AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Verification: ಗುರುತಿನ ದಾಖಲೆಯಾಗಿ ಆಧಾರ್ ಸ್ವೀಕರಿಸುವ ಮೊದಲು ಪ್ರಮಾಣಿಸಿಕೊಳ್ಳಿ: ಮಂಗಳೂರು ಕೃತ್ಯದ ನಂತರ ಎಚ್ಚರಿಸಿದ UIDAI

ವ್ಯಕ್ತಿಯ ಗುರುತಿನ ದಾಖಲೆಗಾಗಿ ಭೌತಿಕ ಅಥವಾ ಎಲೆಕ್ಟ್ರಾನಿಕ್ ರೂಪದಲ್ಲಿ ಆಧಾರ್( Aadhaar) ಸ್ವೀಕರಿಸುವ ಮೊದಲು ಆಧಾರ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಯುಐಡಿಎಐ ಹೇಳಿದೆ.

Aadhaar Verification: ಗುರುತಿನ ದಾಖಲೆಯಾಗಿ ಆಧಾರ್ ಸ್ವೀಕರಿಸುವ ಮೊದಲು ಪ್ರಮಾಣಿಸಿಕೊಳ್ಳಿ: ಮಂಗಳೂರು ಕೃತ್ಯದ ನಂತರ ಎಚ್ಚರಿಸಿದ UIDAI
Aadhaar
TV9 Web
| Edited By: |

Updated on: Nov 25, 2022 | 12:10 PM

Share

ವ್ಯಕ್ತಿಯ ಗುರುತಿನ ದಾಖಲೆಗಾಗಿ ಭೌತಿಕ ಅಥವಾ ಎಲೆಕ್ಟ್ರಾನಿಕ್ ರೂಪದಲ್ಲಿ ಆಧಾರ್( Aadhaar) ಸ್ವೀಕರಿಸುವ ಮೊದಲು ಆಧಾರ್ ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಹೇಳಿದೆ. ಈ ನಿಟ್ಟಿನಲ್ಲಿ ಯುಐಡಿಎಐ ಎಲ್ಲಾ ರಾಜ್ಯಗಳಿಗೆ ಮನವಿ ಮಾಡಿದ್ದು, ಆಧಾರ್ ಕಾರ್ಡ್​ ಅನ್ನು ಗುರುತಿನ ಪುರಾವೆ ಅಥವಾ ವಿಳಾಸದ ಪುರಾವೆಗಾಗಿ ಸ್ವೀಕರಿಸಿದರೆ , ಆಧಾರ್ ಸಂಖ್ಯೆಯನ್ನು ಪರಿಶೀಲಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಬೇಸ್​ನಲ್ಲಿರುವ ಬಾರ್ ಕೋಡ್​ ಅನ್ನು ಸ್ಕ್ಯಾನ್ ಮಾಡುವ ಮೂಲಕ ಪರಿಶೀಲನೆಯನ್ನು ಮಾಡಬಹುದು.

ಆಧಾರ್ ಹೊಂದಿರುವವರ ಒಪ್ಪಿಗೆ ಬಳಿಕ ಆಧಾರ್ ಸಂಖ್ಯೆಯ ಪರಿಶೀಲನಯು ಆಧಾರ್ ಪತ್ರ, ಇ ಆಧಾರ್, ಆಧಾರ್ ಪಿವಿಸಿ ಕಾರ್ಡ್​ನಂತಹ ಸಂಬಂಧಿತ ವ್ಯಕ್ತಿ ನೀಡಿದ ಆಧಾರ್​ ಅನ್ನು ಪರಿಶೀಲಿಸಬೇಕು ಎಂದು ಹೇಳಿದೆ. ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದ ಪ್ರಕಾರ, ಇದು ಆಧಾರ್ ನಕಲಿಯಾಗುವುದನ್ನು ತಡೆಯುತ್ತದೆ. ಹೆಚ್ಚಿನ ಫೋರ್ಜರಿ ಫೋಟೊಶಾಪ್ ಮೂಲಕ ನಡೆಯುತ್ತದೆ.

ಒಬ್ಬ ವ್ಯಕ್ತಿಯು ತನ್ನ ಆಧಾರ್​ನ ಪ್ರತಿಯನ್ನು ರೆಸ್ಟೋರೆಂಟ್​ಗೆ ಅಥವಾ ಬೇರೆಡೆಗೆ ನೀಡಿದ್ದರೆ ವಂಚಕರು ಅಂತಹ ದಾಖಲೆಗಳಲ್ಲಿ ಅವರ ಫೋಟೊವನ್ನು ಇಟ್ಟುಕೊಂಡು ಅದನ್ನು ನಕಲು ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.

ಅಥವಾ ಫೋಟೊಶಾಪ್ ಬಳಸಿ ಬೇರೆಯವರ ಆಧಾರ್ ಕಾರ್ಡ್​ನಲ್ಲಿ ತಮ್ಮ ಫೋಟೋ ಹಾಕಿಕೊಳ್ಳುತ್ತಾರೆ. ನಂತರ ಈ ಮೂಲಕ ಅವರು ತಮ್ಮ ತಪ್ಪು ಯೋಜನೆಗಳನ್ನು ಕಾರ್ಯಗತಗೊಳಿಸುತ್ತಾರೆ. ಆಧಾರ್ ಅನ್ನು ದಾಖಲೆಯಾಗಿ ಸ್ವೀಕರಿಸುವಾಗ ಅನ್ನು ಪರಿಶೀಲಿಸದಿದ್ದರೆ ದೋಷ ಸಂಭವಿಸುವ ಸಾಧ್ಯತೆ ಇದೆ.

ಯುಐಎಡಿಐ ಪ್ರಕಾರ, ಪ್ರತಿ 12 ಅಂಕೆಗಳ ಸಂಖ್ಯೆಯೂ ಆಧಾರ್ ಆಗಿರುವುದಿಲ್ಲ, ಅಂತಹ ಪರಿಸ್ಥಿತಿಯಲ್ಲಿ, ಎಲ್ಲಾ ಸಂಸ್ಥೆಗಳು ಆಧಾರ್ ಅನ್ನು ಪರಿಶೀಲಿಸಲು ಪ್ರಾರಂಭಿಸಿದರೆ , ನಂತರ ವ್ಯಕ್ತಿಯ ಸರಿಯಾದ ಗುರುತನ್ನು ಮಾತ್ರ ವ್ಯವಸ್ಥೆಯಲ್ಲಿ ದಾಖಲಿಸಲಾಗುತ್ತದೆ ಮತ್ತು ಅದರ ದುರುಪಯೋಗವನ್ನು ನಿಲ್ಲಿಸಬಹುದು.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಮತ್ತೊಬ್ಬರ ಹೆಸರಿನಲ್ಲಿದ್ದ ಆಧಾರ್ ಕಾರ್ಡ್​ ಬಳಸಿಕೊಂಡಿದ್ದ. ಈ ಪ್ರಕರಣದ ನಂತರ ಆಧಾರ್ ಕಾರ್ಡ್​ ಬಳಕೆ ಬಗ್ಗೆ ಎಚ್ಚರದಿಂದ ಇರುವಂತೆ ಎಡಿಜಿಪಿ ಅಲೋಕ್ ಕುಮಾರ್ ಸಾರ್ವಜನಿಕರನ್ನು ಎಚ್ಚರಿಸಿದ್ದರು. ಇದೀಗ ಆಧಾರ್ ಸಂಖ್ಯೆ ಕೊಡುವ ವಿಶಿಷ್ಟ ಗುರುತು ಪ್ರಾಧಿಕಾರ ಸಹ ಜನರನ್ನು ಎಚ್ಚರಿಸಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ