾರರನ್ನು ಪೂರ್ವ ಸೂಚನೆ ಇಲ್ಲದೆ ಪಟ್ಟಿಯಿಂದ ತೆಗೆದುಹಾಕುವುದಿಲ್ಲ: ಚುನಾವಣಾ ಆಯೋಗ

ಎಸ್‌ಐಆರ್ ಪ್ರಕ್ರಿಯೆಯು ಕಾನೂನಿನ ಪ್ರಕಾರವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. “ಅಂತಹ ಪ್ರಕ್ರಿಯೆಯನ್ನು ಮುಂದುವರಿಸಬಹುದೇ ಅಥವಾ ಇಲ್ಲವೇ ಎಂದು ನಮಗೆ ತಿಳಿಸಿ. ಷರತ್ತುಬದ್ಧ ಯೋಜನೆಯಡಿಯಲ್ಲಿ ಅಂತಹ ಪ್ರಕ್ರಿಯೆಯನ್ನು ಅನುಮೋದಿಸಲಾಗಿದೆ ಎಂದು ನೀವು ಹೇಳಿದರೆ ನಾವು ಪ್ರಕ್ರಿಯೆಯನ್ನು ಪರಿಗಣಿಸುತ್ತೇವೆ. ಅದು ಸಂವಿಧಾನದಲ್ಲಿಲ್ಲ ಎಂದು ನೀವು ಹೇಳಿದರೆ ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಕೋರ್ಟ್ ಹೇಳಿದೆ.

ಇದನ್ನೂ ಓದಿ: Video: ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ನೇತೃತ್ವದಲ್ಲಿ ಸಂಸದರ ಮೆರವಣಿಗೆ

ಕರಡು ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರುಗಳನ್ನು ಹೊರಗಿಡಲಾಗಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮತ್ತಷ್ಟು ಸ್ಪಷ್ಟತೆ ಕೋರಿತು. ಈ ಅಂಕಿಅಂಶಗಳ ಆಧಾರವನ್ನು ಪ್ರಶ್ನಿಸಿ “ನಿಮ್ಮ ಅನುಮಾನವು ಕಾಲ್ಪನಿಕವೇ ಅಥವಾ ನಿಜವಾದ ಕಾಳಜಿಯೇ ಎಂದು ನಾವು ಅರ್ಥಮಾಡಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿತು. 12 ಜೀವಂತ ಜನರನ್ನು ಸತ್ತಂತೆ ತೋರಿಸಲಾಗಿದೆ ಎಂದು ಕಪಿಲ್ ಸಿಬಲ್ ಹೇಳುತ್ತಾರೆ. ಆದರೆ, ಅದು ಕೇವಲ ಕರಡು ಪಟ್ಟಿ ಎಂದು ಚುನಾವಣಾ ಆಯೋಗ ಹೇಳುತ್ತದೆ. “ಎಷ್ಟು ಜನರು ಸತ್ತಿದ್ದಾರೆಂದು ಗುರುತಿಸಲಾಗಿದೆ ಎಂದು ನಾವು ನಿಮ್ಮಿಂದ ತಿಳಿದುಕೊಳ್ಳಲು ಬಯಸುತ್ತೇವೆ. ನಿಮ್ಮ ಅಧಿಕಾರಿಗಳು ಈ ಬಗ್ಗೆ ಸ್ವಲ್ಪ ಕೆಲಸ ಮಾಡಿರಬೇಕಲ್ಲವೇ?” ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವನ್ನು ಪ್ರಶ್ನಿಸಿತು.

ಬಿಹಾರದ ಎಸ್‌ಐಆರ್ ಎಂದರೇನು?:

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುಂಚಿತವಾಗಿ ಬಿಹಾರ ರಾಜ್ಯದ ಮತದಾರರ ಪಟ್ಟಿಯನ್ನು ನವೀಕರಿಸಲು ಮತ್ತು ಸರಿಪಡಿಸಲು ಬಿಹಾರದ ವಿಶೇಷ ತೀವ್ರ ಪರಿಷ್ಕರಣೆ (SIR)ಯನ್ನು ಚುನಾವಣಾ ಆಯೋಗವು ನಡೆಸುತ್ತಿದೆ. ಈ ಪ್ರಕ್ರಿಯೆಯ ಅಡಿಯಲ್ಲಿ, ಅಧಿಕಾರಿಗಳು ಅಸ್ತಿತ್ವದಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸುತ್ತಾರೆ, ಅರ್ಹ ಹೊಸ ಮತದಾರರ ಹೆಸರುಗಳನ್ನು ಸೇರಿಸುತ್ತಾರೆ ಮತ್ತು ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಅಥವಾ ಅನರ್ಹರಾಗಿರುವವರ ಹೆಸರುಗಳನ್ನು ತೆಗೆದುಹಾಕುತ್ತಾರೆ. ಇದು ಬೂತ್ ಮಟ್ಟದ ಅಧಿಕಾರಿಗಳ (BLO) ಕ್ಷೇತ್ರ ಭೇಟಿಗಳು, ಮತದಾರರಿಂದ ಫಾರ್ಮ್‌ಗಳನ್ನು ಸಂಗ್ರಹಿಸುವುದು ಮತ್ತು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ದಾಖಲೆಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ. ಚುನಾವಣಾ ಸಂಸ್ಥೆಯ ಪ್ರಕಾರ, ಚುನಾವಣೆಗಳು ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮತದಾರರ ಪಟ್ಟಿಯನ್ನು ಸ್ವಚ್ಛವಾಗಿ ಮತ್ತು ದೋಷ ಮುಕ್ತವಾಗಿಡುವುದು ಗುರಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 5:24 pm, Tue, 12 August 25

Follow Us
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!