AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್ ಯೋಜನೆಯಿಂದ ಸರ್ಕಾರಕ್ಕೆ 2.25 ಲಕ್ಷ ಕೋಟಿ ರೂ ಉಳಿತಾಯ: UIDAI ಸಿಇಒ ಮಾಹಿತಿ

ಆಧಾರ್​ನಿಂದ ಸರ್ಕಾರದ ಬೊಕ್ಕಸಕ್ಕೆ 2.25ಲಕ್ಷ ಕೋಟಿ ರೂ ಲಾಭವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸಿಇಒ ಸೌರಭ್​ ಗಾರ್ಗ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 300ಯೋಜನೆಗಳು ಮತ್ತು ರಾಜ್ಯ ಸರ್ಕಾರದ 400 ಯೋಜನೆಗಳನ್ನು ಆಧಾರ್​ನೊಂದಿಗೆ ಲಿಂಕ್​ ಮಾಡಲಾಗಿದೆ.

ಆಧಾರ್ ಯೋಜನೆಯಿಂದ ಸರ್ಕಾರಕ್ಕೆ 2.25 ಲಕ್ಷ ಕೋಟಿ ರೂ ಉಳಿತಾಯ: UIDAI ಸಿಇಒ ಮಾಹಿತಿ
ಆಧಾರ್ ಕಾರ್ಡ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 16, 2021 | 6:29 PM

Share

ನವದೆಹಲಿ: ಆಧಾರ್​ನಿಂದ ಸರ್ಕಾರದ ಬೊಕ್ಕಸಕ್ಕೆ 2.25ಲಕ್ಷ ಕೋಟಿ ರೂ ಲಾಭವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸಿಇಒ ಸೌರಭ್​ ಗಾರ್ಗ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 300ಯೋಜನೆಗಳು ಮತ್ತು ರಾಜ್ಯ ಸರ್ಕಾರದ 400 ಯೋಜನೆಗಳನ್ನು ಆಧಾರ್​ನೊಂದಿಗೆ ಲಿಂಕ್​ ಮಾಡಲಾಗಿದೆ. ಇದರಿಂದ ಸರ್ಕಾರವು ಫಲಾನುವಿಗಳಿಗೆ ನೇರ ಹಣ ವರ್ಗಾವಣೆ ಮೂಲಕ 2.25ಲಕ್ಷ ಕೋಟಿ ರೂಗಳನ್ನು ಉಳಿತಾಯ ಮಾಡಿದೆ. ರಾಜ್ಯ ಸರ್ಕಾರಗಳ ಉಳಿತಾಯವನ್ನು ಸೇರಿಸಿದರೆ ಇನ್ನೂ ಹೆಚ್ಚಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದುವರೆದು ಮಾತನಾಡಿ, ಆಧಾರ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದನ್ನು ಸುಲಭಗೊಳಿಸಿದೆ. ಕೊರೋನಾ ಸಮಯದಲ್ಲಿ ಫಲಾನುವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಾಯಿತು. ಇದರಿಂದ ಜನ ಹಣಕ್ಕಾಗಿ ಕಷ್ಟಪಡಬೇಕಾದ ಸಂದರ್ಭ ಎದುರಾಗಲಿಲ್ಲ. ಹತ್ತಿರದ ಎಟಿಎಂಗಳಿಗೆ ತೆರಳಿ ಖಾತೆಯಲ್ಲಿರುವ ಹಣವನ್ನು ತೆಗೆದುಕೊಳ್ಳಬಹುದಾಗಿದೆ. ಇದು ಸಾಧ್ಯವಾಗಿರುವುದು ಆಧಾರ್​ ಯೋಜನೆಯಿಂದ ಎಂದು ಹೇಳಿದರು.

2010ರ ಸೆಪ್ಟಂಬರ್ 29ರಂದು ಮೊದಲ ಬಾರಿಗೆ ಆಧಾರ್ ಅನ್ನು ಜನರಿಗೆ ಪರಿಚಯಿಸಲಾಯಿತು. ಈವರೆಗೆ 10 ವರ್ಷಗಳಲ್ಲಿ ಹೊಸ ಮೈಲುಗಲ್ಲನ್ನು ಮುಟ್ಟಿದ್ದೇವೆ. ಹೀಗಾಗಿ ಆಧಾರ್​ ನೋಂದಣಿ ಒಂದು ಸಾಚುರೇಷನ್​ಗೆ ಬಂದಿದೆ. ಮುಂದಿನ 10 ವರ್ಷಗಳಲ್ಲಿ ಏನು ಮಾಡಬಹುದೆಂಬ ಗುರಿ ಹೊಂದಿದ್ದೇವೆ.

ಅವುಗಳಲ್ಲಿ ಮುಖ್ಯವಾಗಿ ಡಿಜಿಟಲೀಕರಣ. ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಹೆಚ್ಚು ಸೌಲಭ್ಯವನ್ನು ಒದಗಿಸುವುದು. ದೇಶದ 6.5 ಲಕ್ಷ ಹಳ್ಳಿಗಳಲ್ಲಿ ಆಧಾರ್ ನೋಂದಣಿಯನ್ನು ಸ್ಮಾರ್ಟ್​ ಫೋನ್​ಗಳಲ್ಲಿ ಮಾಡುವಂತೆ ಮಾಡುವುದು. ಹಾಗೂ ಅದರ ನವೀಕರಣಕ್ಕಾಗಿ ಮೊಬೈಲ್​ ಅಪ್ಲಿಕೇಷನ್​ಗಳ ಅಭಿವೃದ್ಧಿಯತ್ತ ಚಿಂತನೆ ನಡೆಸಿದ್ದೇವೆ. ಇದರೊಂದಿಗೆ ಆಧಾರ್​ನ ಭದ್ರತೆ ಹಾಗೂ ಬಳಕೆದಾರನ ಸುರಕ್ಷತೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

 ಇದನ್ನೂ ಓದಿ:

ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜನರಲ್ ನರವಾಣೆ ಅಧಿಕಾರ ಸ್ವೀಕಾರ

National Tourism Policy: ಪ್ರವಾಸೋದ್ಯಮಕ್ಕೆ ಉತ್ತೇಜನ; ಮೋದಿ ಸರ್ಕಾರದ ರಾಷ್ಟ್ರೀಯ ಪ್ರವಾಸೋದ್ಯಮ ನೀತಿ ನಿರ್ಧಾರ

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ